AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಡಿಮಠ ಸ್ವಾಮೀಜಿ ಭಯಾನಕ ಭವಿಷ್ಯ: ಭಾರತಕ್ಕೆ ದೊಡ್ಡ ಗಂಡಾಂತರ, ರಾಜ್ಯ-ಕೇಂದ್ರದಲ್ಲಿ ಅಧಿಕಾರದಲ್ಲಿರುವವರಿಗೆ ತೊಂದರೆ!

Kodi Mutt Swamiji Prediction; ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭಾರತಕ್ಕೆ ಬಹುದೊಡ್ಡ ಗಂಡಾಂತರ ಎದುರಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ರಾಜ್ಯ-ಕೇಂದ್ರದಲ್ಲಿ ಅಧಿಕಾರದಲ್ಲಿರುವವರಿಗೆ ತೊಂದರೆ ಎದುರಾಗಲಿದೆ ಎಂದೂ ಅವರು ಹೇಳಿದ್ದು, ಯುದ್ಧಗಳು ಮುಂದುವರಿಯಲಿವೆ, ಹವಾಮಾನ ವೈಪರೀತ್ಯಗಳು ಹೆಚ್ಚಾಗಲಿವೆ ಹಾಗೂ ರಾಜಕೀಯ ಅಸ್ಥಿರತೆ ಉಂಟಾಗಲಿದೆ ಎಂದಿದ್ದಾರೆ. ಸ್ವಾಮೀಜಿ ಭವಿಷ್ಯದ ವಿಡಿಯೋ ಹಾಗೂ ವಿವರ ಇಲ್ಲಿದೆ.

ಕೋಡಿಮಠ ಸ್ವಾಮೀಜಿ ಭಯಾನಕ ಭವಿಷ್ಯ: ಭಾರತಕ್ಕೆ ದೊಡ್ಡ ಗಂಡಾಂತರ, ರಾಜ್ಯ-ಕೇಂದ್ರದಲ್ಲಿ ಅಧಿಕಾರದಲ್ಲಿರುವವರಿಗೆ ತೊಂದರೆ!
ಕೋಡಿಮಠ ಸ್ವಾಮೀಜಿ
ರಾಮ್​, ಮೈಸೂರು
| Edited By: |

Updated on:Jul 15, 2025 | 3:28 PM

Share

ಮೈಸೂರು, ಜುಲೈ 15: ಭಾರತಕ್ಕೆ ಬಹುದೊಡ್ಡ ಗಂಡಾಂತರ ಕಾದಿದೆ. ವಿಶ್ವವೇ ತಿರುಗಿ ನೋಡುವ ಮಟ್ಟಿನ ಆಘಾತ ಎದುರಾಗಲಿದೆ ಎಂದು ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ (Kodi Mutt Swamiji) ಭವಿಷ್ಯ ನುಡಿದಿದ್ದಾರೆ. ಮೈಸೂರಿನ ನಮನ್ ಫೌಂಡೇಶನ್ ವತಿಯಿಂದ ನೂತನವಾಗಿ ನಿರ್ಮಾಣವಾಗಲಿರುವ ಧ್ಯಾನ ಕೇಂದ್ರದ ಸ್ಥಳಕ್ಕೆ ಭೇಟಿ ನೀಡಿದ ಅವರು, ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರದಲ್ಲಿರುವವರಿಗೆ ಮುಂದಿನ ದಿನಗಳಲ್ಲಿ ತೊಂದರೆ ಎದುರಾಗಲಿದೆ ಎಂದು ಹೇಳಿದರು. ಮುಂದಾಗುವ ಸಮಸ್ಯೆಗಳನ್ನು ಅರಿತುಕೊಂಡು ಈಗಲೇ ಪರಿಹಾರ ಮಾಡಿಕೊಂಡರೆ ಸೂಕ್ತ. ಇಲ್ಲವಾದಲ್ಲಿ ಸಮಸ್ಯೆ ಇದೆ ಎಂದು ಅವರು ಹೇಳಿದ್ದಾರೆ.

ಅರಸನ ಅರಮನೆಗೆ ಕಾರ್ಮೋಡ ಕವಿದೀತು: ಕೋಡಿ ಶ್ರೀ

ಸಾಮಾನ್ಯವಾಗಿ ಯುಗಾದಿ ಮತ್ತು ಸಂಕ್ರಾಂತಿ ಸಂದರ್ಭದಲ್ಲಿ ಮುನ್ಸೂಚನೆ ಫಲಗಳನ್ನು ತಿಳಿಸಲಾಗುತ್ತದೆ. ಯುಗಾದಿ ಸಂದರ್ಭದಲ್ಲಿ ಮಳೆ, ಬೆಳೆ ಇತ್ಯಾದಿಗಳ ಬಗ್ಗೆ ಮುನ್ಸೂಚನೆ ನೀಡಲಾಗುತ್ತದೆ. ಸಂಕ್ರಾಂತಿ ಸಮಯದಲ್ಲಿ ಆಡಳಿತ, ರಾಜಕಾರಣ ಇತ್ಯಾದಿಗಳ ಫಲ ನೋಡಿಕೊಂಡು ಹೇಳುತ್ತೇವೆ. ಸಂಕ್ರಾಂತಿವರೆಗೆ ಏನು ತೊಂದರೆ ಇಲ್ಲ. ಆಮೇಲೆ, ಅರಸನ ಅರಮನೆಗೆ ಕಾರ್ಮೋಡ ಕವಿದೀತು ಎಂದು ಕೊಡಿ ಶ್ರೀ ಹೇಳಿದರು.

ಕೊಡಿ ಶ್ರೀಗಳ ಭವಿಷ್ಯವಾಣಿ ವಿಡಿಯೋ ಇಲ್ಲಿದೆ

ಇದನ್ನೂ ಓದಿ
Image
ಚಿಕ್ಕತಿರುಪತಿ ದೇಗುಲದಲ್ಲಿ ಆಹಾರ ಸೇವಿಸಿ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ
Image
ಕೂಡಲಸಂಗಮ ಪೀಠಕ್ಕೆ ಬೀಗ, ಈವರೆಗೆ ಏನೇನಾಯ್ತು? ಇಲ್ಲಿದೆ ಸಮಗ್ರ ವಿವರ
Image
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
Image
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ

ಯುದ್ಧಗಳು ಮುಂದುವರೆಯಲಿವೆ. ಮನಸುಗಳು ನಿಂತಾಗ ಮಾತ್ರ ಯುದ್ಧ ನಿಲ್ಲುತ್ತದೆ. ಮನುಷ್ಯ ಮೌನವಾಗಿದ್ದರೆ ಹೆಚ್ಚು ಜ್ಞಾನ ಸಂಪಾದನೆ ಮಾಡಬಹುದು. 84 ಲಕ್ಷ ಜೀವ ರಾಶಿಗಳಲ್ಲಿ ಆತ್ಮ ಕಡೆಯದಾಗಿದ್ದು, ಮಾನವನಿಗೆ ಜ್ಞಾನ ಹಾಗೂ ವಿವೇಕ ನೀಡಲಾಗಿದೆ. ಇದನ್ನು ಸನ್ಮಾರ್ಗದಲ್ಲಿ ಬಳಸಿಕೊಂಡಾಗ ಮೋಕ್ಷ ಪ್ರಾಪ್ತಿಯಾಗುತ್ತದೆ. ಧ್ಯಾನ ಕೇಂದ್ರಗಳು ಅಧ್ಯಾತ್ಮಿಕ ಹಾಗೂ ಧಾರ್ಮಿಕ ಬೆಳವಣಿಗೆ ಹೆಚ್ಚು ಸಹಕಾರಿಯಾಗಲಿದೆ ಎಂದು ಕೋಡಿಮಠ ಸ್ವಾಮೀಜಿ ಹೇಳಿದರು.

ಪ್ರಕೃತಿ ಹಾಗೂ ವೃಕ್ಷಗಳಿಗೆ ತನ್ನದೇ ಆದ ಅಘಾದ ಶಕ್ತಿ ಇದೆ. ಪಂಚತಂತ್ರ ವೃಕ್ಷಗಳಲ್ಲಿ ಹೆಚ್ಚು ಆಮ್ಲಜನಕ ಉತ್ಪಾದನೆಯಾಗುತ್ತದೆ. ಅವು ದೈವ ವೃಕ್ಷಗಳಾಗಿವೆ ಎಂದು ಸ್ವಾಮೀಜಿ ಹೇಳಿದರು.

ಮೂರು ವಾರಗಳ ಹಿಂದಷ್ಟೇ ಅವರು ಇದೇ ರೀತಿಯ ಭವಿಷ್ಯವನ್ನು ಹಾಸನದಲ್ಲಿ ಹೇಳಿದ್ದರು. ಮೇಘಸ್ಫೋಟ, ಜಲಪ್ರಳಯ ಹಾಗೂ ವಾಯುವಿನಿಂದ ಆಪತ್ತು ಬರುತ್ತದೆ. ಮನುಷ್ಯ ಓಡಾಡುತ್ತಲೇ ಸಾಯುತ್ತಾನೆ. ಜನ ಜೀವನ ಅಸ್ಥಿರಗೊಳ್ಳಲಿದೆ ಎಂದು ಹೇಳಿದ್ದರು.

ಇದನ್ನೂ ಓದಿ: ರಾಜ್ಯ, ದೇಶಕ್ಕೆ ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭಯಾನಕ ಭವಿಷ್ಯ

ಮೇ ತಿಂಗಳಲ್ಲಿ ಬೆಳಗಾವಿಯಲ್ಲಿ ಮಾತನಾಡಿದ್ದ ಸ್ವಾಮೀಜಿ, ಲೋಕಕ್ಕೆ ಜಲ, ವಾಯು ಗಂಡಾಂತರ ಎದುರಾಗಲಿದೆ ಎಂದಿದ್ದರು. ಅಷ್ಟೇ ಅಲ್ಲದೆ, ಹಿಮಾಲಯ ಕರಗಿಹೋಗಲಿದೆ. ಮೇಘಸ್ಫೋಟ ಆಗುವ ಸಾಧ್ಯತೆಗಳಿವೆ. ಭೂಕಂಪಗಳು ಸಂಭವಿಸಲಿವೆ ಎಂದಿದ್ದರು. ರಾಜಕೀಯ ಮುಖಂಡರಿಗೆ ಸಾವಿನ ಭಯ ಇದೆ ಎಂದು ಹೇಳಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:07 pm, Tue, 15 July 25

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ