AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಮಾತಾಡಿದ್ದಕ್ಕೆ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣಗೆ ಬೆದರಿಕೆ ಕರೆ: ಕಾಂಗ್ರೆಸ್​ ದೂರು

ಇತ್ತೀಚೆಗೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಮಾತಾಡಿದ್ದಕ್ಕೆ ಜೆಡಿಎಸ್ ಕಾರ್ಯಕರ್ತರಿಂದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣಗೆ ಬೆದರಿಕೆ ಕರೆ ಬರುತ್ತಿದೆ ಎಂದು ಆರೋಪಿಸಲಾಗಿದೆ. ಹಾಗಾಗಿ ಬೆದರಿಕೆ ಕರೆ ಮಾಡಿದವರ ವಿರುದ್ಧ ಕ್ರಮ‌ ಕೈಗೊಳ್ಳುವಂತೆ ಕಮಿಷನರ್ ರಮೇಶ್ ಬಾನೋತ್​ಗೆ ಕಾಂಗ್ರೆಸ್ ನಿಯೋಗ ಮನವಿ ಮಾಡಿದೆ.

ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಮಾತಾಡಿದ್ದಕ್ಕೆ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣಗೆ ಬೆದರಿಕೆ ಕರೆ: ಕಾಂಗ್ರೆಸ್​ ದೂರು
ಕಮಿಷನರ್​ಗೆ ಕಾಂಗ್ರೆಸ್ ನಿಯೋಗ ಮನವಿ
ರಾಮ್​, ಮೈಸೂರು
| Edited By: |

Updated on: Oct 28, 2023 | 4:45 PM

Share

ಮೈಸೂರು, ಅಕ್ಟೋಬರ್​​​​ 28: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ (M Lakshman) ಗೆ ಬೆದರಿಕೆ ಕರೆ ಬರುತ್ತಿರುವ ಹಿನ್ನೆಲೆ ಮೈಸೂರು ಪೊಲೀಸ್ ಆಯುಕ್ತ ಬಿ.ರಮೇಶ್​ಗೆ ಕಾಂಗ್ರೆಸ್​ ದೂರು ನೀಡಿದೆ. ಇತ್ತೀಚೆಗೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಮಾತಾಡಿದ್ದಕ್ಕೆ ಜೆಡಿಎಸ್ ಕಾರ್ಯಕರ್ತರಿಂದ ಬೆದರಿಕೆ ಕರೆ ಬರುತ್ತಿದೆ ಎಂದು ಆರೋಪಿಸಲಾಗಿದೆ. ಹಾಗಾಗಿ ಬೆದರಿಕೆ ಕರೆ ಮಾಡಿದವರ ವಿರುದ್ಧ ಕ್ರಮ‌ ಕೈಗೊಳ್ಳುವಂತೆ ಕಮಿಷನರ್ ರಮೇಶ್ ಬಾನೋತ್​ಗೆ ಕಾಂಗ್ರೆಸ್ ನಿಯೋಗ ಮನವಿ ಮಾಡಿದೆ.

ದೂರಿನಲ್ಲೇನಿದೆ?

ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ  ಡಿ.ಕೆ.ಶಿವಕುಮಾರ್​ ವಿರುದ್ಧ ಆಧಾರ ರಹಿತ ಆರೋಪಗಳನ್ನು ಮಾಡುತ್ತಿರುವುದರ ಬಗ್ಗೆ ಪ್ರತಿಕ್ರಿಯಸಲು ಅ. 26ರಂದು ಮಧ್ಯಾನ್ಹ 1 ಗಂಟೆಗೆ ಜಿಲ್ಲಾ ಕಾಂಗ್ರೆಸ್, ಗ್ರಾಮಾಂತರ ಮತ್ತು ನಗರ ಅಧ್ಯಕ್ಷರುಗಳ ನೇತೃತ್ವದಲ್ಲಿ ಮೈಸೂರಿನ ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಟಿ ನಡೆಸಿ, ಕುಮಾರಸ್ವಾಮಿಯವರ ಆರೋಪಗಳ ಬಗ್ಗೆ ಸ್ಪಷ್ಟಿಕರಣ ನೀಡಲಾಗಿದೆ.

ಇದನ್ನೂ ಓದಿ: ಎಐಸಿಸಿ ಅಧ್ಯಕ್ಷರಾಗಿ ಒಂದು ವರ್ಷ ಪೂರೈಸಿದ ಮಲ್ಲಿಕಾರ್ಜುನ ಖರ್ಗೆ: ಹೇಳಿದ್ದಿಷ್ಟು

ಕುಮಾರಸ್ವಾಮಿರವರ ವಿರುದ್ಧ ಯಾವ ಕಾರಣಕ್ಕೂ ಮಾತನಾಡಬಾರದು, ಮಾತನಾಡಿದರೆ ನೆಟ್ಟಗಿರುವುದಿಲ್ಲ ಎಂದು ಅ. 27 ರಂದು ಸಾಯಂಕಾಲ 3.15ಕ್ಕೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣಗೆ ಬೆದರಿಕೆ ಕರೆ ಹಾಕಲಾಗಿದೆ. ಇದಲ್ಲದೆ ಅ. 28 ರಂದು ಬೆಳಿಗ್ಗೆ 10 ಗಂಟೆಗೆ ಕಲಾಮಂದಿರ ಆವರಣದಿಂದ ಮುಂದೆ ಕೆಲ ಜೆ.ಡಿ.ಎಸ್.ಮುಖಂಡರುಗಳು ಮತ್ತು ಹೆಚ್.ಡಿ.ಕುಮಾರಸ್ವಾಮಿಯವರ ಅಭಿಮಾನಿಗಳು ಎಂ.ಲಕ್ಷ್ಮಣರವರು ಕುಮಾರಸ್ವಾಮಿಯವರನ್ನು ಪತ್ರಿಕಾಗೋಷ್ಟಿಯಲ್ಲಿ ಬಾಯಿಗೆ ಬಂದಂತೆ ಮಾತನಾಡಿರುತ್ತಿದ್ದಾರೆ. ಇವರಿಗೆ ಬುದ್ಧಿ ಕಲಿಸಬೇಕು. ಇವರ ಮನೆಗೆ ಹೋಗೋಣ ಹಾಗೂ ಇವರು ವಾಕಿಂಗ್ ಮಾಡುವಾಗ ಆಟ್ಯಾಕ್ ಮಾಡೋಣ ಎಂದು ಮಾತನಾಡಿಕೊಳ್ಳುತ್ತಿರುವುದರ ಬಗ್ಗೆ ಅಲ್ಲೆ ಇದ್ದ ಒಬ್ಬ ವ್ಯಕ್ತಿ ನನಗೆ ಮಾಹಿತಿ ನೀಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: PSI ಪರೀಕ್ಷೆ ಹಗರಣ ಮಾಸುವ ಮುನ್ನವೇ ಕಲಬುರಗಿಯಲ್ಲಿ ಮತ್ತೊಂದು ಹಗರಣ ಬೆಳಕಿಗೆ

ನಾನು ಕಾಂಗ್ರೆಸ್ ಪಕ್ಷದ ಅಧಿಕೃತ ರಾಜ್ಯ ವಕ್ತಾರ, ಪಕ್ಷವನ್ನು ಮತ್ತು ಮುಖಂಡರುಗಳನ್ನು ಮತ್ತು ಸರ್ಕಾರದ ಬಗ್ಗೆ ಆಧಾರ ರಹಿತ ಆರೋಪ ಮಾಡಿದಾಗ ಇಂತಹ ಆರೋಪಗಳಿಗೆ ಉತ್ತರ ಕೊಡುವುದೇ ವಕ್ತಾರನ ಕೆಲಸ. ಪ್ರಜಾಪ್ರಭುತ್ವದಲ್ಲಿ ಇಂತಹ ಬೆದರಿಕೆಗಳು ಮತ್ತು ಗುಂಡಾ ವರ್ತನೆಗಳಿಗೆ ಅವಕಾಶವಿರುವುದಿಲ್ಲ. ಆದ್ದರಿಂದ ಬೆದರಿಕೆ ಹಾಕುತ್ತಿರುವ ವ್ಯಕ್ತಿಗಳ ವಿರುದ್ಧ FIR ದಾಖಲಿಸಿ ಸೂಕ್ತ ಕ್ರಮ ಜರುಗಿಸಬೇಕು ಮತ್ತು ನನಗೆ ಸೂಕ್ತ ಭದ್ರತೆ ನೀಡುವಂತೆ ಎಂ.ಲಕ್ಷ್ಮಣ ಅವರು ಮನವಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ರಾಮ್​, ಮೈಸೂರು
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ