AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರುಣ್ ಸಿಂಗ್-ಕಟೀಲ್ ನನ್ನೊಂದಿಗೆ ಚರ್ಚಿಸಿದ್ದಾರೆ.. ಬೈ ಎಲೆಕ್ಷನ್​ ಬಳಿಕ ಸಮಸ್ಯೆ ಬಗೆಹರಿಸುವುದಾಗಿ ಹೇಳಿದ್ದಾರೆ: ಈಶ್ವರಪ್ಪ

ಈಶ್ವರಪ್ಪ ಸಚಿವ ಸ್ಥಾನ ಬದಲಾವಣೆಯಾದರೆ ಮುಂದಿನ ನಿರ್ಧಾರ ಏನು? ಎಂಬ ಮಾಧ್ಯಮದವರ ಪ್ರಶ್ನೆಗೆ ಖಾರವಾಗಿ ಪ್ರತಿಕ್ರಿಯಿಸಿರುವ ಅವರು, ಇದನ್ನ ತೀರ್ಮಾನ ಮಾಡೋಕೆ ನಾನ್ಯಾರು. ನಾನೊಬ್ಬ ಪಕ್ಷದ ಕಾರ್ಯಕರ್ತ ಅಷ್ಟೇ. ನಮ್ಮಪ್ಪ ಅಡಿಕೆ ಮಂಡಿ ಗುಮಾಸ್ತ. ನಮ್ಮಮ್ಮ ಅಡಿಕೆ ಮಂಡಿಯಲ್ಲಿ ಕೆಲಸ ಮಾಡೋಳು. ಆದ್ರೆ ಪಕ್ಷ ನನ್ನನ್ನ ಡಿಸಿಎಂ ತನಕ ಏರಿಸಿದೆ ಎಂದಿದ್ದಾರೆ.

ಅರುಣ್ ಸಿಂಗ್-ಕಟೀಲ್ ನನ್ನೊಂದಿಗೆ ಚರ್ಚಿಸಿದ್ದಾರೆ.. ಬೈ ಎಲೆಕ್ಷನ್​ ಬಳಿಕ ಸಮಸ್ಯೆ ಬಗೆಹರಿಸುವುದಾಗಿ ಹೇಳಿದ್ದಾರೆ: ಈಶ್ವರಪ್ಪ
ಕೆ.ಎಸ್​.ಈಶ್ವರಪ್ಪ
Follow us
Skanda
|

Updated on: Apr 02, 2021 | 1:50 PM

ಮೈಸೂರು: ರಾಜ್ಯ ಬಿಜೆಪಿಯಲ್ಲಿ ಹಿರಿಯ ನಾಯಕರ ನಡುವಿನ ಮನಸ್ತಾಪ ಪಕ್ಷದೊಳಗೆ ಉಸಿರುಗಟ್ಟಿಸುವ ವಾತಾವರಣ ಸೃಷ್ಟಿಸುತ್ತಿದೆಯೇ ಅನ್ನುವ ಅನುಮಾನ ಬಲವಾಗುತ್ತಿದ್ದ ಹೊತ್ತಿನಲ್ಲಿಯೇ, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​.ಈಶ್ವರಪ್ಪ ಈ ಎಲ್ಲಾ ಬೆಳವಣಿಗೆಗಳ ಕುರಿತು ಮಾತನಾಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಅವರು ಯಡಿಯೂರಪ್ಪ ವಿರುದ್ಧ ತಾವು ಆರೋಪ ಹೊರಿಸಿದ ಕುರಿತು ಪ್ರತಿಕ್ರಿಯೆ ನೀಡಿ ಬಿ.ಎಸ್.ಯಡಿಯೂರಪ್ಪ ಹಾಗೂ ನನ್ನ ನಡುವೆ ಯಾವುದೇ ವೈಯುಕ್ತಿಕ ಭಿನ್ನಾಭಿಪ್ರಾಯ ಇಲ್ಲ. ಈ ಸಂಬಂಧ ಅರುಣ್ ಸಿಂಗ್ ಹಾಗೂ ನಳಿನ್ ಕುಮಾರ್ ಕಟೀಲ್ ನನ್ನೊಂದಿಗೆ ಚರ್ಚಿಸಿದ್ದಾರೆ. ಚುನಾವಣೆಯ ಬಳಿಕ ಸಮಸ್ಯೆ ಬಗೆಹರಿಸುವುದಾಗಿ ಹೇಳಿದ್ದಾರೆಂದು ತಿಳಿಸಿದ್ದಾರೆ.

ರಾಜ್ಯಪಾಲರಿಗೆ ಪತ್ರ ಬರೆದ ವಿಚಾರದ ಬಗ್ಗೆ ಮಾತನಾಡುತ್ತಾ, ನಾನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರಿಗೂ ಪತ್ರ ಬರೆದಿರುವುದು ನಿಜ. ಪತ್ರ ಬರೆಯುವುದಕ್ಕೂ ಮುನ್ನ ಯಡಿಯೂರಪ್ಪ ಜತೆ ಚರ್ಚಿಸಿಲ್ಲ. ಹಾಗಂತ, ಅವರ ವಿರುದ್ಧ ಯಾರಿಗೂ ದೂರು ನೀಡಿಲ್ಲ. ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿಲ್ಲ. ಈಶ್ವರಪ್ಪ ಪತ್ರ ಬರೆದಿರುವುದು ತಪ್ಪು ಎಂದು ಅರುಣ್​ ಸಿಂಗ್​ ಹೇಳಿದ್ದಾರೆ. ಆದರೆ ಅದು ಅವರ ಅಭಿಪ್ರಾಯ. ನಾನು ಅವರೊಂದಿಗೆ ಚರ್ಚೆ ಮಾಡುತ್ತೇನೆ. ಆಡಳಿತ ವಿಚಾರವಾಗಿ ನಾನು ನೇರವಾಗಿ ಯಡಿಯೂರಪ್ಪ ಅವರಿಗೇ ಪತ್ರ ಬರೆದಿದ್ದೇನೆ. ಆಡಳಿತದಲ್ಲಿ ಸ್ವಲ್ಪ ವ್ಯತ್ಯಾಸವಾಗಿದೆ. ಅದನ್ನು ಸರಿಪಡಿಸಿ ಎಂದು ಹೇಳಿದ್ದೇನೆ ಎಂದಿದ್ದಾರೆ.

ನಾನು ಯಾರಿಗೂ ಬಗ್ಗುವ ಪ್ರಶ್ನೆಯೇ ಇಲ್ಲ! ನಾಲ್ವರು ಸಚಿವರು, ನಾಲ್ವರು ಶಾಸಕರು ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ರಾಜೀನಾಮೆ ಕೇಳಿದ್ದಾರೆ, ಖಾತೆ ಬದಲಾವಣೆ ಬಗ್ಗೆ ಚರ್ಚೆಯಾಗಿದೆ. ಇಂತಹ ಯಾವುದಕ್ಕೂ ನಾನು ಬಗ್ಗುವ ಪ್ರಶ್ನೆಯೇ ಇಲ್ಲ. ನನ್ನ ನಿರ್ಧಾರ ನ್ಯಾಯಬದ್ಧವಾಗಿದೆ. ರಾಜ್ಯದ ಹಲವು ಶಾಸಕರು, ಸಚಿವರು, ಸಂಸದರು, ಬಿಜೆಪಿ ಪದಾಧಿಕಾರಿಗಳು ನನ್ನ ಪರವಾಗಿ ಮಾತಾಡಿದ್ದಾರೆ. ಸಹಿ ಸಂಗ್ರಹಿಸುವ ಬಗ್ಗೆಯೂ ಅವರು ಕೇಳಿದ್ದಾರೆ. ಆದರೆ, ಸಹಿ ಸಂಗ್ರಹ ಮಾಡುವುದು ಬೇಡ ಎಂದು ಹೇಳಿದ್ದೆ. ಶಾಸಕರು ಸಹಿ ಸಂಗ್ರಹ ಮಾಡುವುದು ಸಹ ತಪ್ಪು. ಇದು ನನ್ನ, ಯಡಿಯೂರಪ್ಪ ನಡುವಿನ ವೈಯಕ್ತಿಕ ವಿಚಾರವಲ್ಲ, ನೀತಿ, ನಿಯಮ ಜಾರಿ ಮಾಡಬೇಕೆಂಬ ನನ್ನ ಪ್ರಯತ್ನವಷ್ಟೇ ಎಂದು ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಕೆಜೆಪಿ ಕಟ್ಟುವಾಗಲೂ ಯಡಿಯೂರಪ್ಪನವರಿಗೆ ಬೇಡವೆಂದೇ ಹೇಳಿದ್ದೆ.. ಎಂಬುದನ್ನು ಸ್ಮರಿಸಿದ ಕೆ.ಎಸ್.ಈಶ್ವರಪ್ಪ

ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಬರ್ತ್​ಡೇ ಪಾರ್ಟಿಯಲ್ಲಿ ಡ್ರಗ್ಸ್, ಗಾಯಕಿ ಮಂಗ್ಲಿ ಸ್ಪಷ್ಟನೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ
ಮೋದಿ ಸರ್ಕಾರದ ಆಡಳಿತ ವೈಖರಿ, ಜನಾಭಿಪ್ರಾಯ ಸಂಗ್ರಹಕ್ಕೆ ಜನ್ ಮನ್ ಸಮೀಕ್ಷೆ