AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆ ಭದ್ರತಾ ಲೋಪ: ಬಂಧಿತರು ಪ್ರತಾಪ್ ಸಿಂಹ ಐಟಿ ಸೆಲ್​ನಲ್ಲಿ ಕೆಲಸ ಮಾಡುತ್ತಿದ್ದರೆಂದ ಎಂ ಲಕ್ಷ್ಮಣ

ಲೋಕಸಭಾ ಕಲಾಪದ ವೇಳೆ ಭಾರಿ ಭದ್ರತಾ ಲೋಪ ಪ್ರಕರಣದ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ, ಬಂಧಿತ ಮನೋರಂಜನ್, ಪ್ರತಾಪ್ ಸಿಂಹ ಬಹಳ ಹತ್ತಿರವಿದ್ದ ವ್ಯಕ್ತಿ ಮತ್ತು ಪ್ರತಾಪ್ ಸಿಂಹ ಐಟಿ ಸೆಲ್​ನಲ್ಲಿ ಕೆಲಸ ನಿರ್ವಹಿಸುತ್ತಿದ್ದವರು ಎಂದು ಆರೋಪಿಸಿದ್ದಾರೆ. ಪ್ರತಾಪ್ ಸಿಂಹ ಕಚೇರಿಯನ್ನು ಸೀಜ್ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಲೋಕಸಭೆ ಭದ್ರತಾ ಲೋಪ: ಬಂಧಿತರು ಪ್ರತಾಪ್ ಸಿಂಹ ಐಟಿ ಸೆಲ್​ನಲ್ಲಿ ಕೆಲಸ ಮಾಡುತ್ತಿದ್ದರೆಂದ ಎಂ ಲಕ್ಷ್ಮಣ
ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ
ರಾಮ್​, ಮೈಸೂರು
| Edited By: |

Updated on:Dec 14, 2023 | 3:08 PM

Share

ಮೈಸೂರು, ಡಿಸೆಂಬರ್​​ 14: ಸಂಸತ್ ಭವನಕ್ಕೆ ನುಗ್ಗಿ ಕೋಲಾಹಲ ಎಬ್ಬಿಸಿದ್ದ ಬಂಧಿತರು ಸಂಸದ ಪ್ರತಾಪ್ ಸಿಂಹ ಐಟಿ ಸೆಲ್​ನಲ್ಲಿ ಕೆಲಸ ನಿರ್ವಹಿಸುತ್ತಿದ್ದವರು. ಬಂಧಿತ ಮನೋರಂಜನ್, ಪ್ರತಾಪ್ ಸಿಂಹ ಬಹಳ ಹತ್ತಿರವಿದ್ದ ವ್ಯಕ್ತಿ ಎಂದು ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ್ (M Lakshman) ಆರೋಪಿಸಿದ್ದಾರೆ. ನಗದರಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮೈಸೂರು, ಮಡಿಕೇರಿ ಹಾಗೂ ಡೆಲ್ಲಿಯಲ್ಲಿ ಇವರ ಜೊತೆ ಸಭೆ ನಡೆಸಿದ್ದಾರೆ. ಪ್ರತಾಪ್ ಜೊತೆ ಒಂದು ಸಭೆಯು ಆಗಿದೆ. ಆದರೆ ಯಾವಾಗ ಸಭೆ ಆಗಿದೆ ಎಂದು ಗೊತ್ತಿಲ್ಲ. ಪ್ರತಾಪ್ ಸಿಂಹ ಕಚೇರಿ ಸೀಜ್ ಮಾಡಬೇಕು ಎಂದು ಹೇಳಿದ್ದಾರೆ.

ನ್ಯಾಷನಲ್ ಸೆಕ್ಯೂರಿಟಿ ವಿಚಾರದಲ್ಲಿ ದಾಖಲೆ ಇಲ್ಲದೆ ನಾವು ಮಾತನಾಡುತ್ತಿಲ್ಲ. ನಾಳೆ ನ್ಯಾಷನಲ್ ಸೆಕ್ಯೂರಿಟಿ ಕೇಳಿದರೆ ದಾಖಲೆ ನೀಡಬೇಕಾಗುತ್ತದೆ. ಆದರಿಂದ ನಾವು ಹೇಳುವ ವಿಷಯ ಸತ್ಯಕ್ಕೆ ಹತ್ತಿರವಾದದ್ದು ಎಂದಿದ್ದಾರೆ.

ಇದನ್ನೂ ಓದಿ: ಲೋಕಸಭೆ ಭದ್ರತಾ ಲೋಪ: ಸಂಸದ ಪ್ರತಾಪ್ ಸಿಂಹ ಅಮಾನತಿಗೆ ಕಾಂಗ್ರೆಸ್ ನಾಯಕರ ಆಗ್ರಹ

ಇಲ್ಲಿಯವರೆಗೂ ಬಿಜೆಪಿ ಸಂಸದರು, ಸಚಿವರು, ಗೃಹ ಸಚಿವರು ಒಬ್ಬರು ಪ್ರತಿಕ್ರಿಯೆ ನೀಡಿಲ್ಲ. ಸ್ವತಃ ಪ್ರತಾಪ್ ಸಿಂಹ ಕೂಡ ಒಂದು ಪ್ರತಿಕ್ರಿಯೆ ನೀಡಿಲ್ಲ. ಘಟನೆ ನಡೆದು 24 ಗಂಟೆಯಾದರೂ ಒಂದು ಟ್ವೀಟ್​ ಮಾಡಿಲ್ಲ. ಇದು ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ. ನಾಳೆ ದಿನ ಕಾಂಗ್ರೆಸ್​ನವರೇ ಈ ಘಟನೆ ಮಾಡಿಸಿದ್ದೀರಿ ಎಂದು ಕತೆ ಕಟ್ಟಬಹುದು ಎಂದು ಕಿಡಿಕಾರಿದ್ದಾರೆ.

ಸಣ್ಣ ಸಣ್ಣ ವಿಷಯಗಳಿಗೆ ಮಾಧ್ಯಮಗಳ ಮುಂದೆ ಪ್ರತಿಕ್ರಿಯೆ ನೀಡುವ ಪ್ರತಾಪ್ ಸಿಂಹ ಯಾಕೆ ಮೌನವಾಗಿದ್ದಾರೆ? ಪ್ರತಾಪ್ ಸಿಂಹ ಏಲ್ಲಿ? ಡೆಲ್ಲಿ, ಕೊಡಗಿನಲ್ಲಿದ್ದಾರಾ? ಹೈಪೆರ್ ಆಗಿದ್ದ ವ್ಯಕ್ತಿ ಸೈಲೆಂಟ್ ಆಗಿರಲು ಕಾರಣವೇನು? ಇದು ಸಂಶಯಗಳಿಗೆ ಎಡೆ ಮಾಡಿಕೊಟ್ಟಿದೆ ಎಂದಿದ್ದಾರೆ.

ಇದನ್ನೂ ಓದಿ: ಲೋಕಸಭೆಯಲ್ಲಿ ಭದ್ರತಾ ವೈಫಲ್ಯ: CRPF ಡಿಜಿ ನೇತೃತ್ವದಲ್ಲಿ ತನಿಖಾ ತಂಡ ರಚಿಸಿದ ಗೃಹ ಇಲಾಖೆ

ನಿನ್ನೆಯ ಘಟನೆಯಲ್ಲಿ ಒಬ್ಬ ಮುಸ್ಲಿಂ ಇದ್ದಿದ್ದರೆ ಅಥವಾ ಆ ಲೆಟರ್ ಕಾಂಗ್ರೆಸ್​ನವರು ನೀಡಿದ್ದರೆ ಇಷ್ಟೊತ್ತಿಗೆ ದೇಶವೇ ಹೊತ್ತಿ ಉರಿಯುತ್ತಿತ್ತು. ನಾಲ್ಕು ಲೇಯರ್ ಸೆಕ್ಯೂರಿಟಿ ಹೇಗೆ ದಾಟಿ ಹೋಗಿದ್ದಾರೆ? ಇದು ಪೂರ್ವ ನಿಯೋಜಿತ ಕೃತ್ಯ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:56 pm, Thu, 14 December 23

Follow Us
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ