AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಾಪ್ ಸಿಂಹಗೆ ಆಸೆ ಇದ್ರೆ ಇನ್ನೊಂದು ಮದುವೆಯಾಗಿ ಅನುಭವ ನಮಗೆ ಹೇಳಲಿ: ತನ್ವೀರ್ ಸೇಠ್

ಗೃಹಲಕ್ಷ್ಮೀ ಯೋಜನೆಯಿಂದ ಕುಟುಂಬಗಳಲ್ಲಿ ಒಡಕಾಗುತ್ತಿದೆ. ಮುಸ್ಲಿಮರಿಗೆ 2-3 ಜನ ಪತ್ನಿಯರಿದ್ದರೇ ಯಜಮಾನಿಯನ್ನ ಹೇಗೆ ಗುರುತಿಸುತ್ತೀರಾ? ಎಂಬ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಶಾಸಕ ತನ್ವೀರ್ ಸೇಠ್ ತಿರುಗೇಟು ನೀಡಿದ್ದಾರೆ.

ಪ್ರತಾಪ್ ಸಿಂಹಗೆ ಆಸೆ ಇದ್ರೆ ಇನ್ನೊಂದು ಮದುವೆಯಾಗಿ ಅನುಭವ ನಮಗೆ ಹೇಳಲಿ: ತನ್ವೀರ್ ಸೇಠ್
ಪ್ರತಾಪ್​ ಸಿಂಹ (ಎಡಚಿತ್ರ) ತನ್ವೀರ್ ಸೇಠ್​ (ಬಲಚಿತ್ರ)
ವಿವೇಕ ಬಿರಾದಾರ
|

Updated on:Jun 17, 2023 | 5:53 PM

Share

ಮೈಸೂರು: ಗೃಹಲಕ್ಷ್ಮೀ (Gruha Lakshmi) ಯೋಜನೆಯಿಂದ ಕುಟುಂಬಗಳಲ್ಲಿ ಒಡಕಾಗುತ್ತಿದೆ. ಮುಸ್ಲಿಮರಿಗೆ 2-3 ಜನ ಪತ್ನಿಯರಿದ್ದರೇ ಯಜಮಾನಿಯನ್ನ ಹೇಗೆ ಗುರುತಿಸುತ್ತೀರಾ? ಎಂಬ ಸಂಸದ ಪ್ರತಾಪ್ ಸಿಂಹ (Pratap Simha) ಹೇಳಿಕೆಗೆ ಶಾಸಕ ತನ್ವೀರ್ ಸೇಠ್ (Tanveer Seth) ತಿರುಗೇಟು ನೀಡಿದ್ದಾರೆ. ಸಂಸದ ಪ್ರತಾಪ್ ಸಿಂಹ ಅವರಿಗೆ ಆಸೆ ಇದ್ದರೇ ಇನ್ನೊಂದು ಮದುವೆ ಆಗಲಿ. ಅದರ ಅನುಭವವನ್ನು ನಮಗೆ ಹೇಳಲಿ ಎಂದರು.

ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿಗೆ ಸಂಪುಟ ಒಪ್ಪಿಗೆ ನೀಡಿದೆ. ಸಚಿವ ಸಂಪುಟ ಸಭೆಯಲ್ಲಿ ಏನು ಚರ್ಚೆಯಾಗಿದೆ ಎಂದು ಗೊತ್ತಿಲ್ಲ. ಮುಂದೆ ಸದನದಲ್ಲಿ ಈ ವಿಚಾರ ಚರ್ಚೆಗೆ ಬಂದಾಗ ಉತ್ತರಿಸುತ್ತೇನೆ ಎಂದು ಮೈಸೂರಿನಲ್ಲಿ ನರಸಿಂಹರಾಜ ಕ್ಷೇತ್ರದ​​ ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ.

ಇದನ್ನೂ ಓದಿ: ಗ್ಯಾರಂಟಿಗಳ ಜಾರಿಗೆ ತಗಲುವ ವೆಚ್ಚವನ್ನು ಹೇಗೆ ಕ್ರೋಢೀಕರಿಸುತ್ತಾರೆ ಅಂತ ಮೇಧಾವಿ ಸಿದ್ದರಾಮಯ್ಯ ಹೇಳಲಿ: ಪ್ರತಾಪ್ ಸಿಂಹ

ಸಚಿವ ಸ್ಥಾನ ಸಿಗದಿದ್ದಕ್ಕೆ ನನಗೆ ಬೇಸರವಾಗಿಲ್ಲ. ರಾಜ್ಯದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದಿದ್ದಕ್ಕೆ ನನಗೆ ಖುಷಿಯಿದೆ. ಅಧಿಕಾರ ಹಂಚಿಕೆ ಬಗ್ಗೆಯೂ ನನಗೆ ಗೊತ್ತಿಲ್ಲ. ಮನುಷ್ಯನ ಆಸೆಗೆ ಕೊನೆಯಿಲ್ಲ. 34 ಕ್ಕೆ 34 ಸಚಿವ ಸ್ಥಾನಗಳು ಭರ್ತಿಯಾಗಿವೆ. ಅಧಿಕಾರ ಹಂಚಿಕೆ ಸಂಬಂಧ ನಡೆದಿರುವ ಗೌಪ್ಯ ಸಭೆಯ ಬಗ್ಗೆಯೂ ನನಗೆ ಗೊತ್ತಿಲ್ಲ ಎಂದು ಜಾರಿಕೊಂಡರು.

ಕೋಮು ಗಲಭೆಯಲ್ಲಿ ಮೃತಪಟ್ಟ ಕುಟುಂಬಗಳಿಗೆ ಪರಿಹಾರ ನೀಡಿದ ವಿಚಾರವಾಗಿ ಮಾತನಾಡಿದ ಅವರು ತಲಾ 25 ಲಕ್ಷ ರೂ. ಪರಿಹಾರ ನೀಡಿದ್ದಕ್ಕೆ ಸಹಮತವಿದೆ. ಹಿಂದಿನ ಬಿಜೆಪಿ ಸರ್ಕಾರ ಪರಿಹಾರ ನೀಡುವಲ್ಲಿ ತಾರತಮ್ಯ ಮಾಡಿತ್ತು. ಬಿಜೆಪಿ ಸರ್ಕಾರ ಮಾಡಿದ್ದ ತಪ್ಪನ್ನು ಕಾಂಗ್ರೆಸ್ ಸರ್ಕಾರ ಸರಿಪಡಿಸಿದೆ. ಬಿಜೆಪಿ ಅವಧಿಯಲ್ಲಿ ಆಗಿದ್ದ ಅನ್ಯಾಯವನ್ನು ಕಾಂಗ್ರೆಸ್​ ಸರ್ಕಾರ ಸರಿಮಾಡಿದೆ ಎಂದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ  ಕ್ಲಿಕ್ ಮಾಡಿ

Published On - 5:51 pm, Sat, 17 June 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ