AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ 800 ರೂ. ಟೋಲ್ ಸಂಗ್ರಹ ಆರೋಪ: ತಾಕತ್​ ಇದ್ರೆ ಫ್ರೀ ಮಾಡಿ ಎಂದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ 800 ರೂ. ಟೋಲ್​ ವಿಧಿಸಲಾಗುತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಆರೋಪ ಮಾಡಿದ್ದಾರೆ.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ 800 ರೂ. ಟೋಲ್ ಸಂಗ್ರಹ ಆರೋಪ: ತಾಕತ್​ ಇದ್ರೆ ಫ್ರೀ ಮಾಡಿ ಎಂದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ
ಪ್ರಾತಿನಿಧಿಕ ಚಿತ್ರ, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ
TV9 Web
| Edited By: |

Updated on:Feb 10, 2023 | 3:52 PM

Share

ಮೈಸೂರು: ಬೆಂಗಳೂರು-ಮೈಸೂರು ಹೆದ್ದಾರಿ (Bengaluru-Mysuru highway) ಯಲ್ಲಿ 800 ರೂ. ಟೋಲ್ (Toll Collection) ವಿಧಿಸಲಾಗುತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಆರೋಪ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಎಕ್ಸ್​ಪ್ರೆಸ್ ಹೈವೇನಲ್ಲಿ ಎರಡು ಕಡೆ ಟೋಲ್​ಗಳಿವೆ. ಹೋಗಲು 400 ಮತ್ತು ಬರಲು 400 ರೂ. ಕೊಡಬೇಕಾಗುತ್ತದೆ ಎಂದು ನನಗೆ ಮಾಹಿತಿಯಿದೆ. ತಾಕತ್ ಇದ್ದರೆ ಹೈವೇನಲ್ಲಿ ಟೋಲ್ ಫ್ರೀ ಮಾಡಿ. ಸಾವಿರಾರು ಕೋಟಿ ವೆಚ್ಚದಲ್ಲಿ ರಸ್ತೆ ನಿರ್ಮಿಸಿ ಟೋಲ್ ಯಾಕೆ ವಿಧಿಸುತ್ತೀರಿ ಎಂದು ಪ್ರಶ್ನಿಸಿದರು. ಈಗ ಮೋದಿ ಮೋದಿ ಎಂದು ಕ್ರೆಡಿಟ್‌ ತೆಗೆದುಕೊಳ್ಳುತ್ತಿದ್ದೀರಿ. ಜನರ ಜೇಬು ಸುಡಲಾರಂಭಿಸಿದ ಮೇಲೆ ಬಂಡವಾಳ ಬಯಲಾಗುತ್ತದೆ‌ ಎಂದು ಆರೋಪಿಸಿದರು.

ಮೋದಿ, ಅಂಬಾನಿ, ಅದಾನಿ ಇರುವವರೆಗೂ ದೇಶ ಉದ್ದಾರವಾಗಲ್ಲ

ಸಂಸತ್ ಅಧಿವೇಶನದಲ್ಲಿ ಪ್ರತಿಪಕ್ಷ ನಾಯಕರ‌ ಪ್ರಶ್ನೆಗಳಿಗೆ ಪ್ರಧಾನಿ ಮೋದಿ ಸಮರ್ಪಕ ಉತ್ತರ ಕೊಟ್ಟಿಲ್ಲ. ಬೇಡದ ವಿಚಾರಗಳನ್ನು ಪ್ರಸ್ತಾಪಿಸಿ ಪ್ರತಿಪಕ್ಷ ನಾಯಕರನ್ನು ಟೀಕಿಸಲಾಗಿದೆ. ಅದಾನಿ ಸಂಸ್ಥೆಯ ಷೇರುಗಳ ಕುಸಿತದಿಂದ 10 ಲಕ್ಷ ಕೋಟಿ ನಷ್ಟವಾಗಿದೆ. ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ ಅದಾನಿ 30ನೇ ಸ್ಥಾನಕ್ಕೆ ಕುಸಿದಿದ್ದಾನೆ. ಅದಾನಿ ರಕ್ಷಣೆಗೆ ಮೋದಿ ಸರ್ಕಾರ ಮುಂದಾಗಿದೆ. ಹಾಗಾಗಿಯೇ ಅದಾನಿ ಪ್ರಕರಣದ ತನಿಖೆಗೆ ಜಂಟಿ ಸಂಸದೀಯ ಸಮಿತಿ ರಚನೆ ಮಾಡಿಲ್ಲ. ಮೋದಿ ಚುನಾವಣೆ ಎದುರಿಸಲು ಅದಾನಿ ಹಣ ಕೊಟ್ಟಿದ್ದಾನೆ‌‌. ಮೋದಿ, ಅಂಬಾನಿ, ಅದಾನಿ ಇರುವವರೆಗೂ ದೇಶ ಉದ್ದಾರವಾಗಲ್ಲ, ಇದು ದೇಶದ ದುರಂತವಾಗಿದೆ ಎಂದು ಎಂ.ಲಕ್ಷ್ಮಣ ಹೇಳಿದರು.

ಇದನ್ನೂ ಓದಿ: Toll Collection: ಐದು ವರ್ಷದಲ್ಲಿ ಕರ್ನಾಟಕ ವಾಹನ ಸವಾರರು ಪಾವತಿಸಿದ ಟೋಲ್ ಮೊತ್ತ ಎಷ್ಟು?

ಫಾಸ್​ಟ್ಯಾಗ್ ಎಫೆಕ್ಟ್

ಎರಡು ವರ್ಷಗಳ ಹಿಂದೆ ಚಾಲನೆಗೆ ಬಂದ ಫಾಸ್​ಟ್ಯಾಗ್ (FASTag) ವ್ಯವಸ್ಥೆಯಿಂದಾಗಿ ಟೋಲ್ ಸಂಗ್ರಹ ಗಣನೀಯವಾಗಿ ಹೆಚ್ಚಳವಾಗಿದೆ. ವಾಹನಗಳಿಗೆ ಫಾಸ್​ಟ್ಯಾಗ್ ಅಳವಡಿಸುವುದರಿಂದ ಟೋಲ್ ಬೂತ್​ಗಳಲ್ಲಿ ಸ್ವಯಂಚಾಲಿತವಾಗಿ ಟೋಲ್ ಹಣ ಕಡಿತಗೊಳ್ಳುವುದಲ್ಲದೇ ಹೆಚ್ಚು ಹೊತ್ತು ಕ್ಯೂ ನಿಲ್ಲುವ ಪರಿಸ್ಥಿತಿಯೂ ನಿಯಂತ್ರಣಕ್ಕೆ ಬರುತ್ತದೆ. ಫಾಸ್​ಟ್ಯಾಗ್ ಬಂದ ಬಳಿಕ ಸಂಗ್ರಹವಾಗುತ್ತಿರುವ ಟೋಲ್ ಹಣ ಶೇ. 20ರಷ್ಟಾದರೂ ಹೆಚ್ಚಾಗಿರುವುದು ಅಂಕಿ ಅಂಶಗಳಿಂದಲೇ ಗೊತ್ತಾಗುತ್ತದೆ.

ಐದು ವರ್ಷದಲ್ಲಿ ಅತಿಹೆಚ್ಚು ಟೋಲ್ ಸಂಗ್ರಹವಾದ 5 ರಾಜ್ಯಗಳು

ಉತ್ತರಪ್ರದೇಶ: 17,242.9 ಕೋಟಿ ರೂ

ರಾಜಸ್ಥಾನ: 16,565.9 ಕೋಟಿ ರೂ

ಗುಜರಾತ್: 15,332.2 ಕೋಟಿ ರೂ

ಮಹಾರಾಷ್ಟ್ರ: 13,043.5 ಕೋಟಿ ರೂ

ತಮಿಳುನಾಡು: 12,738 ಕೋಟಿ ರೂ

ಕರ್ನಾಟಕ: 9,982.6 ಕೋಟಿ ರೂ

ಕರ್ನಾಟಕದಲ್ಲಿ 5 ವರ್ಷದಲ್ಲಿ ಸಂಗ್ರಹವಾದ ಟೋಲ್ ಹಣ

2018-19: 1,830.1 ಕೋಟಿ ರೂ

2019-20: 1,814.3 ಕೋಟಿ ರೂ

2020-21; 1,800.1 ಕೋಟಿ ರೂ

2021-22: 2,269.2 ಕೋಟಿ ರೂ

2022-23: 2,268.9 ಕೋಟಿ ರೂ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:51 pm, Fri, 10 February 23

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ