AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಮಾತಾಡಿದ್ದಕ್ಕೆ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣಗೆ ಬೆದರಿಕೆ ಕರೆ: ಕಾಂಗ್ರೆಸ್​ ದೂರು

ಇತ್ತೀಚೆಗೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಮಾತಾಡಿದ್ದಕ್ಕೆ ಜೆಡಿಎಸ್ ಕಾರ್ಯಕರ್ತರಿಂದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣಗೆ ಬೆದರಿಕೆ ಕರೆ ಬರುತ್ತಿದೆ ಎಂದು ಆರೋಪಿಸಲಾಗಿದೆ. ಹಾಗಾಗಿ ಬೆದರಿಕೆ ಕರೆ ಮಾಡಿದವರ ವಿರುದ್ಧ ಕ್ರಮ‌ ಕೈಗೊಳ್ಳುವಂತೆ ಕಮಿಷನರ್ ರಮೇಶ್ ಬಾನೋತ್​ಗೆ ಕಾಂಗ್ರೆಸ್ ನಿಯೋಗ ಮನವಿ ಮಾಡಿದೆ.

ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಮಾತಾಡಿದ್ದಕ್ಕೆ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣಗೆ ಬೆದರಿಕೆ ಕರೆ: ಕಾಂಗ್ರೆಸ್​ ದೂರು
ಕಮಿಷನರ್​ಗೆ ಕಾಂಗ್ರೆಸ್ ನಿಯೋಗ ಮನವಿ
ರಾಮ್​, ಮೈಸೂರು
| Edited By: |

Updated on: Oct 28, 2023 | 4:45 PM

Share

ಮೈಸೂರು, ಅಕ್ಟೋಬರ್​​​​ 28: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ (M Lakshman) ಗೆ ಬೆದರಿಕೆ ಕರೆ ಬರುತ್ತಿರುವ ಹಿನ್ನೆಲೆ ಮೈಸೂರು ಪೊಲೀಸ್ ಆಯುಕ್ತ ಬಿ.ರಮೇಶ್​ಗೆ ಕಾಂಗ್ರೆಸ್​ ದೂರು ನೀಡಿದೆ. ಇತ್ತೀಚೆಗೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಮಾತಾಡಿದ್ದಕ್ಕೆ ಜೆಡಿಎಸ್ ಕಾರ್ಯಕರ್ತರಿಂದ ಬೆದರಿಕೆ ಕರೆ ಬರುತ್ತಿದೆ ಎಂದು ಆರೋಪಿಸಲಾಗಿದೆ. ಹಾಗಾಗಿ ಬೆದರಿಕೆ ಕರೆ ಮಾಡಿದವರ ವಿರುದ್ಧ ಕ್ರಮ‌ ಕೈಗೊಳ್ಳುವಂತೆ ಕಮಿಷನರ್ ರಮೇಶ್ ಬಾನೋತ್​ಗೆ ಕಾಂಗ್ರೆಸ್ ನಿಯೋಗ ಮನವಿ ಮಾಡಿದೆ.

ದೂರಿನಲ್ಲೇನಿದೆ?

ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ  ಡಿ.ಕೆ.ಶಿವಕುಮಾರ್​ ವಿರುದ್ಧ ಆಧಾರ ರಹಿತ ಆರೋಪಗಳನ್ನು ಮಾಡುತ್ತಿರುವುದರ ಬಗ್ಗೆ ಪ್ರತಿಕ್ರಿಯಸಲು ಅ. 26ರಂದು ಮಧ್ಯಾನ್ಹ 1 ಗಂಟೆಗೆ ಜಿಲ್ಲಾ ಕಾಂಗ್ರೆಸ್, ಗ್ರಾಮಾಂತರ ಮತ್ತು ನಗರ ಅಧ್ಯಕ್ಷರುಗಳ ನೇತೃತ್ವದಲ್ಲಿ ಮೈಸೂರಿನ ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಟಿ ನಡೆಸಿ, ಕುಮಾರಸ್ವಾಮಿಯವರ ಆರೋಪಗಳ ಬಗ್ಗೆ ಸ್ಪಷ್ಟಿಕರಣ ನೀಡಲಾಗಿದೆ.

ಇದನ್ನೂ ಓದಿ: ಎಐಸಿಸಿ ಅಧ್ಯಕ್ಷರಾಗಿ ಒಂದು ವರ್ಷ ಪೂರೈಸಿದ ಮಲ್ಲಿಕಾರ್ಜುನ ಖರ್ಗೆ: ಹೇಳಿದ್ದಿಷ್ಟು

ಕುಮಾರಸ್ವಾಮಿರವರ ವಿರುದ್ಧ ಯಾವ ಕಾರಣಕ್ಕೂ ಮಾತನಾಡಬಾರದು, ಮಾತನಾಡಿದರೆ ನೆಟ್ಟಗಿರುವುದಿಲ್ಲ ಎಂದು ಅ. 27 ರಂದು ಸಾಯಂಕಾಲ 3.15ಕ್ಕೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣಗೆ ಬೆದರಿಕೆ ಕರೆ ಹಾಕಲಾಗಿದೆ. ಇದಲ್ಲದೆ ಅ. 28 ರಂದು ಬೆಳಿಗ್ಗೆ 10 ಗಂಟೆಗೆ ಕಲಾಮಂದಿರ ಆವರಣದಿಂದ ಮುಂದೆ ಕೆಲ ಜೆ.ಡಿ.ಎಸ್.ಮುಖಂಡರುಗಳು ಮತ್ತು ಹೆಚ್.ಡಿ.ಕುಮಾರಸ್ವಾಮಿಯವರ ಅಭಿಮಾನಿಗಳು ಎಂ.ಲಕ್ಷ್ಮಣರವರು ಕುಮಾರಸ್ವಾಮಿಯವರನ್ನು ಪತ್ರಿಕಾಗೋಷ್ಟಿಯಲ್ಲಿ ಬಾಯಿಗೆ ಬಂದಂತೆ ಮಾತನಾಡಿರುತ್ತಿದ್ದಾರೆ. ಇವರಿಗೆ ಬುದ್ಧಿ ಕಲಿಸಬೇಕು. ಇವರ ಮನೆಗೆ ಹೋಗೋಣ ಹಾಗೂ ಇವರು ವಾಕಿಂಗ್ ಮಾಡುವಾಗ ಆಟ್ಯಾಕ್ ಮಾಡೋಣ ಎಂದು ಮಾತನಾಡಿಕೊಳ್ಳುತ್ತಿರುವುದರ ಬಗ್ಗೆ ಅಲ್ಲೆ ಇದ್ದ ಒಬ್ಬ ವ್ಯಕ್ತಿ ನನಗೆ ಮಾಹಿತಿ ನೀಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: PSI ಪರೀಕ್ಷೆ ಹಗರಣ ಮಾಸುವ ಮುನ್ನವೇ ಕಲಬುರಗಿಯಲ್ಲಿ ಮತ್ತೊಂದು ಹಗರಣ ಬೆಳಕಿಗೆ

ನಾನು ಕಾಂಗ್ರೆಸ್ ಪಕ್ಷದ ಅಧಿಕೃತ ರಾಜ್ಯ ವಕ್ತಾರ, ಪಕ್ಷವನ್ನು ಮತ್ತು ಮುಖಂಡರುಗಳನ್ನು ಮತ್ತು ಸರ್ಕಾರದ ಬಗ್ಗೆ ಆಧಾರ ರಹಿತ ಆರೋಪ ಮಾಡಿದಾಗ ಇಂತಹ ಆರೋಪಗಳಿಗೆ ಉತ್ತರ ಕೊಡುವುದೇ ವಕ್ತಾರನ ಕೆಲಸ. ಪ್ರಜಾಪ್ರಭುತ್ವದಲ್ಲಿ ಇಂತಹ ಬೆದರಿಕೆಗಳು ಮತ್ತು ಗುಂಡಾ ವರ್ತನೆಗಳಿಗೆ ಅವಕಾಶವಿರುವುದಿಲ್ಲ. ಆದ್ದರಿಂದ ಬೆದರಿಕೆ ಹಾಕುತ್ತಿರುವ ವ್ಯಕ್ತಿಗಳ ವಿರುದ್ಧ FIR ದಾಖಲಿಸಿ ಸೂಕ್ತ ಕ್ರಮ ಜರುಗಿಸಬೇಕು ಮತ್ತು ನನಗೆ ಸೂಕ್ತ ಭದ್ರತೆ ನೀಡುವಂತೆ ಎಂ.ಲಕ್ಷ್ಮಣ ಅವರು ಮನವಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್