AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಪರಿಸ್ಥಿತಿ ನೋಡಿದರೆ ನಮಗೆ ಅಯ್ಯೋ ಅನಿಸುತ್ತಿದೆ: ಶಾಸಕ ಪ್ರಿಯಾಂಕ ಖರ್ಗೆ ವಾಗ್ಧಾಳಿ

ಜನರಿಗೆ ಏನು ಬೇಕಾಗಿದೆ, ನೀವು ಏನು ಮಾತಾಡ್ತಿದ್ದೀರಾ. ದೇಶವನ್ನು ಒಗ್ಗೂಡಿಸುವ ಯಾತ್ರೆ ಇದು ಭರವಸೆ ಮೂಡಿಸುವ ಯಾತ್ರೆ. ಬಿಜೆಪಿಯವರಿಗೆ ಇದು ಸಾಧ್ಯ ಇಲ್ಲ, ಬಿಜೆಪಿಯವರು ಇದುವರೆಗೆ ಏನೂ ಕಟ್ಟಿಯೇ ಇಲ್ಲ.

ಬಿಜೆಪಿ ಪರಿಸ್ಥಿತಿ ನೋಡಿದರೆ ನಮಗೆ ಅಯ್ಯೋ ಅನಿಸುತ್ತಿದೆ: ಶಾಸಕ ಪ್ರಿಯಾಂಕ ಖರ್ಗೆ ವಾಗ್ಧಾಳಿ
ಕಾಂಗ್ರೆಸ್​ ಶಾಸಕ ಪ್ರಿಯಾಂಕ ಖರ್ಗೆ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Oct 02, 2022 | 3:06 PM

Share

ಮೈಸೂರು: ಬಿಜೆಪಿಯವರು ರಾಜ್ಯದಲ್ಲಿ ಸಂಪೂರ್ಣ ಹತಾಶರಾಗಿದ್ದಾರೆ. ಬಿಜೆಪಿ (bjp) ಪರಿಸ್ಥಿತಿ ನೋಡಿದರೆ ನಮಗೆ ಅಯ್ಯೋ ಅನಿಸುತ್ತಿದೆ. ಸರ್ಕಾರದಿಂದ ಒಂದು ಯೋಜನೆಗಳ ಬಗ್ಗೆಯೂ ಹೇಳಿಕೊಳ್ಳಲು ಅವರಿಗೆ ಏನೂ ಇಲ್ಲ. ಏನೇ ಘಟನೆ ನಡೆದರೂ ಕೂಡ ನೆಹರೂ ವಿಚಾರ ತೆಗೆದು ನೆಹರೂ ಮೇಲೆ ಹಾಕುತ್ತಾರೆ. ರಾಜ್ಯದ ಘಟನೆ ಏನೇ ಆದರು ಸಿದ್ದರಾಮಯ್ಯ ಮೇಲೆ ಹಾಕುತ್ತಾರೆ ಎಂದು ಪ್ರೆಸ್ ಮೀಟ್​​ನಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್​ ಶಾಸಕ ಪ್ರಿಯಾಂಕ ಖರ್ಗೆ ವಾಗ್ಧಾಳಿ ಮಾಡಿದರು. ರಾಹುಲ್ ಗಾಂಧಿ ಬಂದಾಗಿನಿಂದ ಕಳೆದ 48 ಗಂಟೆಗಳಲ್ಲಿ ಎಷ್ಟೆಲ್ಲ ಸ್ಟೇಟ್ಮೆಂಟ್ ಕೊಡುತ್ತಿದ್ದಾರೆಂದು ಲೆಕ್ಕ ಹಾಕಿ ಎಂದರು. ವಿದ್ಯುತ್ ದರ ನಾಲ್ಕನೇ ಬಾರಿ ಹೆಚ್ಚಳ ಆಗಿದೆ ಅದರ ಬಗ್ಗೆ ಕಮೆಂಟ್ ಬಂತಾ ಯಾರಿಂದಲಾರೂ. ವೃದ್ದೆಯೊಬ್ಬರನ್ನು ಸಬ್ ರಿಜಿಸ್ಟ್ರಾರ್ ಕಚೇರಿಗೆ ಕರೆತಂದಿದ್ದರು. ಬದಲಿ ನಿವೇಶನದಲ್ಲಿ ಭಾರೀ ಅಕ್ರಮ ಅರಗ ಜ್ಞಾನೇಂದ್ರ ಸೇರಿ ಹಲವರದು ಕೇಳಿಬಂದಿದೆ. ಕಳೆದ ಒಂದು ವರ್ಷದಲ್ಲಿ ಗೋಧಿ ಹಿಟ್ಟಿನ ಬೆಲೆ 28%, ಅಕ್ಕಿ ದರ 8% ಹೆಚ್ಚಳ ಆಗಿದೆ. ಬಿಬಿಎಂಪಿ ಅವಸ್ಥೆ ಬಗ್ಗೆ ಹೈಕೋರ್ಟ್ ಛೀಮಾರಿ ಹಾಕಿದರು ಏನಾದರೂ ಮಾತಾಡಿದರಾ? ಬೆಂಗಳೂರು ಮತ್ತೆ ಕಳಪೆ ಸಾಧನೆ 43ನೇ ಸ್ಥಾನಕ್ಕೆ ಬಂದಿದೆ ಅದಕ್ಕೆ ಮಾತಾಡಿದರಾ? ಹಾಲ್ ಟಿಕೇಟ್ ಸಮಸ್ಯೆ ಬಗ್ಗೆ ಮಾತಾಡಿದರಾ? ವಾಟ್ಸಪ್ ಯುನಿವರ್ಸಿಟಿ ಇಂದ ಬಂದು ಅಷ್ಟು ದೊಡ್ಡ ಜಾಹೀರಾತು ಕೊಟ್ಟಿದ್ದೀರಾ. ಎಸ್.ಟಿ ಸ್ವಾಮೀಜಿ ಧರಣಿ ಕೂತು 180 ದಿನ ಆಯ್ತು ಅದರ ಬಗ್ಗೆ ಸಚಿವರು ಮಾತಾಡಿದರಾ? ಈಶ್ವರಪ್ಪ ಮದುವೆ ಗಂಡ ತರ ಕೂತಿದಿನಿ ಅಂತ ಹೇಳುತ್ತಾರೆ. ರಾಹುಲ್ ಗಾಂಧಿ ಮೇಲೆ ಗಮನ ಹರಿಸುವ ಬದಲಿ ನಿಮ್ಮ ಪಕ್ಷ ನೋಡಿಕೊಳ್ಳಿ ಸರ್ಕಾರ ನೋಡಿಕೊಳ್ಳಿ. ದಸರಾ ಗುತ್ತಿಗೆದಾರನೊಬ್ಬ 40% ಕಮಿಷನ್​ಗೆ ಆತ್ಮಹತ್ಯೆ ಮಾಡಿಕೊಳೂತ್ತೇನೆ ಎಂದು ಹೇಳುತ್ತಾರೆ ಅದರ ಬಗ್ಗೆ ಮಾತನಾಡುತ್ತಾರೆ ಎಂದು ಸಾಲು ಸಾಲು ಪ್ರಶ್ನೆಗಳ ಸುರಿಮಳೆ ಗೈದರು.

ಬಿಜೆಪಿಯವರು ಇದುವರೆಗೆ ಏನೂ ಕಟ್ಟಿಯೇ ಇಲ್ಲ

ಜನರಿಗೆ ಏನು ಬೇಕಾಗಿದೆ, ನೀವು ಏನು ಮಾತಾಡ್ತಿದ್ದೀರಾ. ದೇಶವನ್ನು ಒಗ್ಗೂಡಿಸುವ ಯಾತ್ರೆ ಇದು ಭರವಸೆ ಮೂಡಿಸುವ ಯಾತ್ರೆ. ಬಿಜೆಪಿಯವರಿಗೆ ಇದು ಸಾಧ್ಯ ಇಲ್ಲ, ಬಿಜೆಪಿಯವರು ಇದುವರೆಗೆ ಏನೂ ಕಟ್ಟಿಯೇ ಇಲ್ಲ. ಕಟ್ಟುವುದು ಅವರಿಗೇ ಗೊತ್ತಿಲ್ಲ. ಬಿಜೆಪಿಯ ರಥಯಾತ್ರೆಯಿಂದ ದೇಶ ಒಡೆದವರು ಅವರು. ಭಾರತ್ ತೋಡೋ ತೋಡೋ ಮಾಡಿದವರು ಅವರು. ನಾಳೆ ಕಪ್ಪು ಬಾವುಟ ತೋರಿಸಲು ಬಿಜೆಪಿ ರೆಡಿ ಆಗಿದೆ. ಅದರಿಂದ ನಮ್ಮನ್ನು ಹೆದರಿಸಲು ಸಾಧ್ಯವಿಲ್ಲ. ನಾವೂ ಅನಿವಾರ್ಯವಾಗಿ ಬುದ್ದ ಬಸವ ತತ್ವ ಬಿಟ್ಟು ಕೆಲಸ ಮಾಡಬೇಕಾಗುತ್ತದೆ ಎಂದು ಪ್ರಿಯಾಂಕ ಖರ್ಗೆ ಹೇಳಿದರು.

ಕರ್ನಾಟಕದ ಚರಿತ್ರೆಯಲ್ಲಿ ಇದೊಂದು ಐತಿಹಾಸಿಕ ದಿನ

23 ವರ್ಷಗಳ ಹಿಂದೆ ಬದನವಾಳು ಗ್ರಾಮದಲ್ಲಿ ದ್ವೇಷ ಹಿಂಸೆ ಉಂಟಾಗಿತ್ತು. ಈ ಗ್ರಾಮದಲ್ಲಿ ಮನಸ್ಸುಗಳು ಒಂದಾಗಬೇಕು ಅಂತ ರಾಹುಲ್ ಮುಂದಾಗಿದ್ದಾರೆ. ಯಾವ ಮನೆಗೆ ಪೇಂಟ್ ಇರಲಿಲ್ಲ ಅಲ್ಲಿ ಬಣ್ಣ ಹಚ್ಚಿದ್ದೇವೆ. ಎರಡು ಸಮಾಜದವರನ್ನು ಕೂರಿಸಿ ರಾಹುಲ್ ಗಾಂಧಿ ಜೊತೆಗೆ ಸಹಭೋಜನವನ್ನೂ ಮಾಡಿದ್ದಾರೆ. ಕರ್ನಾಟಕದ ಚರಿತ್ರೆಯಲ್ಲಿ ಇದೊಂದು ಐತಿಹಾಸಿಕ ದಿನ. ಇದು ಇಡೀ ದೇಶದಲ್ಲೇ ಮೊದಲ ಬಾರಿಗೆ ಪ್ರಯತ್ನ. ಇದೇ ಭಾರತ ಜೋಡೋ ಭಾರತ ಐಕ್ಯತೆ ಕಾರ್ಯಕ್ರಮ. ಖಾದಿ ಗ್ರಾಮೋದ್ಯೋಗದಲ್ಲಿ ಯಾರು ನೋವು ಅನುಭವಿಸುತ್ತಿದ್ದರೋ ಅವರ ಬಳಿಯೂ ಮಾತನಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?