AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ದೇಶದ ಅಸ್ಮಿತೆ ಆತ ರಾಜಕೀಯ ವಿಚಾರ ಅಲ್ಲ; ಹೆಂಡತಿಯನ್ನು ಬಿಡದ ರಾಮನಿಗೆ ಹೆಂಡತಿ ತೊರೆದ ಪ್ರಧಾನಿ ಹೇಗೆ? -ಹೆಚ್ ವಿಶ್ವನಾಥ್

ಹೆಂಡತಿಯನ್ನು ಬಿಡದ ರಾಮನಿಗೆ ಹೆಂಡತಿ ತೊರೆದ ಪ್ರಧಾನಿ ಹೇಗೆ? ಈ ರೀತಿ ಒಂದು ಸಂದೇಶ ಒಬ್ಬ ಯುವಕ ನನಗೆ ಕಳುಹಿಸಿದ್ದಾನೆ. ನಿಮ್ಮ ಚುನಾವಣೆಗೆ ಮುಖ್ಯ ಪ್ರಚಾರಕನಾಗಿ ರಾಮನನ್ನು ಬಳಸಿಕೊಳ್ಳಬೇಡಿ. ಬಡವರ ಹಸಿವಿನ ಬಗ್ಗೆ ದೇಶದ ಅಭಿವೃದ್ಧಿ ಬಗ್ಗೆ ಮಾತಾಡಿ ಎಂದು ಹೆಚ್ ವಿಶ್ವನಾಥ್ ತಿಳಿಸಿದರು.

ರಾಮ ದೇಶದ ಅಸ್ಮಿತೆ ಆತ ರಾಜಕೀಯ ವಿಚಾರ ಅಲ್ಲ; ಹೆಂಡತಿಯನ್ನು ಬಿಡದ ರಾಮನಿಗೆ ಹೆಂಡತಿ ತೊರೆದ ಪ್ರಧಾನಿ ಹೇಗೆ? -ಹೆಚ್ ವಿಶ್ವನಾಥ್
ಹೆಚ್ ವಿಶ್ವನಾಥ್
TV9 Web
| Edited By: ಆಯೇಷಾ ಬಾನು|

Updated on: Jan 28, 2024 | 12:13 PM

Share

ಮೈಸೂರು, ಜ.28: ರಾಮ ದೇಶದ ಅಸ್ಮಿತೆ ಆತ ರಾಜಕೀಯ ವಿಚಾರ ಅಲ್ಲ. ರಾಮ ನಮ್ಮ ದಮನಿ ದಮನಿಯಲ್ಲಿ ಇರುವವನು. ಅದರಿಂದ ಲೋಕಸಭೆಗೆ ಅನುಕೂಲವಾಗುತ್ತದೆ ಅನ್ನೋದು ಸರಿಯಲ್ಲ. ಹೆಂಡತಿಯನ್ನು ಬಿಡದ ರಾಮನಿಗೆ ಹೆಂಡತಿ ತೊರೆದ ಪ್ರಧಾನಿ ಹೇಗೆ? ಎಂದು ಮೈಸೂರಿನಲ್ಲಿ ಹೆಚ್ ವಿಶ್ವನಾಥ್ (H Vishwanath) ವಾಗ್ದಾಳಿ ನಡೆಸಿದ್ದಾರೆ. ಹಾಗೂ ಇದೇ ವೇಳೆ ಕೃತಜ್ಞತೆಯೇ ಇಲ್ಲದ ನಾಯಕ ಶಾಮನೂರು ಶಿವಶಂಕರಪ್ಪ (Shamanur Shivashankarappa). ಹಣವಿದೆ ಎಲ್ಲರನ್ನೂ ಕೊಂಡುಕೊಳ್ಳಬಹುದು ಅಂದುಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ರಾಮ ದೇಶದ ಅಸ್ಮಿತೆ ಆತ ರಾಜಕೀಯ ವಿಚಾರ ಅಲ್ಲ. ರಾಮ ನಮ್ಮ ದಮನಿ ದಮನಿಯಲ್ಲಿ ಇರುವವನು. ಅದರಿಂದ ಲೋಕಸಭೆಗೆ ಅನುಕೂಲವಾಗುತ್ತದೆ ಅನ್ನೋದು ಸರಿಯಲ್ಲ. ನಮ್ಮ ಪ್ರತಿ ಊರಿನಲ್ಲೂ ರಾಮಮಂದಿರ ಕಟ್ಟಿದ್ದಾರೆ. ಅದನ್ನು ಮೋದಿ ಬಂದು ಕಟ್ಟಿಸಿದ್ದರಾ? ಹೆಂಡತಿಯನ್ನು ಬಿಡದ ರಾಮನಿಗೆ ಹೆಂಡತಿ ತೊರೆದ ಪ್ರಧಾನಿ ಹೇಗೆ? ಈ ರೀತಿ ಒಂದು ಸಂದೇಶ ಒಬ್ಬ ಯುವಕ ನನಗೆ ಕಳುಹಿಸಿದ್ದಾನೆ. ನಿಮ್ಮ ಚುನಾವಣೆಗೆ ಮುಖ್ಯ ಪ್ರಚಾರಕನಾಗಿ ರಾಮನನ್ನು ಬಳಸಿಕೊಳ್ಳಬೇಡಿ. ಬಡವರ ಹಸಿವಿನ ಬಗ್ಗೆ ದೇಶದ ಅಭಿವೃದ್ಧಿ ಬಗ್ಗೆ ಮಾತಾಡಿ ಎಂದು ಹೆಚ್ ವಿಶ್ವನಾಥ್ ತಿಳಿಸಿದರು.

ನಮ್ಮವರೇ ಸರಿ ಇಲ್ಲ, ಸಿಎಂ, ಮಂತ್ರಿಗಳು ಅವರ ಮೇಲೆ ಡಿಪೆಂಡ್

ಸಂಸದ ಬಿ.ವೈ. ರಾಘವೇಂದ್ರ ಅವರನ್ನು ಗೆಲ್ಲಿಸಿ ಶ್ಯಾಮನೂರು ಶಿವಶಂಕರಪ್ಪ ಹೇಳಿಕೆ ವಿಚಾರ ಸಂಬಂಧ ಕೃತಜ್ಞತೆಯೇ ಇಲ್ಲದ ನಾಯಕ ಶ್ಯಾಮನೂರು ಶಿವಶಂಕರಪ್ಪ ಎಂದು ಹೆಚ್​.ವಿಶ್ವನಾಥ್​ ವಾಗ್ದಾಳಿ ನಡೆಸಿದರು. ದುಡ್ಡು ಇದೆ ಎಲ್ಲರನ್ನೂ ಕೊಂಡುಕೊಳ್ಳಬಹುದು ಅಂದುಕೊಂಡಿದ್ದಾರೆ. ನಮ್ಮವರೇ ಸರಿ ಇಲ್ಲ ನಮ್ಮ ಮಂತ್ರಿಗಳು, ಮುಖ್ಯಮಂತ್ರಿಗಳು ಅವರ ಮೇಲೆ ಡಿಪೆಂಡ್ ಆಗಿದ್ದಾರೆ. ಅಲ್ಲಿಗೆ ಹೋದಾಗ ಅವರ ಗೆಸ್ಟ್ ಹೌಸ್‌ನಲ್ಲೇ ಮಲಗುತ್ತಾರೆ. ಕಾಂಗ್ರೆಸ್ ಪಕ್ಷ ಜೀವಂತವಾಗಿದ್ದರೆ ಶಿವಕುಮಾರ್ ಬಂಡೆಯಾಗಿದ್ದರೆ ಅಮಾನತು ಮಾಡಿ. ಅವನು ಇಲ್ಲದಿದ್ದರೆ ಕಾಂಗ್ರೆಸ್ ನಡೆಯಲ್ವಾ? ಎಂದು ಏಕವಚನದಲ್ಲೇ ಹೆಚ್​ ವಿಶ್ವನಾಥ್ ಅವರು ಶ್ಯಾಮನೂರು ಶಿವಶಂಕರಪ್ಪ ವಿರುದ್ದ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಪಕ್ಷದಿಂದ ಶ್ಯಾಮನೂರು ಶಿವಶಂಕರ ಅವರನ್ನು ಹೊರಗೆ ತಳ್ಳಿ. ಶ್ಯಾಮನೂರು ಶಿವಶಂಕರಪ್ಪಗೆ ನಾಚಿಕೆ ಆಗಲ್ವಾ? ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: Video: ಶ್ರೀರಾಮ ದೇವಾಲಯದ ಎದುರಿನ ಶಿವಲಿಂಗದ ಮೇಲೆ ನಾಗರಹಾವು ಪ್ರತ್ಯಕ್ಷ; ವಿಡಿಯೋ ಇಲ್ಲಿದೆ

ಮೈಸೂರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಡಿ ದೇವರಾಜ ಅರಸು ಪುತ್ಥಳಿಗೆ ನಿರ್ಣಯ ವಿಚಾರವನ್ನು ಸರ್ಕಾರದ ನಿರ್ಧಾರಕ್ಕೆ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಸ್ವಾಗತಿಸಿದ್ದಾರೆ. 92 ಲಕ್ಷ ಹಣ ಅದಕ್ಕಾಗಿ ಮಂಜೂರು ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಸಚಿವರಾದ ಡಾ ಎಚ್ ಸಿ ಮಹದೇವಪ್ಪ, ಕೆ ವೆಂಕಟೇಶ್ ಶಿವರಾಜ್ ತಂಗಡಿಗೆ ಅಭಿನಂದನೆ. ಮೈಸೂರಿನ ಶಾಸಕರಿಗೂ ಅಭಿನಂದನೆ ಸಲ್ಲಿಸಿದರು. ವರ್ಷ ಪೂರ್ತಿ ದೇವರಾಜ ಅರಸು ಹೆಸರಿನಲ್ಲಿ ಕಾರ್ಯಕ್ರಮ ಮಾಡಬೇಕು. ದೇಶಕ್ಕೆ ದೇವರಾಜ ಅರಸು ಹೆಸರೇ ಒಂದು ಶಕ್ತಿ. ಸಾಮಾಜಿಕ ನ್ಯಾಯವನ್ನು ಎತ್ತರದಲ್ಲಿ ಹಿಡಿದವರು ದೇವರಾಜ ಅರಸು. ಜೀತ ಪದ್ದತಿ ನಿರ್ಮೂಲನೆ ಮಾಡಿದರು ಹಾಸ್ಟೆಲ್ ವ್ಯವಸ್ಥೆ ಮೂಲಕ ಅಕ್ಷರ ಕ್ರಾಂತಿ ಮಾಡಿದವರು. ಜನ ಮಾನಸದಲ್ಲಿ ಉಳಿದ ಜನನಾಯಕ ದೇವರಾಜ ಅರಸ್. ಎಲ್ಲಾ ಜಾತಿಗೂ ರಾಜಕೀಯ ಅಧಿಕಾರವನ್ನು ಕೊಟ್ಟವರು ಅರಸು. ಯುವಕರಿಗೆ ಹೆಚ್ಚಿನ ಆದ್ಯತೆ ನೀಡಿ ಬೆಳೆಸಿದರು ಎಂದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ