AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಯಸಿ ಸಾವಿನ ಸುದ್ದಿ ತಿಳಿದು ಪ್ರಿಯಕರ ನೇಣಿಗೆ ಶರಣು: ಒಂದು ಸಣ್ಣ ಮನಸ್ತಾಪದಿಂದ ಪ್ರೇಮಿಗಳು ದುರಂತ ಸಾವು

ಮೋನಿಕಾ ಮತ್ತು ಮನು ಇಬ್ಬರು ಪ್ರೇಮಿಗಳು. ಮೈಸೂರು ಮೂಲದವರಾದ ಇವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಕಳೆದ ಎರಡು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದ ಈ ಜೋಡಿ ಮಧ್ಯ ಒಂದು ಒಂದು ಸಣ್ಣ ಮನಸ್ತಾಪ ಬಂದಿದ್ದು, ಇದೀಗ ಈ ಪ್ರೇಮಿಗಳು ಸಾವಿಗೆ ಶರಣಾಗಿದ್ದಾರೆ.

ಪ್ರೇಯಸಿ ಸಾವಿನ ಸುದ್ದಿ ತಿಳಿದು ಪ್ರಿಯಕರ ನೇಣಿಗೆ ಶರಣು: ಒಂದು ಸಣ್ಣ ಮನಸ್ತಾಪದಿಂದ ಪ್ರೇಮಿಗಳು ದುರಂತ ಸಾವು
ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು
ರಾಮ್​, ಮೈಸೂರು
| Edited By: |

Updated on: Jul 25, 2024 | 5:32 PM

Share

ಮೈಸೂರು, (ಜುಲೈ 25):  ಕ್ಷುಲ್ಲಕ ಕಾರಣಕ್ಕೆ ಉಂಟಾದ ಒಂದು ಸಣ್ಣ ಮನಸ್ತಾಪಕ್ಕೆ ಪ್ರೇಮಿಗಳು ಬಲಿಯಾಗಿದ್ದಾರೆ. ಮೈಸೂರಿನಲ್ಲಿ ಇಂದು (ಜುಲೈ 25)  ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೈಸೂರಿನ ಮಂಡಕಳ್ಳಿಯಲ್ಲಿ ಮೋನಿಕಾ, ಜ್ಯೋತಿನಗರದ ಮನು ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಇವರಿಬ್ಬರು ಕಳೆದ ಎರಡು ವರ್ಷಗಳಿಂದ ಒಬ್ಬರಿಗೊಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಆದ್ರೆ, ಇಬ್ಬರ ಮಧ್ಯ ಬಂದ ಒಂದು ಮನಸ್ತಾಪಕ್ಕೆ ಇದೀಗ ಈ ಜೋಡಿ ಸಾವಿಗೆ ಶರಣಾಗಿದೆ.

ಮೈಸೂರಿನ ಮಂಡಕಳ್ಳಿಯಲ್ಲಿ ಮೋನಿಕಾ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಪ್ರೇಯಸಿಯ ಸಾವಿನ ಸುದ್ದಿ ತಿಳಿದು ಇತ್ತ ಪ್ರಿಯಕರ ಮನು ಜ್ಯೋತಿನಗರದ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಳೆದ 2 ವರ್ಷಗಳಿಂದ ಪ್ರೀತಿಸುತ್ತಿದ್ದ ಈ ಪ್ರೇಮಿಗಳ ಮಧ್ಯ ಒಂದು ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಸಣ್ಣ ಗಲಾಟೆಯಾಗಿದೆ. ಇದರಿಂದ ಬೇಸತ್ತು ಮೊದಲಿಗೆ ಮೋನಿಕಾ ದಟ್ಟಗಳ್ಳಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ. ಮೋನಿಕಾ ಸಾವಿನ ವಿಚಾರ ತಿಳಿಯುತ್ತಿದ್ದಂತೆಯೇ ಇತ್ತ ಮನು ಸಹ ಸಾವಿನ ಹಾದಿ ತುಳಿದಿದ್ದಾನೆ.

ಇದನ್ನೂ ಓದಿ: ಕುರಿಗಳ ರಕ್ಷಣೆಗೆ ಹೋಗಿ ಪ್ರಾಣಕ್ಕೆ ಕುತ್ತುತಂದುಕೊಂಡ ಕುರಿಗಾಯಿ: ಎನ್​ಸಿಸಿ ಬೆಟಾಲಿಯನ್ ಸಮಯಪ್ರಜ್ಞೆಯಿಂದ ಬದುಕುಳಿದ

ಈಜಲು ತೆರಳಿದ್ದ ಯುವಕ ಸಾವು

ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ತಾಲೂಕಿನ ಮಳಗಿ ಧರ್ಮಾ ಜಲಾಶಯದಲ್ಲಿ ಈಜಲು ತೆರಳಿದ್ದ ಯುವಕ ಸಾವನ್ನಪ್ಪಿದ್ದಾನೆ. ಮುಂಡಗೋಡ ತಾಲೂಕಿನ ಮುಡಸಾಲಿ ನಿವಾಸಿ ಶ್ರೀಕಾಂತ್(20) ಮೃತ ಯುವಕ. ನಿನ್ನೆ (ಜುಲೈ 24) 8 ಸ್ನೇಹಿತರ ಜೊತೆ ಮಳಗಿ ಧರ್ಮಾ ಡ್ಯಾಂ ವೀಕ್ಷಣೆಗೆ ತೆರಳಿದ್ದಾರೆ. ಈ ವೇಳೆ ಶ್ರೀಕಾಂತ್ ಸ್ನೇಹಿತನ ಜತೆ ಈಜಾಡಲು ಜಲಾಶಯಕ್ಕೆ ಜಿಗಿದಿದ್ದಾನೆ. ಆದ್ರೆ, ಮೇಲಕ್ಕೆ ಬರದೇ ನಾಪತ್ತೆಯಾಗಿದ್ದ. ಬಳಿಕ ಜೀವರಕ್ಷಕ ಸಿಬ್ಬಂದಿ ಹುಡುಕಾಟ ನಡೆಸಿ ಶ್ರೀಕಾಂತ್​ನ ಮೃತದೇಹ ಹೊರತೆಗೆದಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ