AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಇಂದಿನಿಂದ ಹೊಸ ರೂಲ್ಸ್, ಉಲ್ಲಂಘಿಸಿದ್ರೆ ದಂಡ ಫಿಕ್ಸ್!

ಪ್ರಸಿದ್ಧ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ 'ತ್ಯಾಜ್ಯದ ಬೆಟ್ಟ' ದಿನೇ ದಿನೆ ಬೆಳೆಯುತ್ತಿದೆ. ಹೀಗಾಗಿ ಮೈಸೂರು ಅರಣ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಎಲ್ಲೊಂದರಲ್ಲಿ ತ್ಯಾಜ್ಯ ಬಿಸಾಡುವುದು, ಪ್ಲಾಸ್ಟಿಕ್ ಬಿಸಾಕಿದರೆ ದಡ್ಡ ಹಾಕಲು ತೀರ್ಮಾನಿಸಿದೆ. ಒಂದೊಂದಕ್ಕೆ ಒಂದು ದಂಡ ಫಿಕ್ಸ್ ಮಾಡಲಾಗಿದ್ದು, ಅದು ಇಂದಿನಿಂದ ಜಾರಿಗೆ ಬಂದಿದೆ. ಹಾಗಾದ್ರೆ, ಯಾವುದಕ್ಕೆ ಎಷ್ಟು ದಂಡ ಎನ್ನುವುದು ಈ ಕೆಳಗಿನಂತಿದೆ ನೋಡಿ.

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಇಂದಿನಿಂದ ಹೊಸ ರೂಲ್ಸ್, ಉಲ್ಲಂಘಿಸಿದ್ರೆ ದಂಡ ಫಿಕ್ಸ್!
ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನ
ರಾಮ್​, ಮೈಸೂರು
| Edited By: |

Updated on:Sep 01, 2023 | 8:16 AM

Share

ಮೈಸೂರು, (ಸೆಪ್ಟೆಂಬರ್ 01): ಚಾಮುಂಡಿಬೆಟ್ಟವನ್ನು (Chamundi Hills) ಕಸ (garbage) ಹಾಗೂ ಪ್ಲಾಸ್ಟಿಕ್ ಮುಕ್ತ ಮಾಡಲು ಮೈಸೂರು(Mysuru) ಅರಣ್ಯ ಸಂರಕ್ಷಣಾಧಿಕಾರಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ. ರಾಜ್ಯ ಅಲ್ಲದೇ ಹೊರ ರಾಜ್ಯ, ದೇಶಗಳಿಂದಲೂ ದೇವರ ದರ್ಶನಕ್ಕಾಗಿ ನಿತ್ಯ ಸಾವಿರಾರು ಭಕ್ತರು ಬೆಟ್ಟಕ್ಕೆ ಬರುತ್ತಿದ್ದು, ಅವರು ತಿನ್ನುವ ತಿಂಡಿ ಪೊಟ್ಟಣ, ಬಿಸ್ಕತ್ ಕವರ್‌ಗಳು, ನೀರು, ಜ್ಯೂಸ್ ಬಾಟಲಿಗಳು ರಸ್ತೆಯ ಇಕ್ಕೆಲಗಳಲ್ಲಿ ಬಿದ್ದು, ಪರಿಸರಕ್ಕೆ ಹಾನಿಯುಂಟು ಮಾಡುತ್ತಿವೆ. ಇದರಿಂದ ಎಚ್ಚೆತ್ತಕೊಂಡಿರುವ ಮೈಸೂರು ಅರಣ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಇಂದಿನಿಂದ (ಸೆಪ್ಟೆಂಬರ್ 01) ಹೊಸ ಆದೇಶ ಜಾರಿಯಾಗಿದೆ.

ಪ್ಲಾಸ್ಟಿಕ್ ಬಿಸಾಕಿದರೆ 500 ರೂ ದಂಡ. ಮೊದಲ ಬಾರಿಗೆ ತ್ಯಾಜ್ಯ ಬಿಸಾಡಿದರೆ 2,500 ದಂಡ, ಎರಡನೇ ಬಾರಿಗೆ 5 ಸಾವಿರ ರೂ. ಇನ್ನು ಮೂರನೇ ಬಾರಿಗೆ 10 ಸಾವಿರ ಹಾಗೂ ಲೈಸನ್ಸ್ ರದ್ದು ಮಾಡಲಾಗುವುದು ಎಂದು ಚಾಮುಂಡಿಬೆಟ್ಟದ ಅಂಗಡಿಯವರಿಗೂ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಮೈಸೂರು: ಐತಿಹಾಸಿಕ ದೇವರಾಜ ಮಾರುಕಟ್ಟೆ ಮರುನಿರ್ಮಾಣ, ನೆಲಸಮ ವಿಚಾರ: ಹೈಕೋರ್ಟ್ ಆದೇಶ, ಆತಂಕದಲ್ಲಿ ವ್ಯಾಪಾರಿಗಳು

ಯಾವುದಕ್ಕೆ ಎಷ್ಟೆಷ್ಟು ದಂಡ?

  • ಸ್ಟಿಕ್ ಬಿಸಾಕಿದರೆ 500 ರೂ ದಂಡ
  • ಮೊದಲ ಬಾರಿಗೆ ತ್ಯಾಜ್ಯ ಬಿಸಾಡಿದರೆ 2,500 ರೂ. ದಂಡ
  • ಎರಡನೇ ಬಾರಿಗೆ 5 ಸಾವಿರ ರೂ.
  • ಮೂರನೇ ಬಾರಿಗೆ 10 ಸಾವಿರ ಹಾಗೂ ಲೈಸನ್ಸ್ ರದ್ದು
  • ಅರಣ್ಯದ ಒಳಗೆ ತೆರಳಿದರೆ 500 ರೂ. ದಂಡ
  • ನಿರ್ಬಂಧಿತ ಪ್ರದೇಶದಲ್ಲಿ ವಾಹನ ನಿಲುಗಡೆ ಮಾಡಿದರೆ 1 ಸಾವಿರ ರೂ. ದಂಡ
  • ರಾತ್ರಿ 10 ರಿಂದ ಬೆ 6 ಗಂಟೆಯವರೆಗೆ ಚಾಮುಂಡಿಬೆಟ್ಟಕ್ಕೆ ನಿರ್ಬಂಧ
  • ಮದ್ಯ ಹಾನಿಕಾರಕ ವಸ್ತು ಸಾಗಿಸಿದರೆ 5 ಸಾವಿರ ರೂ. ದಂಡ
  • ಕಾಡು ಪ್ರಾಣಿಗಳಿಗೆ ಆಹಾರ ನೀಡಿದರೆ 1 ಸಾವಿರ ರೂ. ದಂಡ

ಇನ್ನಷ್ಟು ಮೈಸೂರು ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 7:39 am, Fri, 1 September 23

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!