AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ಹೋರಾಟಕ್ಕೆ ಮಣಿದ ಕಾವೇರಿ ನೀರಾವರಿ ನಿಗಮ; ಕಬಿನಿ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸಲು ಆದೇಶ

ನಾಲೆಗಳಿಗೆ ನೀರು ಹರಿಸುವಂತೆ ರೈತರು ಕಾಡಾ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದ್ದರು. ಇದೀಗ ಹೋರಾಟಕ್ಕೆ ಮಣಿದು 16 ದಿನ ನಾಲೆಗಳಿಗೆ ನೀರು ಹರಿಸಲು ಕಾವೇರಿ ನೀರಾವರಿ ನಿಗಮ ಆದೇಶ ಹೊರಡಿಸಿದೆ. ಇನ್ನು ಮತ್ತೊಂದೆಡೆ ಕೇರಳದ ವೈನಾಡು ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆ ಕಬಿನಿ ಜಲಾಶಯದ ಒಳಹರಿವು ನೀರಿನ ಪ್ರಮಾಣದಲ್ಲಿ ಏರಿಕೆ ಹೆಚ್ಚಾಗಿದೆ.

ರೈತರ ಹೋರಾಟಕ್ಕೆ ಮಣಿದ ಕಾವೇರಿ ನೀರಾವರಿ ನಿಗಮ; ಕಬಿನಿ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸಲು ಆದೇಶ
ಹೋರಾಟ ನಡೆಸಿದ್ದ ರೈತರು
ರಾಮ್​, ಮೈಸೂರು
| Edited By: ಆಯೇಷಾ ಬಾನು|

Updated on:Jul 07, 2024 | 11:27 AM

Share

ಮೈಸೂರು, ಜುಲೈ. 07: ರೈತರ ಹೋರಾಟಕ್ಕೆ ಮಣಿದ ಕಾವೇರಿ ನೀರಾವರಿ ನಿಗಮ ಕಬಿನಿ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸಲು ಆದೇಶ ಹೊರಡಿಸಿದೆ. ನಾಲೆಗಳಿಗೆ ನೀರು ಹರಿಸುವಂತೆ ರೈತರು ಕಾಡಾ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದ್ದರು. ಇದೀಗ ಹೋರಾಟಕ್ಕೆ ಮಣಿದು 16 ದಿನ ನಾಲೆಗಳಿಗೆ ನೀರು ಹರಿಸಲು ಕಾವೇರಿ ನೀರಾವರಿ ನಿಗಮ ಆದೇಶ ಹೊರಡಿಸಿದೆ. ಜು 10ರಿಂದ ಜು 25ರವರೆಗೆ ನಾಲೆಗಳಿಗೆ ನೀರು ಹರಿಸಲು ತೀರ್ಮಾನಿಸಲಾಗಿದೆ.

ಕಬಿನಿ‌ ಎಡದಂಡೆ ಕಬಿನಿ ಬಲದಂಡೆ ನಾಲೆಗಳಿಗೆ ನೀರು ಹರಿಸಲಾಗುತ್ತಿದ್ದು ಜಾನುವಾರುಗಳಿಗೆ ಕುಡಿಯಲು ಬಳಸುವಂತೆ ಮನವಿ ಮಾಡಲಾಗಿದೆ. ಮುಂದೆ ಬೆಳೆಗಳಿಗೂ ನೀರು ಒದಗಿಸುವ ಬಗ್ಗೆ ಕಾವೇರಿ ನೀರಾವರಿ ನಿಗಮ ಭರವಸೆ ನೀಡಿದೆ.

ಕಬಿನಿ ಜಲಾಶಯ ಭರ್ತಿಗೆ ಕೇವಲ ಎರಡೂವರೆ ಅಡಿ ಮಾತ್ರ ಬಾಕಿ‌

ಇನ್ನು ಮತ್ತೊಂದೆಡೆ ಕೇರಳದ ವೈನಾಡು ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆ ಕಬಿನಿ ಜಲಾಶಯದ ಒಳಹರಿವು ನೀರಿನ ಪ್ರಮಾಣದಲ್ಲಿ ಏರಿಕೆ ಹೆಚ್ಚಾಗಿದೆ. ಕಬಿನಿ ಜಲಾಶಯ ಭರ್ತಿಗೆ ಕೇವಲ ಎರಡೂವರೆ ಅಡಿ ಮಾತ್ರ ಬಾಕಿ‌ ಇದೆ. ಶೀಘ್ರದಲ್ಲೇ ಡ್ಯಾಂ ಭರ್ತಿ ಆಗಲಿದೆ. ಹೆಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದ ಕಬಿನಿ ಜಲಾಶಯ ಗರಿಷ್ಠ ಮಟ್ಟ: 2284, ಇಂದಿನ ಮಟ್ಟ: 2281.56, ಒಳಹರಿವು: 5039 ಕ್ಯೂಸೆಕ್, ಹೊರಹರಿವು: 3250 ಕ್ಯೂಸೆಕ್ ಇದೆ.

ಇದನ್ನೂ ಓದಿ: 24 ಗಂಟೆಯಲ್ಲಿ ತುಂಗಭದ್ರೆಗೆ ಹರಿದುಬಂತು ಬರೋಬ್ಬರಿ 4 ಟಿಎಂಸಿ ನೀರು, ರೈತರು ಫುಲ್ ಖುಷ್

ಕಳೆದ ವರ್ಷ ಇದೇ ಅವಧಿಯಲ್ಲಿ ಜಲಾಶಯದಲ್ಲಿ 2256.69 ಅಡಿಗಳಷ್ಟು ನೀರು ಸಂಗ್ರಹವಾಗಿತ್ತು. ಜಲಾಶಯಕ್ಕೆ 5509 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ ನದಿಗೆ 4,000 ಕ್ಯೂಸೆಕ್ ನೀರು ಹರಿಯ ಬಿಡಲಾಗುತ್ತಿದೆ.

ಚಾರಣ, ಸಾಹಸ ಯಾತ್ರೆಗೆ ತಾತ್ಕಾಲಿಕ ಬ್ರೇಕ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಕಾರಣ ಜಿಲ್ಲಾ ವ್ಯಾಪ್ತಿಯ ಶಿಖರಗಳಲ್ಲಿ ಚಾರಣಕ್ಕೆ ನಿಷೇಧ ಹೇರಲಾಗಿದೆ. ಜಿಲ್ಲೆಯಲ್ಲಿ ಹೆಚ್ಚಾದ ಭೂ ಕುಸಿತ , ಗುಡ್ಡ ಕುಸಿತ ಪ್ರಕರಣಗಳು, ಇನ್ನಷ್ಟು ಪ್ರಾಕೃತಿಕ ವಿಕೋಪ ಸಂಭವಿಸುವ ಆತಂಕದ ಹಿನ್ನೆಲೆ ಚಾರಣಕ್ಕೆ ತೆರೆಳದಂತೆ ನಿಷೇಧಿಸಲಾಗಿದೆ. ಇನ್ನು ಮಳೆಗಾಲ ಮುಗಿಯುವ ವರೆಗೆ ಹೋಮ್ ಸ್ಟೇ, ರೆಸಾರ್ಟ್ , ಸೇರಿದಂತೆ ಅರಣ್ಯ ಇಲಾಖೆ ಏರ್ಪಡಿಸುವ ಟ್ರಕ್ಕಿಂಗ್, ಸಾಹಸ ಯಾತ್ರೆಗೆ ನಿಷೇಧಿಸಿ ದಕ್ಷಿಣ ಕನ್ನಡ ಡಿಸಿ ಆದೇಶ ಹೊರಡಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:24 am, Sun, 7 July 24

Follow Us
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ