AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್.ಜಯಕುಮಾರ್ ಅವರಿಗೆ ಎಚ್.ಎಸ್.ದೊರೆಸ್ವಾಮಿ ಹೆಸರಿನ ಕೆಯುಡಬ್ಲ್ಯೂಜೆ ದತ್ತಿನಿಧಿ ಪ್ರಶಸ್ತಿ ಪ್ರದಾನ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಎಚ್.ಎಸ್.ದೊರೆಸ್ವಾಮಿ ಅವರ ಹೆಸರಿನಲ್ಲಿ ಕೊಡಮಾಡುವ ಕೆಯುಡಬ್ಲ್ಯೂಜೆ ದತ್ತಿನಿಧಿ ಪ್ರಶಸ್ತಿಗೆ ಭಾಜನರಾಗಿದ್ದ ಹಿರಿಯ ಪತ್ರಕರ್ತ ಆರ್.ಜಯಕುಮಾರ್‌ ಅವರಿಗೆ ಮೈಸೂರಿನ ಅವರ ತೋಟದ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಪ್ರದಾನ ಮಾಡಿದರು.

ಆರ್.ಜಯಕುಮಾರ್ ಅವರಿಗೆ ಎಚ್.ಎಸ್.ದೊರೆಸ್ವಾಮಿ ಹೆಸರಿನ ಕೆಯುಡಬ್ಲ್ಯೂಜೆ ದತ್ತಿನಿಧಿ ಪ್ರಶಸ್ತಿ ಪ್ರದಾನ
ಕೆಯುಡಬ್ಲ್ಯೂಜೆ ದತ್ತಿನಿಧಿ ಪ್ರಶಸ್ತಿ ಪ್ರದಾನ
TV9 Web
| Edited By: |

Updated on: Apr 07, 2024 | 9:43 PM

Share

ಮೈಸೂರು, ಏಪ್ರಿಲ್​ 07: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಎಚ್.ಎಸ್.ದೊರೆಸ್ವಾಮಿ ಅವರ ಹೆಸರಿನಲ್ಲಿ ಕೊಡಮಾಡುವ ಕೆಯುಡಬ್ಲ್ಯೂಜೆ ದತ್ತಿನಿಧಿ ಪ್ರಶಸ್ತಿಗೆ ಭಾಜನರಾಗಿದ್ದ ಹಿರಿಯ ಪತ್ರಕರ್ತ ಆರ್.ಜಯಕುಮಾರ್‌ ಅವರಿಗೆ ಮೈಸೂರಿನ ಅವರ ತೋಟದ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಶಿವಾನಂದ ತಗಡೂರು ಅವರು ಮಾತನಾಡಿ, ಚಿತ್ರದುರ್ಗದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಜಯಕುಮಾರ್ ಅವರು ಅನಾರೋಗ್ಯದ ಕಾರಣ ಬರಲು ಸಾಧ್ಯವಾಗಿರಲಿಲ್ಲ. ಆದ್ದರಿಂದ ಇಂದು ಕೆಯುಡಬ್ಲ್ಯೂಜೆಯೇ ಅವರ ಮನೆಗೆ ಬಂದಿದ್ದು ಪ್ರಶಸ್ತಿ ಪ್ರದಾನ ಮಾಡುತ್ತಿದೆ ಎಂದು ಹೇಳಿದರು.

ಸ್ವಾತಂತ್ರ್ಯ ಹೋರಾಟಗಾರರು ಮತ್ತು ಶತಾಯುಶಿಗಳಾಗಿ ಬದುಕಿದ ಎಚ್.ಎಸ್.ದೊರೆಸ್ವಾಮಿ ಅವರು ಕೆಯುಡಬ್ಲ್ಯೂಜೆ ಅಧ್ಯಕ್ಷರಾಗಿ ಸಂಘವನ್ನು ಮುನ್ನೆಡೆಸಿದವರು. ಅವರ ಹೆಸರಿನಲ್ಲಿ ದತ್ತಿನಿಧಿ ಪ್ರಶಸ್ತಿ ನೀಡಲಾಗುತ್ತಿದ್ದು ಈ ಬಾರಿ ಸುಧೀರ್ಘ ಅವಧಿಗೆ ಕ್ರಿಯಾಶೀಲವಾಗಿ ಕೆಲಸ ಮಾಡಿದ ಜಯಕುಮಾರ್ ಅವರು ಭಾಜನರಾಗಿದ್ದಾರೆ ಎಂದರು.

ಇದನ್ನೂ ಓದಿ: ಕೆಯುಡಬ್ಲ್ಯೂಜೆ ಪ್ರಶಸ್ತಿಗೆ ಜಿಲ್ಲಾ ಹಾಗೂ ತಾಲೂಕು ಸಂಘದಿಂದ ಅರ್ಜಿ ಆಹ್ವಾನ

ದೊರೆಸ್ವಾಮಿ ಅವರ ಸಮಾಜಮುಖಿ ವಿಚಾರಧಾರೆಯಲ್ಲಿ ಮೂರೂವರೆ ದಶಕಗಳ ಕಾಲ ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ ಸೇರಿದಂತೆ ಹಲವು ಪತ್ರಿಕೆಯಲ್ಲಿ ಪತ್ರಕರ್ತರಾಗಿದ್ದ ಜಯಕುಮಾರ್ ಅವರಿಗೆ ಈ ಪ್ರಶಸ್ತಿ ಪ್ರದಾನ ಮಾಡುತ್ತಿರುವುದು ಸಂಘಕ್ಕೆ ಅಭಿಮಾನದ ಸಂಗತಿ ಎಂದರು.

ಈ ಸಂದರ್ಭದಲ್ಲಿ ಅವರ ಪತ್ನಿ ಲೀಲಾ ಸಂಪಿಗೆ, ಡಾ.ಪ್ರವೀಣ್, ಮೈಸೂರು ಜಿಲ್ಲಾ ಸಂಘದ ಪ್ರಭುರಾಜು, ಸಿ.ಕೆ.ಮಹೇಂದ್ರ, ಎಸ್.ಟಿ. ರವಿಕುಮಾರ್, ಎಂ.ಸುಬ್ರಹ್ಮಣ್ಯ, ರಾಘವೇಂದ್ರ, ಧರ್ಮಪುರ ನಾರಾಯಣ, ಹಿರಿಯ ಪತ್ರಕರ್ತರುಗಳಾದ ಆರಾಧ್ಯ, ಲೋಕೇಶ್ ಕಾಯರ್ಗ, ಚಿನ್ನಸ್ವಾಮಿ ವಡ್ಡಗೆರೆ, ಓಂಕಾರ್, ಮಹಾದೇವ ನಾಯಕ್ ಮತ್ತಿತರರು ಮಾತನಾಡಿ ಜಯಕುಮಾರ್ ಅವರ ಹೋರಾಟದ ಹಾದಿ ಮತ್ತು ಪತ್ರಕರ್ತರಾಗಿ ಸಲ್ಲಿಸಿದ ಸೇವೆ ಸ್ಮರಿಸಿದರು. ಆದಷ್ಟು ಬೇಗ ಗುಣಮುಖರಾಗಿ ಬರುವಂತೆ ಹಾರೈಸಿದರು.

ಇದನ್ನೂ ಓದಿ: ಪತ್ರಕರ್ತರಿಗೆ ಉಚಿತ ಬಸ್​ ಘೋಷಣೆ ಹಿನ್ನೆಲೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಗೆ ಕೆಯುಡಬ್ಲ್ಯೂಜೆ ವತಿಯಿಂದ ಸನ್ಮಾನ

ಕಾರ್ಯಕ್ರಮದಲ್ಲಿ ಶಿವಮೂರ್ತಿ ಜುಪ್ತಿಮಠ, ಟಿ.ಪಿ.ಜಗದೀಶ್ , ದೇವರಾಜ ಕೊಪ್ಪ, ಸುಭಾಷ್ ಮಾಂಡ್ರಳ್ಳಿ, ಸಿದ್ದಯ್ಯ ಸೋಮಣ್ಣ, ಸೋಮಶೇಖರ್, ಡಾ.ಪೃಥ್ವಿ ಚಂದ್ರಶೇಖರ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?