AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಾಪ್ ಸಿಂಹಗೆ ಆಸೆ ಇದ್ರೆ ಇನ್ನೊಂದು ಮದುವೆಯಾಗಿ ಅನುಭವ ನಮಗೆ ಹೇಳಲಿ: ತನ್ವೀರ್ ಸೇಠ್

ಗೃಹಲಕ್ಷ್ಮೀ ಯೋಜನೆಯಿಂದ ಕುಟುಂಬಗಳಲ್ಲಿ ಒಡಕಾಗುತ್ತಿದೆ. ಮುಸ್ಲಿಮರಿಗೆ 2-3 ಜನ ಪತ್ನಿಯರಿದ್ದರೇ ಯಜಮಾನಿಯನ್ನ ಹೇಗೆ ಗುರುತಿಸುತ್ತೀರಾ? ಎಂಬ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಶಾಸಕ ತನ್ವೀರ್ ಸೇಠ್ ತಿರುಗೇಟು ನೀಡಿದ್ದಾರೆ.

ಪ್ರತಾಪ್ ಸಿಂಹಗೆ ಆಸೆ ಇದ್ರೆ ಇನ್ನೊಂದು ಮದುವೆಯಾಗಿ ಅನುಭವ ನಮಗೆ ಹೇಳಲಿ: ತನ್ವೀರ್ ಸೇಠ್
ಪ್ರತಾಪ್​ ಸಿಂಹ (ಎಡಚಿತ್ರ) ತನ್ವೀರ್ ಸೇಠ್​ (ಬಲಚಿತ್ರ)
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Jun 17, 2023 | 5:53 PM

Share

ಮೈಸೂರು: ಗೃಹಲಕ್ಷ್ಮೀ (Gruha Lakshmi) ಯೋಜನೆಯಿಂದ ಕುಟುಂಬಗಳಲ್ಲಿ ಒಡಕಾಗುತ್ತಿದೆ. ಮುಸ್ಲಿಮರಿಗೆ 2-3 ಜನ ಪತ್ನಿಯರಿದ್ದರೇ ಯಜಮಾನಿಯನ್ನ ಹೇಗೆ ಗುರುತಿಸುತ್ತೀರಾ? ಎಂಬ ಸಂಸದ ಪ್ರತಾಪ್ ಸಿಂಹ (Pratap Simha) ಹೇಳಿಕೆಗೆ ಶಾಸಕ ತನ್ವೀರ್ ಸೇಠ್ (Tanveer Seth) ತಿರುಗೇಟು ನೀಡಿದ್ದಾರೆ. ಸಂಸದ ಪ್ರತಾಪ್ ಸಿಂಹ ಅವರಿಗೆ ಆಸೆ ಇದ್ದರೇ ಇನ್ನೊಂದು ಮದುವೆ ಆಗಲಿ. ಅದರ ಅನುಭವವನ್ನು ನಮಗೆ ಹೇಳಲಿ ಎಂದರು.

ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿಗೆ ಸಂಪುಟ ಒಪ್ಪಿಗೆ ನೀಡಿದೆ. ಸಚಿವ ಸಂಪುಟ ಸಭೆಯಲ್ಲಿ ಏನು ಚರ್ಚೆಯಾಗಿದೆ ಎಂದು ಗೊತ್ತಿಲ್ಲ. ಮುಂದೆ ಸದನದಲ್ಲಿ ಈ ವಿಚಾರ ಚರ್ಚೆಗೆ ಬಂದಾಗ ಉತ್ತರಿಸುತ್ತೇನೆ ಎಂದು ಮೈಸೂರಿನಲ್ಲಿ ನರಸಿಂಹರಾಜ ಕ್ಷೇತ್ರದ​​ ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ.

ಇದನ್ನೂ ಓದಿ: ಗ್ಯಾರಂಟಿಗಳ ಜಾರಿಗೆ ತಗಲುವ ವೆಚ್ಚವನ್ನು ಹೇಗೆ ಕ್ರೋಢೀಕರಿಸುತ್ತಾರೆ ಅಂತ ಮೇಧಾವಿ ಸಿದ್ದರಾಮಯ್ಯ ಹೇಳಲಿ: ಪ್ರತಾಪ್ ಸಿಂಹ

ಸಚಿವ ಸ್ಥಾನ ಸಿಗದಿದ್ದಕ್ಕೆ ನನಗೆ ಬೇಸರವಾಗಿಲ್ಲ. ರಾಜ್ಯದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದಿದ್ದಕ್ಕೆ ನನಗೆ ಖುಷಿಯಿದೆ. ಅಧಿಕಾರ ಹಂಚಿಕೆ ಬಗ್ಗೆಯೂ ನನಗೆ ಗೊತ್ತಿಲ್ಲ. ಮನುಷ್ಯನ ಆಸೆಗೆ ಕೊನೆಯಿಲ್ಲ. 34 ಕ್ಕೆ 34 ಸಚಿವ ಸ್ಥಾನಗಳು ಭರ್ತಿಯಾಗಿವೆ. ಅಧಿಕಾರ ಹಂಚಿಕೆ ಸಂಬಂಧ ನಡೆದಿರುವ ಗೌಪ್ಯ ಸಭೆಯ ಬಗ್ಗೆಯೂ ನನಗೆ ಗೊತ್ತಿಲ್ಲ ಎಂದು ಜಾರಿಕೊಂಡರು.

ಕೋಮು ಗಲಭೆಯಲ್ಲಿ ಮೃತಪಟ್ಟ ಕುಟುಂಬಗಳಿಗೆ ಪರಿಹಾರ ನೀಡಿದ ವಿಚಾರವಾಗಿ ಮಾತನಾಡಿದ ಅವರು ತಲಾ 25 ಲಕ್ಷ ರೂ. ಪರಿಹಾರ ನೀಡಿದ್ದಕ್ಕೆ ಸಹಮತವಿದೆ. ಹಿಂದಿನ ಬಿಜೆಪಿ ಸರ್ಕಾರ ಪರಿಹಾರ ನೀಡುವಲ್ಲಿ ತಾರತಮ್ಯ ಮಾಡಿತ್ತು. ಬಿಜೆಪಿ ಸರ್ಕಾರ ಮಾಡಿದ್ದ ತಪ್ಪನ್ನು ಕಾಂಗ್ರೆಸ್ ಸರ್ಕಾರ ಸರಿಪಡಿಸಿದೆ. ಬಿಜೆಪಿ ಅವಧಿಯಲ್ಲಿ ಆಗಿದ್ದ ಅನ್ಯಾಯವನ್ನು ಕಾಂಗ್ರೆಸ್​ ಸರ್ಕಾರ ಸರಿಮಾಡಿದೆ ಎಂದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ  ಕ್ಲಿಕ್ ಮಾಡಿ

Published On - 5:51 pm, Sat, 17 June 23

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ