AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದ ಚಿರತೆ ಮರಿ ಸ್ಥಳಾಂತರಕ್ಕೆ ಗ್ರಾಮದ ಯುವಕರಿಂದ ತಕರಾರು

ಅರಣ್ಯ ಇಲಾಖೆ ಬೋನು ಇರಿಸಿತ್ತು. ಹಲವು ಚಿರತೆಗಳ ಪೈಕಿ ಒಂದು ಚಿರತೆ ಮರಿ ಬೋನಿಗೆ ಬಿದ್ದಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿದ್ದು ಈ ವೇಳೆ ಗ್ರಾಮದ ಯುವಕರು ಮತ್ತು ಸಿಬ್ಬಂದಿ ನಡುವೆ ಮಾತಿನ ಚಕಮಕಿಯಾಗಿದೆ.

ಮೈಸೂರು: ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದ ಚಿರತೆ ಮರಿ ಸ್ಥಳಾಂತರಕ್ಕೆ ಗ್ರಾಮದ ಯುವಕರಿಂದ ತಕರಾರು
ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದ ಚಿರತೆ ಮರಿ
TV9 Web
| Updated By: ಆಯೇಷಾ ಬಾನು

Updated on:Dec 14, 2022 | 11:23 AM

Share

ಮೈಸೂರು: ಹೆಚ್.ಡಿ.ಕೋಟೆ ತಾಲೂಕಿನ ಬದನಕುಪ್ಪೆ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಮರಿ ಬಿದ್ದಿದ್ದು ಅದರ ಸ್ಥಳಾಂತರಕ್ಕೆ ಗ್ರಾಮದ ಯುವಕರು ಅಡ್ಡಿಪಡಿಸಿದ್ದಾರೆ. ಈ ವೇಳೆ ಸ್ಥಳಕ್ಕೆ ಬಂದ ಅರಣ್ಯ ಸಿಬ್ಬಂದಿ ಜತೆ ಯುವಕರು ವಾಗ್ವಾದಕ್ಕೆ ಇಳಿದಿದ ಘಟನೆ ನಡೆದಿದೆ.

ಕಳೆದ ಮೂರು ತಿಂಗಳಿನಿಂದ ಗ್ರಾಮದಲ್ಲಿ ಚಿರತೆಗಳ ಕಾಟ ಹೆಚ್ಚಾಗಿತ್ತು. ಸಾಕು ಪ್ರಾಣಿಗಳ ಮೇಲೆ ಚಿರತೆಗಳು ದಾಳಿ ನಡೆಸುತ್ತಿದ್ದವು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಬೋನು ಇರಿಸಿತ್ತು. ಹಲವು ಚಿರತೆಗಳ ಪೈಕಿ ಒಂದು ಚಿರತೆ ಮರಿ ಬೋನಿಗೆ ಬಿದ್ದಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿದ್ದು ಈ ವೇಳೆ ಗ್ರಾಮದ ಯುವಕರು ಮತ್ತು ಸಿಬ್ಬಂದಿ ನಡುವೆ ಮಾತಿನ ಚಕಮಕಿಯಾಗಿದೆ. ಸಾಕು ಪ್ರಾಣಿಗಳನ್ನು ಕೊಂದಿರುವುದಕ್ಕೆ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ. ಅಲ್ಲಿಯವರೆಗೂ ಚಿರತೆ ತೆಗೆದುಕೊಂಡು ಹೋಗದಿರುವಂತೆ ಪಟ್ಟು ಹಿಡಿದಿದ್ದಾರೆ. ಆಗ ಯುವಕರನ್ನು ಸಮಾಧಾನ ಮಾಡಿದ ಗ್ರಾಮದ ಮುಖಂಡರು, ಈ ಬಗ್ಗೆ ಅಧಿಕಾರಿಗಳಿಗೆ ತಿಳಿಸಿ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ. ಬಳಿಕ ನಾಗರಹೊಳೆ ರಾಷ್ಟ್ರೀಯ ಉದ್ಯಾನವನಕ್ಕೆ ಚಿರತೆ ಮರಿ ರವಾನಿಸಲಾಗಿದೆ.

leopard baby captured (1)

ಇದನ್ನೂ ಓದಿ: ಮೈಸೂರಲ್ಲಿ ಚಿರತೆ ಭೀತಿ ಮಧ್ಯೆ ಹುಲಿ ದಾಳಿ: ಓರ್ವ ರೈತನಿಗೆ ಗಾಯ

ಬಂಡೀಪುರ ಬಳಿ ಲಾರಿ ಡಿಕ್ಕಿ ಹೊಡೆದು ಹೆಣ್ಣಾನೆ ಸಾವು

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಮದ್ದೂರು ಗ್ರಾಮದ ಬಳಿ ಲಾರಿ ಡಿಕ್ಕಿ ಹೊಡೆದು ಹೆಣ್ಣಾನೆ ಮೃತಪಟ್ಟಿದೆ. ಗುಂಡ್ಲುಪೇಟೆಯಿಂದ ಕೇರಳಕ್ಕೆ ತೆರಳುವ ರಸ್ತೆಯಲ್ಲಿ ಘಟನೆ‌ ನಡೆದಿದೆ. ರಾತ್ರಿ ಸಂಚಾರ ನಿಷೇಧ ಇರುವುದರಿಂದ ರಭಸವಾಗಿ ಲಾರಿ ಹೋಗಿದ್ದು ಈ ವೇಳೆ ರಸ್ತೆಯ ಮಧ್ಯದಲ್ಲಿ‌ ಇದ್ದ ಆನೆಗೆ ಲಾರಿ ಡಿಕ್ಕಿ ಹೊಡೆದಿದೆ. ಲಾರಿ ಡಿಕ್ಕಿಯಿಂದ ರಸ್ತೆಯಲ್ಲೇ ಆನೆ ಮೃತಪಟ್ಟಿದೆ. ತಮಿಳುನಾಡು ಮೂಲದ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ.

ಇನ್ನು ಘಟನೆಗೆ ಪರಿಸರವಾದಿಗಳು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ವಾಹನಗಳ ಅತಿ ವೇಗವೇ ಅಪಘಾತಕ್ಕೆ ಕಾರಣ. ರಾತ್ರಿ 9ರಿಂದ ಬೆಳಿಗ್ಗೆ 6 ರವರೆಗೆ ವಾಹನ ಸಂಚಾರ ನಿಷೇಧ ಇರೋದ್ರಿಂದ ಸಂಜೆ ವೇಳೆ ಬೇಗ ಹೋಗಲು ವಾಹನಗಳು ಇಲ್ಲಿ ವೇಗವಾಗಿ ಸಂಚಾರ ಮಾಡ್ತಿವೆ. ರಾತ್ರಿ 9 ರ ಬದಲು ಸಂಜೆ 6 ರಿಂದಲೇ ವಾಹನ ಸಂಚಾರಕ್ಕೆ ನಿಷೇಧ ಹೇರಬೇಕು. ವಾಹನಗಳ ವೇಗಕ್ಕೆ ಕಡಿವಾಣ ಹಾಕಬೇಕು. ಕಾಡಿನ ಮಧ್ಯೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಡುಬ್ಬಗಳನ್ನು( Road Humps) ನಿರ್ಮಿಸಬೇಕು ಎಂದು ಆಗ್ರಹಿಸಿದ್ದಾರೆ.

ಹಂದಿಗಳ ಹಾವಳಿಗೆ ರೈತರು ಕಂಗಾಲು

ಕಲಬುರಗಿ: ಚಿತ್ತೂರು ತಾಲೂಕಿನ ವಾಡಿ ಪಟ್ಟಣದಲ್ಲಿ ಸಾಕು ಹಂದಿಗಳ ಹಾವಳಿಗೆ ರೈತರು ಕಂಗಾಲಾಗಿದ್ದಾರೆ. ಹಂದಿಗಳು ವಾಡಿ ಪಟ್ಟಣದ ಸುತ್ತಮುತ್ತಲಿನ ಹೊಲ ಗದ್ದೆಗಳಲ್ಲಿನ ಬೆಳೆಗಳನ್ನು ತಿಂದು ನಾಶ ಮಾಡುತ್ತಿವೆ. ಜೋಳ, ತೊಗರಿ ಸೇರಿ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಹಂದಿಗಳನ್ನು ಮೇಯಲು ಬಿಟ್ಟಿರುವ ಮಾಲೀಕರ ವಿರುದ್ಧ ಕ್ರಮಕೈಗೊಳ್ಳುವಂತೆ ಪುರಸಭೆ ಅಧಿಕಾರಿಗಳಿಗೆ ರೈತರು ಆಗ್ರಹಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:05 am, Wed, 14 December 22

ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!