AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್.ಜಯಕುಮಾರ್ ಅವರಿಗೆ ಎಚ್.ಎಸ್.ದೊರೆಸ್ವಾಮಿ ಹೆಸರಿನ ಕೆಯುಡಬ್ಲ್ಯೂಜೆ ದತ್ತಿನಿಧಿ ಪ್ರಶಸ್ತಿ ಪ್ರದಾನ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಎಚ್.ಎಸ್.ದೊರೆಸ್ವಾಮಿ ಅವರ ಹೆಸರಿನಲ್ಲಿ ಕೊಡಮಾಡುವ ಕೆಯುಡಬ್ಲ್ಯೂಜೆ ದತ್ತಿನಿಧಿ ಪ್ರಶಸ್ತಿಗೆ ಭಾಜನರಾಗಿದ್ದ ಹಿರಿಯ ಪತ್ರಕರ್ತ ಆರ್.ಜಯಕುಮಾರ್‌ ಅವರಿಗೆ ಮೈಸೂರಿನ ಅವರ ತೋಟದ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಪ್ರದಾನ ಮಾಡಿದರು.

ಆರ್.ಜಯಕುಮಾರ್ ಅವರಿಗೆ ಎಚ್.ಎಸ್.ದೊರೆಸ್ವಾಮಿ ಹೆಸರಿನ ಕೆಯುಡಬ್ಲ್ಯೂಜೆ ದತ್ತಿನಿಧಿ ಪ್ರಶಸ್ತಿ ಪ್ರದಾನ
ಕೆಯುಡಬ್ಲ್ಯೂಜೆ ದತ್ತಿನಿಧಿ ಪ್ರಶಸ್ತಿ ಪ್ರದಾನ
TV9 Web
| Edited By: |

Updated on: Apr 07, 2024 | 9:43 PM

Share

ಮೈಸೂರು, ಏಪ್ರಿಲ್​ 07: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಎಚ್.ಎಸ್.ದೊರೆಸ್ವಾಮಿ ಅವರ ಹೆಸರಿನಲ್ಲಿ ಕೊಡಮಾಡುವ ಕೆಯುಡಬ್ಲ್ಯೂಜೆ ದತ್ತಿನಿಧಿ ಪ್ರಶಸ್ತಿಗೆ ಭಾಜನರಾಗಿದ್ದ ಹಿರಿಯ ಪತ್ರಕರ್ತ ಆರ್.ಜಯಕುಮಾರ್‌ ಅವರಿಗೆ ಮೈಸೂರಿನ ಅವರ ತೋಟದ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಶಿವಾನಂದ ತಗಡೂರು ಅವರು ಮಾತನಾಡಿ, ಚಿತ್ರದುರ್ಗದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಜಯಕುಮಾರ್ ಅವರು ಅನಾರೋಗ್ಯದ ಕಾರಣ ಬರಲು ಸಾಧ್ಯವಾಗಿರಲಿಲ್ಲ. ಆದ್ದರಿಂದ ಇಂದು ಕೆಯುಡಬ್ಲ್ಯೂಜೆಯೇ ಅವರ ಮನೆಗೆ ಬಂದಿದ್ದು ಪ್ರಶಸ್ತಿ ಪ್ರದಾನ ಮಾಡುತ್ತಿದೆ ಎಂದು ಹೇಳಿದರು.

ಸ್ವಾತಂತ್ರ್ಯ ಹೋರಾಟಗಾರರು ಮತ್ತು ಶತಾಯುಶಿಗಳಾಗಿ ಬದುಕಿದ ಎಚ್.ಎಸ್.ದೊರೆಸ್ವಾಮಿ ಅವರು ಕೆಯುಡಬ್ಲ್ಯೂಜೆ ಅಧ್ಯಕ್ಷರಾಗಿ ಸಂಘವನ್ನು ಮುನ್ನೆಡೆಸಿದವರು. ಅವರ ಹೆಸರಿನಲ್ಲಿ ದತ್ತಿನಿಧಿ ಪ್ರಶಸ್ತಿ ನೀಡಲಾಗುತ್ತಿದ್ದು ಈ ಬಾರಿ ಸುಧೀರ್ಘ ಅವಧಿಗೆ ಕ್ರಿಯಾಶೀಲವಾಗಿ ಕೆಲಸ ಮಾಡಿದ ಜಯಕುಮಾರ್ ಅವರು ಭಾಜನರಾಗಿದ್ದಾರೆ ಎಂದರು.

ಇದನ್ನೂ ಓದಿ: ಕೆಯುಡಬ್ಲ್ಯೂಜೆ ಪ್ರಶಸ್ತಿಗೆ ಜಿಲ್ಲಾ ಹಾಗೂ ತಾಲೂಕು ಸಂಘದಿಂದ ಅರ್ಜಿ ಆಹ್ವಾನ

ದೊರೆಸ್ವಾಮಿ ಅವರ ಸಮಾಜಮುಖಿ ವಿಚಾರಧಾರೆಯಲ್ಲಿ ಮೂರೂವರೆ ದಶಕಗಳ ಕಾಲ ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ ಸೇರಿದಂತೆ ಹಲವು ಪತ್ರಿಕೆಯಲ್ಲಿ ಪತ್ರಕರ್ತರಾಗಿದ್ದ ಜಯಕುಮಾರ್ ಅವರಿಗೆ ಈ ಪ್ರಶಸ್ತಿ ಪ್ರದಾನ ಮಾಡುತ್ತಿರುವುದು ಸಂಘಕ್ಕೆ ಅಭಿಮಾನದ ಸಂಗತಿ ಎಂದರು.

ಈ ಸಂದರ್ಭದಲ್ಲಿ ಅವರ ಪತ್ನಿ ಲೀಲಾ ಸಂಪಿಗೆ, ಡಾ.ಪ್ರವೀಣ್, ಮೈಸೂರು ಜಿಲ್ಲಾ ಸಂಘದ ಪ್ರಭುರಾಜು, ಸಿ.ಕೆ.ಮಹೇಂದ್ರ, ಎಸ್.ಟಿ. ರವಿಕುಮಾರ್, ಎಂ.ಸುಬ್ರಹ್ಮಣ್ಯ, ರಾಘವೇಂದ್ರ, ಧರ್ಮಪುರ ನಾರಾಯಣ, ಹಿರಿಯ ಪತ್ರಕರ್ತರುಗಳಾದ ಆರಾಧ್ಯ, ಲೋಕೇಶ್ ಕಾಯರ್ಗ, ಚಿನ್ನಸ್ವಾಮಿ ವಡ್ಡಗೆರೆ, ಓಂಕಾರ್, ಮಹಾದೇವ ನಾಯಕ್ ಮತ್ತಿತರರು ಮಾತನಾಡಿ ಜಯಕುಮಾರ್ ಅವರ ಹೋರಾಟದ ಹಾದಿ ಮತ್ತು ಪತ್ರಕರ್ತರಾಗಿ ಸಲ್ಲಿಸಿದ ಸೇವೆ ಸ್ಮರಿಸಿದರು. ಆದಷ್ಟು ಬೇಗ ಗುಣಮುಖರಾಗಿ ಬರುವಂತೆ ಹಾರೈಸಿದರು.

ಇದನ್ನೂ ಓದಿ: ಪತ್ರಕರ್ತರಿಗೆ ಉಚಿತ ಬಸ್​ ಘೋಷಣೆ ಹಿನ್ನೆಲೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಗೆ ಕೆಯುಡಬ್ಲ್ಯೂಜೆ ವತಿಯಿಂದ ಸನ್ಮಾನ

ಕಾರ್ಯಕ್ರಮದಲ್ಲಿ ಶಿವಮೂರ್ತಿ ಜುಪ್ತಿಮಠ, ಟಿ.ಪಿ.ಜಗದೀಶ್ , ದೇವರಾಜ ಕೊಪ್ಪ, ಸುಭಾಷ್ ಮಾಂಡ್ರಳ್ಳಿ, ಸಿದ್ದಯ್ಯ ಸೋಮಣ್ಣ, ಸೋಮಶೇಖರ್, ಡಾ.ಪೃಥ್ವಿ ಚಂದ್ರಶೇಖರ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!