AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಯಸಿ ಸಾವಿನ ಸುದ್ದಿ ತಿಳಿದು ಪ್ರಿಯಕರ ನೇಣಿಗೆ ಶರಣು: ಒಂದು ಸಣ್ಣ ಮನಸ್ತಾಪದಿಂದ ಪ್ರೇಮಿಗಳು ದುರಂತ ಸಾವು

ಮೋನಿಕಾ ಮತ್ತು ಮನು ಇಬ್ಬರು ಪ್ರೇಮಿಗಳು. ಮೈಸೂರು ಮೂಲದವರಾದ ಇವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಕಳೆದ ಎರಡು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದ ಈ ಜೋಡಿ ಮಧ್ಯ ಒಂದು ಒಂದು ಸಣ್ಣ ಮನಸ್ತಾಪ ಬಂದಿದ್ದು, ಇದೀಗ ಈ ಪ್ರೇಮಿಗಳು ಸಾವಿಗೆ ಶರಣಾಗಿದ್ದಾರೆ.

ಪ್ರೇಯಸಿ ಸಾವಿನ ಸುದ್ದಿ ತಿಳಿದು ಪ್ರಿಯಕರ ನೇಣಿಗೆ ಶರಣು: ಒಂದು ಸಣ್ಣ ಮನಸ್ತಾಪದಿಂದ ಪ್ರೇಮಿಗಳು ದುರಂತ ಸಾವು
ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು
ರಾಮ್​, ಮೈಸೂರು
| Edited By: |

Updated on: Jul 25, 2024 | 5:32 PM

Share

ಮೈಸೂರು, (ಜುಲೈ 25):  ಕ್ಷುಲ್ಲಕ ಕಾರಣಕ್ಕೆ ಉಂಟಾದ ಒಂದು ಸಣ್ಣ ಮನಸ್ತಾಪಕ್ಕೆ ಪ್ರೇಮಿಗಳು ಬಲಿಯಾಗಿದ್ದಾರೆ. ಮೈಸೂರಿನಲ್ಲಿ ಇಂದು (ಜುಲೈ 25)  ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೈಸೂರಿನ ಮಂಡಕಳ್ಳಿಯಲ್ಲಿ ಮೋನಿಕಾ, ಜ್ಯೋತಿನಗರದ ಮನು ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಇವರಿಬ್ಬರು ಕಳೆದ ಎರಡು ವರ್ಷಗಳಿಂದ ಒಬ್ಬರಿಗೊಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಆದ್ರೆ, ಇಬ್ಬರ ಮಧ್ಯ ಬಂದ ಒಂದು ಮನಸ್ತಾಪಕ್ಕೆ ಇದೀಗ ಈ ಜೋಡಿ ಸಾವಿಗೆ ಶರಣಾಗಿದೆ.

ಮೈಸೂರಿನ ಮಂಡಕಳ್ಳಿಯಲ್ಲಿ ಮೋನಿಕಾ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಪ್ರೇಯಸಿಯ ಸಾವಿನ ಸುದ್ದಿ ತಿಳಿದು ಇತ್ತ ಪ್ರಿಯಕರ ಮನು ಜ್ಯೋತಿನಗರದ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಳೆದ 2 ವರ್ಷಗಳಿಂದ ಪ್ರೀತಿಸುತ್ತಿದ್ದ ಈ ಪ್ರೇಮಿಗಳ ಮಧ್ಯ ಒಂದು ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಸಣ್ಣ ಗಲಾಟೆಯಾಗಿದೆ. ಇದರಿಂದ ಬೇಸತ್ತು ಮೊದಲಿಗೆ ಮೋನಿಕಾ ದಟ್ಟಗಳ್ಳಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ. ಮೋನಿಕಾ ಸಾವಿನ ವಿಚಾರ ತಿಳಿಯುತ್ತಿದ್ದಂತೆಯೇ ಇತ್ತ ಮನು ಸಹ ಸಾವಿನ ಹಾದಿ ತುಳಿದಿದ್ದಾನೆ.

ಇದನ್ನೂ ಓದಿ: ಕುರಿಗಳ ರಕ್ಷಣೆಗೆ ಹೋಗಿ ಪ್ರಾಣಕ್ಕೆ ಕುತ್ತುತಂದುಕೊಂಡ ಕುರಿಗಾಯಿ: ಎನ್​ಸಿಸಿ ಬೆಟಾಲಿಯನ್ ಸಮಯಪ್ರಜ್ಞೆಯಿಂದ ಬದುಕುಳಿದ

ಈಜಲು ತೆರಳಿದ್ದ ಯುವಕ ಸಾವು

ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ತಾಲೂಕಿನ ಮಳಗಿ ಧರ್ಮಾ ಜಲಾಶಯದಲ್ಲಿ ಈಜಲು ತೆರಳಿದ್ದ ಯುವಕ ಸಾವನ್ನಪ್ಪಿದ್ದಾನೆ. ಮುಂಡಗೋಡ ತಾಲೂಕಿನ ಮುಡಸಾಲಿ ನಿವಾಸಿ ಶ್ರೀಕಾಂತ್(20) ಮೃತ ಯುವಕ. ನಿನ್ನೆ (ಜುಲೈ 24) 8 ಸ್ನೇಹಿತರ ಜೊತೆ ಮಳಗಿ ಧರ್ಮಾ ಡ್ಯಾಂ ವೀಕ್ಷಣೆಗೆ ತೆರಳಿದ್ದಾರೆ. ಈ ವೇಳೆ ಶ್ರೀಕಾಂತ್ ಸ್ನೇಹಿತನ ಜತೆ ಈಜಾಡಲು ಜಲಾಶಯಕ್ಕೆ ಜಿಗಿದಿದ್ದಾನೆ. ಆದ್ರೆ, ಮೇಲಕ್ಕೆ ಬರದೇ ನಾಪತ್ತೆಯಾಗಿದ್ದ. ಬಳಿಕ ಜೀವರಕ್ಷಕ ಸಿಬ್ಬಂದಿ ಹುಡುಕಾಟ ನಡೆಸಿ ಶ್ರೀಕಾಂತ್​ನ ಮೃತದೇಹ ಹೊರತೆಗೆದಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ