AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಾಪ್ ಸಿಂಹಗೆ ಆಸೆ ಇದ್ರೆ ಇನ್ನೊಂದು ಮದುವೆಯಾಗಿ ಅನುಭವ ನಮಗೆ ಹೇಳಲಿ: ತನ್ವೀರ್ ಸೇಠ್

ಗೃಹಲಕ್ಷ್ಮೀ ಯೋಜನೆಯಿಂದ ಕುಟುಂಬಗಳಲ್ಲಿ ಒಡಕಾಗುತ್ತಿದೆ. ಮುಸ್ಲಿಮರಿಗೆ 2-3 ಜನ ಪತ್ನಿಯರಿದ್ದರೇ ಯಜಮಾನಿಯನ್ನ ಹೇಗೆ ಗುರುತಿಸುತ್ತೀರಾ? ಎಂಬ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಶಾಸಕ ತನ್ವೀರ್ ಸೇಠ್ ತಿರುಗೇಟು ನೀಡಿದ್ದಾರೆ.

ಪ್ರತಾಪ್ ಸಿಂಹಗೆ ಆಸೆ ಇದ್ರೆ ಇನ್ನೊಂದು ಮದುವೆಯಾಗಿ ಅನುಭವ ನಮಗೆ ಹೇಳಲಿ: ತನ್ವೀರ್ ಸೇಠ್
ಪ್ರತಾಪ್​ ಸಿಂಹ (ಎಡಚಿತ್ರ) ತನ್ವೀರ್ ಸೇಠ್​ (ಬಲಚಿತ್ರ)
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Jun 17, 2023 | 5:53 PM

Share

ಮೈಸೂರು: ಗೃಹಲಕ್ಷ್ಮೀ (Gruha Lakshmi) ಯೋಜನೆಯಿಂದ ಕುಟುಂಬಗಳಲ್ಲಿ ಒಡಕಾಗುತ್ತಿದೆ. ಮುಸ್ಲಿಮರಿಗೆ 2-3 ಜನ ಪತ್ನಿಯರಿದ್ದರೇ ಯಜಮಾನಿಯನ್ನ ಹೇಗೆ ಗುರುತಿಸುತ್ತೀರಾ? ಎಂಬ ಸಂಸದ ಪ್ರತಾಪ್ ಸಿಂಹ (Pratap Simha) ಹೇಳಿಕೆಗೆ ಶಾಸಕ ತನ್ವೀರ್ ಸೇಠ್ (Tanveer Seth) ತಿರುಗೇಟು ನೀಡಿದ್ದಾರೆ. ಸಂಸದ ಪ್ರತಾಪ್ ಸಿಂಹ ಅವರಿಗೆ ಆಸೆ ಇದ್ದರೇ ಇನ್ನೊಂದು ಮದುವೆ ಆಗಲಿ. ಅದರ ಅನುಭವವನ್ನು ನಮಗೆ ಹೇಳಲಿ ಎಂದರು.

ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿಗೆ ಸಂಪುಟ ಒಪ್ಪಿಗೆ ನೀಡಿದೆ. ಸಚಿವ ಸಂಪುಟ ಸಭೆಯಲ್ಲಿ ಏನು ಚರ್ಚೆಯಾಗಿದೆ ಎಂದು ಗೊತ್ತಿಲ್ಲ. ಮುಂದೆ ಸದನದಲ್ಲಿ ಈ ವಿಚಾರ ಚರ್ಚೆಗೆ ಬಂದಾಗ ಉತ್ತರಿಸುತ್ತೇನೆ ಎಂದು ಮೈಸೂರಿನಲ್ಲಿ ನರಸಿಂಹರಾಜ ಕ್ಷೇತ್ರದ​​ ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ.

ಇದನ್ನೂ ಓದಿ: ಗ್ಯಾರಂಟಿಗಳ ಜಾರಿಗೆ ತಗಲುವ ವೆಚ್ಚವನ್ನು ಹೇಗೆ ಕ್ರೋಢೀಕರಿಸುತ್ತಾರೆ ಅಂತ ಮೇಧಾವಿ ಸಿದ್ದರಾಮಯ್ಯ ಹೇಳಲಿ: ಪ್ರತಾಪ್ ಸಿಂಹ

ಸಚಿವ ಸ್ಥಾನ ಸಿಗದಿದ್ದಕ್ಕೆ ನನಗೆ ಬೇಸರವಾಗಿಲ್ಲ. ರಾಜ್ಯದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದಿದ್ದಕ್ಕೆ ನನಗೆ ಖುಷಿಯಿದೆ. ಅಧಿಕಾರ ಹಂಚಿಕೆ ಬಗ್ಗೆಯೂ ನನಗೆ ಗೊತ್ತಿಲ್ಲ. ಮನುಷ್ಯನ ಆಸೆಗೆ ಕೊನೆಯಿಲ್ಲ. 34 ಕ್ಕೆ 34 ಸಚಿವ ಸ್ಥಾನಗಳು ಭರ್ತಿಯಾಗಿವೆ. ಅಧಿಕಾರ ಹಂಚಿಕೆ ಸಂಬಂಧ ನಡೆದಿರುವ ಗೌಪ್ಯ ಸಭೆಯ ಬಗ್ಗೆಯೂ ನನಗೆ ಗೊತ್ತಿಲ್ಲ ಎಂದು ಜಾರಿಕೊಂಡರು.

ಕೋಮು ಗಲಭೆಯಲ್ಲಿ ಮೃತಪಟ್ಟ ಕುಟುಂಬಗಳಿಗೆ ಪರಿಹಾರ ನೀಡಿದ ವಿಚಾರವಾಗಿ ಮಾತನಾಡಿದ ಅವರು ತಲಾ 25 ಲಕ್ಷ ರೂ. ಪರಿಹಾರ ನೀಡಿದ್ದಕ್ಕೆ ಸಹಮತವಿದೆ. ಹಿಂದಿನ ಬಿಜೆಪಿ ಸರ್ಕಾರ ಪರಿಹಾರ ನೀಡುವಲ್ಲಿ ತಾರತಮ್ಯ ಮಾಡಿತ್ತು. ಬಿಜೆಪಿ ಸರ್ಕಾರ ಮಾಡಿದ್ದ ತಪ್ಪನ್ನು ಕಾಂಗ್ರೆಸ್ ಸರ್ಕಾರ ಸರಿಪಡಿಸಿದೆ. ಬಿಜೆಪಿ ಅವಧಿಯಲ್ಲಿ ಆಗಿದ್ದ ಅನ್ಯಾಯವನ್ನು ಕಾಂಗ್ರೆಸ್​ ಸರ್ಕಾರ ಸರಿಮಾಡಿದೆ ಎಂದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ  ಕ್ಲಿಕ್ ಮಾಡಿ

Published On - 5:51 pm, Sat, 17 June 23

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ