AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಡಪ್ರಭು ಕೆಂಪೇಗೌಡ ಜಯಂತಿಗೆ ಹಾಕಿರುವ ಫ್ಲೆಕ್ಸ್​ನಲ್ಲಿ ಎಡವಟ್ಟು; ಕೆಂಪೇಗೌಡರ ಬದಲಿಗೆ ಮದಕರಿ ನಾಯಕ ಚಿತ್ರ

ಫ್ಲೆಕ್ಸ್ನಲ್ಲಿ ಕೆಂಪೇಗೌಡ ಚಿತ್ರಕ್ಕೆ ಬದಲಾಗಿ ಮದಕರಿ ನಾಯಕ ಚಿತ್ರ ಬಳಕೆ ಮಾಡಲಾಗಿದೆ. ತಪ್ಪು ಅರಿವಾಗುತ್ತಿದ್ದಂತೆ ಅಧಿಕಾರಿಗಳು ತಕ್ಷಣ ಫ್ಲೆಕ್ಸ್ ತೆರವುಗೊಳಿಸಿದ್ದಾರೆ. ಫ್ಲೆಕ್ಸ್ ಇಲ್ಲದೆ ಕೆಂಪೇಗೌಡ ಜಯಂತಿ ಕಾರ್ಯಕ್ರಮ ನೆರವೇರಿದೆ.

ನಾಡಪ್ರಭು ಕೆಂಪೇಗೌಡ ಜಯಂತಿಗೆ ಹಾಕಿರುವ ಫ್ಲೆಕ್ಸ್​ನಲ್ಲಿ ಎಡವಟ್ಟು; ಕೆಂಪೇಗೌಡರ ಬದಲಿಗೆ ಮದಕರಿ ನಾಯಕ ಚಿತ್ರ
ನಾಡಪ್ರಭು ಕೆಂಪೇಗೌಡ ಜಯಂತಿಗೆ ಹಾಕಿರುವ ಫ್ಲೆಕ್ಸ್ನಲ್ಲಿ ಎಡವಟ್ಟು
TV9 Web
| Updated By: ಆಯೇಷಾ ಬಾನು|

Updated on:Jun 27, 2022 | 4:11 PM

Share

ಮೈಸೂರು: ಹೆಚ್.ಡಿ.ಕೋಟೆ ತಾಲೂಕಿನಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿಗೆ(Kempegowda Jayanti) ಹಾಕಿರುವ ಫ್ಲೆಕ್ಸ್ನಲ್ಲಿ ಎಡವಟ್ಟಾಗಿದೆ. ಫ್ಲೆಕ್ಸ್ನಲ್ಲಿ ಕೆಂಪೇಗೌಡ ಚಿತ್ರಕ್ಕೆ ಬದಲಾಗಿ ಮದಕರಿ ನಾಯಕ ಚಿತ್ರ ಬಳಕೆ ಮಾಡಲಾಗಿದೆ. ತಪ್ಪು ಅರಿವಾಗುತ್ತಿದ್ದಂತೆ ಅಧಿಕಾರಿಗಳು ತಕ್ಷಣ ಫ್ಲೆಕ್ಸ್ ತೆರವುಗೊಳಿಸಿದ್ದಾರೆ. ಫ್ಲೆಕ್ಸ್ ಇಲ್ಲದೆ ಕೆಂಪೇಗೌಡ ಜಯಂತಿ ಕಾರ್ಯಕ್ರಮ ನೆರವೇರಿದೆ. ಹಾಗೂ ಕಾರ್ಯಕ್ರಮಕ್ಕೆ ತಡವಾಗಿ ಆಗಮಿಸಿದ ಶಾಸಕ ಅನಿಲ್ ಚಿಕ್ಕಮಾದು ವಿರುದ್ಧ ಅಭಿಮಾನಿಗಳು ಆಕ್ರೋಶ ಹೊರ ಹಾಕಿದ್ದಾರೆ. ತಾಲೂಕು ಆಡಳಿತದ ವಿರುದ್ಧ ಧಿಕ್ಕಾರ ಕೂಗಿದ್ದಾರೆ.

ಹೆಚ್.ಡಿ.ಕೋಟೆ ಮಿ‌ನಿ ವಿಧಾನಸೌಧದ ಕಾರ್ಯಕ್ರಮದಲ್ಲಿ ಕೆಲ ಕ್ಷಣ ಗೊಂದಲ ಉಂಟಾಗಿತ್ತು. ಬೆಳಗಿನ 10 ಗಂಟೆಗೆ ನಿಗದಿಯಾಗಿದ್ದ ಕಾರ್ಯಕ್ರಮ 11.30ಕ್ಕೆ ಆರಂಭವಾಗಿದೆ. ಶಾಸಕರಿಲ್ಲದೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ 10 ಗಂಟೆ ಕಾರ್ಯಕ್ರಮಕ್ಕೆ 12.20ಕ್ಕೆ ಶಾಸಕ ಅನಿಲ್ ಚಿಕ್ಕಮಾದು ಆಗಮಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು: ಜಿಎಸ್​​ಟಿ ಕಚೇರಿ ಕಟ್ಟಡದಿಂದ ಜಿಗಿದು ಆಫೀಸ್​ ಬಾಯ್ ಆತ್ಮಹತ್ಯೆ

ಮೈಸೂರಿನಲ್ಲಿ ಕೆಂಪೇಗೌಡರ ಪ್ರತಿಮೆ ಮೆರವಣಿಗೆ ಮೈಸೂರು: ನಾಡಪ್ರಭು ಕೆಂಪೇಗೌಡರ ಜಯಂತಿ ಹಿನ್ನೆಲೆ ನಗರ ಕೋಟೆ ಆಂಜನೇಯ ದೇವಸ್ಥಾನದ ಬಳಿ ಬೆಳ್ಳಿ ರಥದಲ್ಲಿ ಕೆಂಪೇಗೌಡರ ಪ್ರತಿಮೆ ಮೆರವಣಿಗೆಗೆ ಸಂಸದ ಪ್ರತಾಪ್ ಸಿಂಹ, ಶಾಸಕ ಜಿ.ಟಿ.ದೇವೇಗೌಡ ಚಾಲನೆ ನೀಡಿದ್ದಾರೆ. ಕೆಂಪೇಗೌಡ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಲಾಗಿದೆ. ಡೊಳ್ಳು, ಟಮಟೆ, ವೀರಗಾಸೆ, ಹುಲಿವೇಷ ಸೇರಿ ಹಲವು ಸಾಂಸ್ಕೃತಿಕ ಕಲಾತಂಡಗಳು ಭಾಗಿಯಾಗಿವೆ. ಕೋಟೆ ಆಂಜನೇಯಸ್ವಾಮಿ ದೇವಾಲಯದಿಂದ ಕಲಾಮಂದಿರದವರೆಗೆ ಮೆರವಣಿಗೆ ನಡೆಯಲಿದೆ.

Published On - 4:11 pm, Mon, 27 June 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ