AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೂ ಹಗರಣ ಆರೋಪ: ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಶಾಸಕ ಸಾರಾ ಮಹೇಶ್

ಸಾರಾ ಮಹೇಶ್ ಭೂ ಕಬಳಿಕೆ ಮಾಡಿದ್ದಾರೆ ಎಂದು ರೋಹಿಣಿ ಸಿಂಧೂರಿ ಬಿಂಬಿಸಿದ್ದರು. ಈ ಕಾರಣ ಅವರ ವಿರುದ್ದ ಮಾನ ನಷ್ಟ ಮೊಕದ್ದಮೆ ಹೂಡಲಾಗಿದೆ.

ಭೂ ಹಗರಣ ಆರೋಪ: ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಶಾಸಕ ಸಾರಾ ಮಹೇಶ್
IAS ಅಧಿಕಾರಿ ರೋಹಿಣಿ ಸಿಂಧೂರಿ, ಜೆಡಿಎಸ್​​ ಶಾಸಕ ಸಾ.ರಾ.ಮಹೇಶ್
TV9 Web
| Edited By: |

Updated on:Sep 11, 2022 | 12:39 PM

Share

ಮೈಸೂರು: ಮೈಸೂರು ಡಿಸಿ ಆಗಿದ್ದಾಗ ಐಎಎಸ್ ಅಧಿಕಾರಿ ರೋಹಿಣಿಯಿಂದ ಹಲವು ಅಕ್ರಮಗಳನ್ನು ಬಯಲು ಮಾಡಿದ್ದಕ್ಕೆ ನನ್ನ ವಿರುದ್ಧ ಸುಳ್ಳು ಆರೋಪ ಮಾಡಲಾಗಿದೆ. ಈ ಸಂಬಂಧ ರೋಹಿಣಿ ವಿರುದ್ಧ ಮಾನನಷ್ಟ ಕೇಸ್ ದಾಖಲು ಮಾಡುವುದಾಗಿ ಜೆಡಿಎಸ್​​ ಶಾಸಕ ಸಾ.ರಾ.ಮಹೇಶ್ ಮೈಸೂರಿನಲ್ಲಿ ಹೇಳಿಕೆ ನೀಡಿದರು. ನಗರದಲ್ಲಿ ಶಾಸಕ ಸಾ. ರಾ ಮಹೇಶ್, ವಕೀಲ್ ಅರುಣ್ ಕುಮಾರ್ ಜಂಟಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಜಿಲ್ಲಾಧಿಕಾರಿ ಐಶಾರಾಮಿ ಜೀವನ ನಡೆಸಿದ್ದಾರೆ. ಸರ್ಕಾರಿ ಹಣ ರ್ದುವಿನಿಯೋಗ, ಕೋವಿಡ್ ಸಂದರ್ಭದ ಕಾರ್ಯವೈಖರಿ ಪ್ರಾಮಾಣಿಕವಾಗಿ ಕೆಲಸ ಮಾಡದೆ ಬೇಜವಾಬ್ದಾರಿ ವರ್ತನೆ ಮಾಡಿದ್ದು, ಇದರಿಂದ ಸಾವಿರಾರು ಜನರಿಗೆ ಸಮಸ್ಯೆಯಾಗಿದೆ.

ಇದನ್ನು ಮುಚ್ಚಿ ಹಾಕಲು ಟೆಸ್ಟಿಂಗ್ ಸಂಖ್ಯೆ ಸಾವಿನ ಸಂಖ್ಯೆ ಕಡಿಮೆ ತೋರಿಸಿದ್ದರು. ಈ ಬಗ್ಗೆ ಚೀಪ್ ಸೆಕ್ರೆಟರಿ ವರದಿ ನಂತರ ವರ್ಗಾವಣೆ ಮಾಡಿದ್ದು, ವರ್ಗಾವಣೆ ಬೇಡ ಅಮಾನತು ಮಾಡುವಂತೆ ಒತ್ತಾಯಿಸಿದ್ದೆ. ಇದೇ ಕಾರಣಕ್ಕೆ ನನ್ನ ವಿರುದ್ದ ಭೂ ಹಗರಣದ ಆರೋಪ ಮಾಡಲಾಗಿದೆ. ಭೂ ಅಕ್ರಮದಿಂದ ನನ್ನ ವರ್ಗಾವಣೆ ಅಂತಾ ಬಿಂಬಿಸಲು ಹೊರಟಿದ್ದರು. ಈಗಾಗಲೇ ಆರ್ ಸಿ ಈ ಬಗ್ಗೆ ವರದಿ ನೀಡದ್ದಾರೆ. ಸರ್ಕಾರ ಉನ್ನತಮಟ್ಟದ ತನಿಖೆ ನಡೆಸುತ್ತಿದೆ. ಅದರ ವರದಿ ಕೂಡ ಬರಲಿದೆ. ನಾನು‌ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿದ್ದೇ. ಅದರಂತೆ ಮೈಸೂರು ನ್ಯಾಯಾಲಯದಲ್ಲಿ ರೋಹಿಣಿ ಸಿಂಧೂರಿ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಮೈಸೂರಿನಲ್ಲಿ ಶಾಸಕ ಸಾ.ರಾ ಮಹೇಶ್ ಹೇಳಿದರು.

ರೋಹಿಣಿ ಸಿಂಧೂರಿ ವಿರುದ್ಧ ಒಂದು ಕೋಟಿ ರೂ ಮಾನನಷ್ಟ ಮೊಕದ್ದಮೆ:

ಸಾರಾ ಮಹೇಶ್ ಭೂ ಅಕ್ರಮ ಮಾಡಿದ್ದಾರೆ ಎಂಬ ರೋಹಿಣಿ ಸಿಂಧೂರಿ ಆಡಿಯೋ ವೈರಲ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಸಾರಾ ಮಹೇಶ್ ಭೂ ಕಬಳಿಕೆ ಮಾಡಿದ್ದಾರೆ ಎಂದು ರೋಹಿಣಿ ಸಿಂಧೂರಿ ಬಿಂಬಿಸಿದ್ದರು. ಈ ಕಾರಣ ಅವರ ವಿರುದ್ದ ಮಾನ ನಷ್ಟ ಮೊಕದ್ದಮೆ ಹೂಡಲಾಗಿದೆ ಎಂದು ಸಾ.ರಾ ಮಹೇಶ್​ ಪರ ವಕೀಲ ಅರುಣ್ ಕುಮಾರ್ ಹೇಳಿಕೆ ನೀಡಿದರು. ಮಾನನಷ್ಟ ಮೊಕದ್ದಮೆ ಹೂಡುವ ಮುನ್ನ ರೋಹಿಣಿ ಸಿಂಧೂರಿ ಅವರಿಗೆ ಲೀಗಲ್ ನೋಟೀಸ್ ಕೊಟ್ಟಿದ್ದೇವು. ನೋಟೀಸ್​ಗೆ ರೋಹಿಣಿ ಸಿಂಧೂರಿ ಅವರು ಉತ್ತರ ಕೊಟ್ಟಿದ್ದಾರೆ.

ಸಾರಾ ಮಹೇಶ್ ವಿರುದ್ದ ಮಾತಾಡಿರೋ ಧ್ವನಿ ತಮ್ಮದೆ ಎಂದು ಒಪ್ಪಿಕೊಂಡಿದ್ದಾರೆ. ಇದು ಖಾಸಗಿ ಸಂಭಾಷಣೆ ಎಂದು ಹೇಳಿದ್ದಾರೆ. ಇದೇ ಉತ್ತರದ ಆಧಾರದ ಮೇಲೆ ಒಂದು ಕೋಟಿ ರೂ ಮಾನನಷ್ಟ ಮೊಕದ್ದಮೆ ಹೂಡಿದ್ದೇವೆ. ಎರಡನೇ ಜಿಲ್ಲಾ ಸೆಷನ್ಸ್ ನ್ಯಾಯಾಲಯದಿಂದ ರೋಹಿಣಿ ಸಿಂಧೂರಿಗೆ ನೋಟೀಸ್ ಜಾರಿಯಾಗಿದೆ. ಅಕ್ಟೋಬರ್ 20 ರೊಳಗೆ ರೋಹಿಣಿ ಸಿಂಧೂರಿ ಉತ್ತರ ಕೊಡಬೇಕು ಎಂದು ವಕೀಲ ಅರುಣ್ ಕುಮಾರ್ ಹೇಳಿಕೆ ನೀಡಿದರು.

ಗೋಮುಖ ಅಧಿಕಾರಿ ಮುಖವಾಡ ಕಳಚದೇ ಬಿಡಲ್ಲ: ಸಾ.ರಾ.ಮಹೇಶ್​

ಈ ಕುರಿತು ಮಾತನಾಡಿದ ಸಾ.ರಾ.ಮಹೇಶ್​, ನಾನು ರಾಜಕಾರಣ ಬೇಕಾದರೂ ಬಿಡುತ್ತೇನೆ ಆದರೆ ಇಂಥ ಗೋಮುಖ ಅಧಿಕಾರಿ ಮುಖವಾಡ ಕಳಚದೇ ಬಿಡಲ್ಲ. ಜನರು ಬಹಳ ಬೇಗ ಅಧಿಕಾರಿಗಳ ಮಾತು ನಂಬುತ್ತಾರೆ. ರಾಜಕಾರಣಿಗಳ ಮೇಲೆ ಜನರು ಅನುಮಾನ ಪಡುತ್ತಾರೆ. ಇದರ ಸತ್ಯಾಸತ್ಯತೆ ಎಲ್ಲರಿಗೂ ಗೊತ್ತಾಗಬೇಕು ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 12:32 pm, Sun, 11 September 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ