AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಾಥ ಶವಗಳ ಸಂಸ್ಕಾರ: ಮೈಸೂರಿನ ಬಾಡಿ ಮಿಯಾನ್​ಗೆ ಪದ್ಮಶ್ರೀ ಪ್ರಶಸ್ತಿ ನೀಡುವಂತೆ ಪ್ರಧಾನಿಗೆ ಪತ್ರ

ಮೈಸೂರಿನ "ಬಾಡಿ ಮಿಯಾನ್​​" ಅಯೂಬ್ ಅಹಮದ್‌ ಸಾವಿರಾರು ಅನಾಥ ಶವಗಳ ಸಂಸ್ಕಾರ ಮಾಡುವ ಮೂಲಕ ಸಾಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇವರಗಿ ಪದ್ಮಶ್ರೀ ಪ್ರಶಸ್ತಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಶಾಸಕ ತನ್ವೀರ್ ಸೇಠ್ ಮತ್ತು ಸಂಸದ ಪ್ರತಾಪಸಿಂಹ ಪತ್ರ ಬರೆದಿದ್ದಾರೆ.

ಅನಾಥ ಶವಗಳ ಸಂಸ್ಕಾರ: ಮೈಸೂರಿನ ಬಾಡಿ ಮಿಯಾನ್​ಗೆ ಪದ್ಮಶ್ರೀ ಪ್ರಶಸ್ತಿ ನೀಡುವಂತೆ ಪ್ರಧಾನಿಗೆ ಪತ್ರ
ಮೈಸೂರಿನ ಬಾಡಿ ಮಿಯಾನ್​
ರಾಮ್​, ಮೈಸೂರು
| Edited By: ವಿವೇಕ ಬಿರಾದಾರ|

Updated on: Jul 19, 2023 | 7:59 AM

Share

ಮೈಸೂರು: ಸಾಮಾಜದಲ್ಲಿ ನಮ್ಮ ಮಧ್ಯೆ ಅದೆಷ್ಟೋ ಕಾಣದ ಕೈಗಳು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿವೆ. ಆ ಕೈಗಳು ಬೆಳಕಿಗೆ ಬಾರದೆ ಎಲೆ ಮರೆ ಕಾಯಿಯಂತೆ ಸೇವೆಯಲ್ಲೇ ನಿರತವಾಗಿರುತ್ತವೆ. ಅದರಂತೆ ಮೈಸೂರಿನ “ಬಾಡಿ ಮಿಯಾನ್​​” (Body Miyan) ಅಯೂಬ್ ಅಹಮದ್‌ ಸಾವಿರಾರು ಅನಾಥ ಶವಗಳ ಸಂಸ್ಕಾರ ಮಾಡುವ ಮೂಲಕ ಸಾಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇವರಗಿ ಪದ್ಮಶ್ರೀ ಪ್ರಶಸ್ತಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ (Narendra Modi) ಶಾಸಕ ತನ್ವೀರ್ ಸೇಠ್ (Tanveer Seth) ಮತ್ತು ಸಂಸದ ಪ್ರತಾಪ್ ಸಿಂಹ (Pratap Simha) ಪತ್ರ ಬರೆದಿದ್ದಾರೆ.

ಅಯೂಬ್ ಅಹಮದ್‌ ಅವರು ಕಳೆದ 22 ವರ್ಷಗಳಿಂದ ಈ ಕಾರ್ಯ ಮಾಡುತ್ತಿದ್ದು ಇದುವರೆಗೂ ತಮ್ಮದೆ ಖರ್ಚಿನಲ್ಲಿ 16 ಸಾವಿರ ಅನಾಥ ಶವಗಳ ಸಂಸ್ಕಾರ ಮಾಡಿದ್ದಾರೆ. ಇವರು ಮೈಸೂರು ಮಾತ್ರವಲ್ಲದೇ ಚಾಮರಾಜನಗರ ಸೇರಿದಂತೆ ಹಲವು ಭಾಗಗಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಅಯೂಬ್ ಅಹಮದ್‌ ಅವರು ಅನಾಥಶ್ರಮ ಮತ್ತು ಟೈಲರಿಂಗ್ ತರಬೇತಿ ಸಂಸ್ಥೆ ನಡೆಸುತ್ತಿದ್ದಾರೆ.

ಯಾರು ಈ ಬಾಡಿ ಮಿಯಾನ್​

ಅಯೂಬ್ ಅಹಮದ್‌ 22 ವರ್ಷಗಳ ಹಿಂದೆ ಗುಂಡ್ಲುಪೇಟೆಯಿಂದ ಮೈಸೂರಿಗೆ ಬಸ್​​​ನಲ್ಲಿ ಪ್ರಯಾಣಿಸುತ್ತಿದ್ದರು. ಬಸ್ಸಿನಲ್ಲಿ ಹೋಗುತ್ತಿದ್ದಾಗ ರಸ್ತೆಯಲ್ಲಿ ಅನಾಥ ಶವವೊಂದನ್ನು ನೋಡಿದರು. ಎಂಟು ಗಂಟೆಗಳ ನಂತರ ಹಿಂದಿರುಗುವ ಪ್ರಯಾಣದಲ್ಲೂ ಶವ ಹಾಗೆ ಇತ್ತು. ಇದನ್ನು ಕಂಡು ಮರುಗಿದ ಅಯೂಬ್​ ಅಹಮದ್​ ಅಂದಿನಿಂದ ಅನಾಥ ಶವಗಳ ಸಂಸ್ಕಾರ ಮಾಡಲು ಪ್ರಾರಂಭಿಸಿದರು.

ಇದನ್ನೂ ಓದಿ: ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​ ವೇಯಲ್ಲಿ ಅಪಘಾತ ಹೆಚ್ಚಳ; ವಿಶೇಷ ಸಮಿತಿ ರಚಿಸಿದ ಹೆದ್ದಾರಿ ಪ್ರಾಧಿಕಾರ

ಮೈಸೂರಿನ ಸುತ್ತಮುತ್ತಲಿನ ಊರುಗಳಿಂದ ಇವರಿಗೆ ಕರೆ ಮಾಡಿ ವಿಷಯ ತಿಳಿಸುತ್ತಾರೆ. ನಂತರ ಇವರು ಅಲ್ಲಿಂದ ಅನಾಥ ಶವಗಳನ್ನು ತಂದು ಕೆಆರ್ ಆಸ್ಪತ್ರೆಯಲ್ಲಿ ಮೂರು ದಿನಗಳ ಕಾಲ ಇಡುತ್ತಾರೆ. ಬಳಿಕ ತಮ್ಮ ಅಂಬಾಸಿಡರ್ ಕಾರನಲ್ಲಿ ತೆಗೆದುಕೊಂಡು ಹೋಗಿ ಅಂತಿಮ ವಿಧಿವಿಧಾನ ನೆರವೇರಿಸುತ್ತಾರೆ. ಅಲ್ಲದೇ ಕೊರೊನಾ ಸಮಯದಲ್ಲೂ ಅನೇಕ ಶವಗಳ ಸಂಸ್ಕಾರ ಮಾಡಿದ್ದಾರೆ.

ಇವರ ಈ ಸಮಾಜ ಕಾರ್ಯಕ್ಕೆ 2020ರಲ್ಲಿ ಅಮೆರಿಕದ ಹಾರ್ಮೊನಿ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್​​ ಲಭಿಸಿದೆ. ಹಾಗೇ ಮೈಸೂರು ಜಿಲ್ಲಾಡಳಿತ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು