AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಾರಸ್ವಾಮಿಯನ್ನ ವಾಪಸ್​ ಚನ್ನಪಟ್ಟಣಕ್ಕೆ ಕಳುಹಿಸಿ-ಡಿಕೆ ಶಿವಕುಮಾರ್​ ವಾಗ್ದಾಳಿ

ಲೋಕಸಭಾ ಚುನಾವಣೆ ಕಾವು ಜೋರಾಗಿದ್ದು, ಉಭಯ ಪಕ್ಷಗಳು ಆರೋಪ-ಪ್ರತ್ಯಾರೋಪಗಳ ಸುರಿಮಳೆಗೈಯುತ್ತಿದ್ದಾರೆ. ಅದರಂತೆ ಇಂದು (ಏ.20) ಮೈಸೂರು ಜಿಲ್ಲೆಯ ಕೆ.ಆರ್​ ನಗರದಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್​, ‘ಮಂಡ್ಯದಲ್ಲಿ ಸ್ಟಾರ್ ಚಂದ್ರು ಅಲ್ಲ ಅಭ್ಯರ್ಥಿ, ಸಿದ್ದರಾಮಯ್ಯ, ಡಿಕೆ ಅಭ್ಯರ್ಥಿ. ಲೋಕಸಭೆ ಚುನಾವಣೆಯಲ್ಲಿ ಸೋಲಿಸಿ ಕುಮಾರಸ್ವಾಮಿಯನ್ನು ವಾಪಸ್​ ಚನ್ನಪಟ್ಟಣಕ್ಕೆ ಕಳುಹಿಸಿ ಎಂದು ಕಿಡಿಕಾರಿದರು.

ಕುಮಾರಸ್ವಾಮಿಯನ್ನ ವಾಪಸ್​ ಚನ್ನಪಟ್ಟಣಕ್ಕೆ ಕಳುಹಿಸಿ-ಡಿಕೆ ಶಿವಕುಮಾರ್​ ವಾಗ್ದಾಳಿ
ಡಿಕೆ ಶಿವಕುಮಾರ್​
ರಾಮ್​, ಮೈಸೂರು
| Edited By: |

Updated on: Apr 20, 2024 | 4:06 PM

Share

ಮೈಸೂರು, ಏ.20: ‘ನಾವು ನಿನ್ನ ಬೆನ್ನಿಗೆ ಚೂರಿ ಹಾಕಿದ್ವಾ ಎಂದು ಹೆಚ್​ ಡಿ ಕುಮಾರಸ್ವಾಮಿ(HD Kumaraswamy) ವಿರುದ್ಧ ಡಿಕೆ ಶಿವಕುಮಾರ್(DK Shivakumar) ವಾಗ್ದಾಳಿ ನಡೆಸಿದ್ದಾರೆ. ಇಂದು(ಏ.20) ಮೈಸೂರು ಜಿಲ್ಲೆಯ ಕೆಆರ್ ನಗರದಲ್ಲಿ ಮಾತನಾಡಿದ ಅವರು, ‘ನನ್ನ ಜಮೀನಲ್ಲಿ ಕಲ್ಲು ಒಡೆಯೋಕೆ ಇವನ ಅನುಮತಿ ಕೇಳಬೇಕಾ?, ಎ ಟೀಂ, ಬಿ ಟೀಂ ಅಲ್ಲ ಈಗ ಬಿಜೆಪಿ ಜೆಡಿಎಸ್ ಪಾರ್ಟ್​ನರ್ಸ್​ ಆಗಿದ್ದಾರೆ.  ಮಂಡ್ಯದಲ್ಲಿ ಸ್ಟಾರ್ ಚಂದ್ರು ಅಲ್ಲ ಅಭ್ಯರ್ಥಿ, ಸಿದ್ದರಾಮಯ್ಯ, ಡಿಕೆ ಅಭ್ಯರ್ಥಿ. ಲೋಕಸಭೆ ಚುನಾವಣೆಯಲ್ಲಿ ಸೋಲಿಸಿ ಕುಮಾರಸ್ವಾಮಿಯನ್ನು ವಾಪಸ್​ ಚನ್ನಪಟ್ಟಣಕ್ಕೆ ಕಳುಹಿಸಿ ಎಂದು ಕಿಡಿಕಾರಿದರು.

ಕಾಂಗ್ರೆಸ್​ ಪಕ್ಷ ಒಂದು ಜಾತಿ, ಧರ್ಮದ‌ ಮೇಲೆ ನಿಂತಿಲ್ಲ. ಮೋದಿ ಅವರು 15 ಲಕ್ಷ ಹಣ ಹಾಕ್ತೇವೆ ಅಂದಿದ್ದರು. ಯಾರಿಗಾದರೂ ಬಂತಾ?, ಆದಾಯ ಡಬಲ್‌ ಆಯ್ತಾ ಅಥವಾ ಯುವಕರಿಗೆ ಸರ್ಕಾರಿ ಕೆಲಸ ಸಿಕ್ತಾ?. ಮತ್ತೆ ಏಕೆ ಪ್ರಧಾನಿ ಮೋದಿಗೆ ವೋಟ್​ ಕೇಳುವುದಕ್ಕೆ ಬರುತ್ತಿದ್ದಾರೆ ಎಂದು ಪ್ರಶ್ನಿಸಿದರು. ‘ನಾವು ಭ್ರಷ್ಟಾಚಾರ ತೆಗೆಯಬೇಕು ಎಂದು ಗ್ಯಾರಂಟಿ ಯೋಜನೆ ಜಾರಿ ಮಾಡಿದರೆ, ಹೆಚ್​ಡಿಕೆ ಅವರು ಇದರಿಂದ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದು ಹೇಳಿದ್ದಾರೆ. ಈ ಹಿನ್ನಲೆ ಹೆಚ್​ಡಿಕೆ ವಿರುದ್ಧ ಮಂಡ್ಯದ ಹೆಣ್ಣು ಮಕ್ಕಳು ರೊಚ್ಚಿಗೆದ್ದಿದ್ದಾರೆ.

ಇದನ್ನೂ ಓದಿ:ಮಂಡ್ಯ-ಮೈಸೂರು ಭಾಗಕ್ಕೆ ದೇವೇಗೌಡ ಮತ್ತು ಕುಮಾರಸ್ವಾಮಿ ಕೊಡುಗೆ ಏನೂ ಇಲ್ಲ: ಡಿಕೆ ಶಿವಕುಮಾರ್

ಕುಮಾರಸ್ವಾಮಿ ಅವರು ನಮ್ಮ ಬದುಕಿನ ಪ್ರಶ್ನೆ ಮಾಡುತ್ತಿದ್ದಾರೆ. ನೀನು ಸಿಎಂ, ನಿಮ್ಮ ತಂದೆ ಪ್ರಧಾನಿ ಆಗಿದ್ದರೋ ಅಲ್ಲೇ ನಿಲ್ಲಬೇಕಿತ್ತು. ಸಾ.ರಾ.ಮಹೇಶ್, ಪುಟ್ಟರಾಜು, ತಮ್ಮಣ್ಣಗೆ ಚಾಕಲೇಟ್​ ಕೊಟ್ಟರು, ಜೆಡಿಎಸ್​ನಲ್ಲಿ ಯಾರು ಕಾರ್ಯಕರ್ತರು ಇಲ್ಲವೇ.  ಡಿಕೆಶಿ ಒಕ್ಕಲಿಗ ಲೀಡರ್ ಅಲ್ಲ ಎಂದು ಸಾ.ರಾ.ಮಹೇಶ್ ಹೇಳಿದ್ದಾರೆ. ಒಕ್ಕಲಿಗ ನಾಯಕ ಎಂದು ಹೇಳಿದ್ನಾ, ನಾನು ಸರ್ವಜನಾಂಗದ ನಾಯಕ ಎಂದು ವಿಪಕ್ಷಗಳ ಹೇಳಿಕೆಗೆ ಟಾಂಗ್​ ಕೊಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು