AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಷಾ ದಸರಾ ವಿವಾದ: ಸಂಸದ ಪ್ರತಾಪ್ ಸಿಂಹ ವಿರುದ್ಧ ತಿರುಗಿಬಿದ್ದ ಬಿಜೆಪಿ ಎಸ್​ಸಿ ಮೋರ್ಚಾ

ಮಹಿಷ ದಸರಾ ವಿರುದ್ಧ ಚಾಮುಂಡಿ ಬೆಟ್ಟ ಚಲೋ ಅಭಿಯಾನ ವಿಚಾರದಲ್ಲಿ ಬಿಜೆಪಿಯೊಳಗೆಯೇ ಗೊಂದಲದ ಗೂಡು ನಿರ್ಮಾಣವಾಗಿದೆ. ಸಂಸದ ಪ್ರತಾಪ್ ಸಿಂಹ ಸೇರಿದಂತೆ ಕೆಲವು ನಾಯಕರು ಚಲೋ ಅಭಿಯಾನಕ್ಕೆ ಕರೆ ನೀಡಿದ್ದು, ಮೈಸೂರು ನಗರ ಬಿಜೆಪಿ ಎಸ್​ಸಿ ಮೋರ್ಚಾವು ಇದಕ್ಕೆ ತದ್ವಿರುದ್ಧವಾಗಿ ನಿಂತಂತಿದೆ. ಪ್ರತಾಪಸಿಂಹ ಸಂವಿಧಾನ ವಿರೋಧಿ ನಡೆ ಅನುಸರಿಸುತ್ತಿದ್ದಾರೆ‌ ಎಂದು ಮೋರ್ಚಾದ ಅಧ್ಯಕ್ಷರು ಆರೋಪಿಸಿದ್ದಾರೆ.

ಮಹಿಷಾ ದಸರಾ ವಿವಾದ: ಸಂಸದ ಪ್ರತಾಪ್ ಸಿಂಹ ವಿರುದ್ಧ ತಿರುಗಿಬಿದ್ದ ಬಿಜೆಪಿ ಎಸ್​ಸಿ ಮೋರ್ಚಾ
ಮಹಿಷಾ ದಸರಾ ವಿವಾದ: ಸಂಸದ ಪ್ರತಾಪ್ ಸಿಂಹ ವಿರುದ್ಧ ತಿರುಗಿಬಿದ್ದ ಬಿಜೆಪಿ ಎಸ್​ಸಿ ಮೋರ್ಚಾ
ದಿಲೀಪ್​, ಚೌಡಹಳ್ಳಿ
| Edited By: Rakesh Nayak Manchi|

Updated on: Oct 12, 2023 | 2:56 PM

Share

ಮೈಸೂರು, ಅ.12: ಮಹಿಷ ದಸರಾ (Mahisha Dasara) ವಿರುದ್ಧ ಚಾಮುಂಡಿ ಬೆಟ್ಟ ಚಲೋ ಅಭಿಯಾನ ವಿಚಾರದಲ್ಲಿ ಬಿಜೆಪಿಯೊಳಗೆಯೇ ಗೊಂದಲದ ಗೂಡು ನಿರ್ಮಾಣವಾಗಿದೆ. ಸಂಸದ ಪ್ರತಾಪ್ ಸಿಂಹ (Pratap Simha) ಸೇರಿದಂತೆ ಕೆಲವು ನಾಯಕರು ಚಲೋ ಅಭಿಯಾನಕ್ಕೆ ಕರೆ ನೀಡಿದ್ದು, ಮೈಸೂರು ನಗರ ಬಿಜೆಪಿ ಎಸ್​ಸಿ ಮೋರ್ಚಾವು ಇದಕ್ಕೆ ತದ್ವಿರುದ್ಧವಾಗಿ ನಿಂತಂತಿದೆ. ಪ್ರತಾಪಸಿಂಹ ಸಂವಿಧಾನ ವಿರೋಧಿ ನಡೆ ಅನುಸರಿಸುತ್ತಿದ್ದಾರೆ‌ ಎಂದು ಮೋರ್ಚಾದ ಅಧ್ಯಕ್ಷರು ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೋರ್ಚಾ ಅಧ್ಯಕ್ಷ ಈಶ್ವರ್, ಸಂಸದ ಪ್ರತಾಪಸಿಂಹ ಅವರು ಮಹಿಷ ದಸರಾ ಬಗ್ಗೆ ಇಲ್ಲಸಲ್ಲದ ರಾಜಕೀಯ ಮಾಡುತ್ತಿದ್ದಾರೆ. ಧಾರ್ಮಿಕ ಆಚರಣೆಗೆ ಸಂವಿಧಾನದಲ್ಲಿ ಮುಕ್ತ ಅವಕಾಶವಿದೆ. ಇದನ್ನು ದಮನ ಮಾಡಲು ಪ್ರತಾಪಸಿಂಹ ಹುನ್ನಾರ ನಡೆಸಿದ್ದಾರೆ. ದಲಿತರ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡುತ್ತಿದ್ದಾರೆ ಎಂದರು.

ಒಂದು ಸಮುದಾಯವನ್ನು ಗುರಿಯಾಗಿಸಿ ದಲಿತ ನಾಯಕರ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಇದರಿಂದ ಬಿಜೆಪಿ ಪಕ್ಷ ಮತ್ತಷ್ಟು ಸಂಕಷ್ಟಕ್ಕೆ ಸಿಲುಕುತ್ತದೆ. ಈ ಕೂಡಲೇ ಪಕ್ಷದ ವರಿಷ್ಠರು ಮಧ್ಯ ಪ್ರವೇಶಿಸಿ ಪ್ರತಾಪ್ ಸಿಂಹಗೆ ಬುದ್ಧಿ ಹೇಳಬೇಕು ಎಂದರು.

ಚಲೋ ಚಾಮುಂಡಿ ವಿಚಾರವಾಗಿ ನಮ್ಮ ಬಳಿ ಚರ್ಚೆಯೇ ಮಾಡಿಲ್ಲ. ಪ್ರತಾಪ ಸಿಂಹ, ಶಾಸಕ ಶ್ರೀವತ್ಸ ಸ್ವಯಂ ನಿರ್ಧಾರ ಕೈಗೊಂಡಿದ್ದಾರೆ. ನಮ್ಮನ್ನು ನಾಮಾಕಾವಸ್ಥೆಗೆ ಪದವಿಯಲ್ಲಿ ಕೂರಿಸಿರುವಂತೆ ಕಾಣುತ್ತದೆ ಎಂದು ಈಶ್ವರ್ ಅವರು ಆಕ್ರೋಶ ಹೊರಹಾಕಿದ್ದಾರೆ.

ಪ್ರತಾಪ್ ಸಿಂಹ ನಡೆ ಖಂಡಿಸಿ ವರಿಷ್ಠರಿಗೆ ದೂರು

ಪ್ರತಾಪ್ ಸಿಂಹ ಒಂದೇ ಒಂದು ಸಭೆ ಕರೆದಿಲ್ಲ. ಎಸ್​ಸಿ ಮೋರ್ಚಾದ ಯಾರಿಗೂ ಮಾಹಿತಿ ಇಲ್ಲ. ಶಾಸಕ ಶ್ರೀವತ್ಸ ಹಾಗೂ ಪ್ರತಾಪ್ ಸಿಂಹ ಏಕಾ ಪಕ್ಷಿಯ ನಿರ್ಧಾರ ಮಾಡುತ್ತಿದ್ದಾರೆ. ಪ್ರತಾಪ್ ಸಿಂಹ ಎಸ್​ಸಿ ಮೋರ್ಚಾವನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಇವರಿಗೆ ಮೈಸೂರು ಇತಿಹಾಸ ಗೊತ್ತಿಲ್ಲ ಎಂದು ಮೋರ್ಚಾದ ಕೆ.ಆರ್ ಕ್ಷೇತ್ರ ಉಪಾಧ್ಯಕ್ಷ ಜೆ.ರವಿ ಹೇಳಿದ್ದಾರೆ.

ಪ್ರತಾಪ್ ಸಿಂಹ ದಲಿತ ವಿರೋಧಿಯಾಗಿದ್ದಾರೆ. ಇವರ ನಡೆ ಖಂಡಿಸಿ ವರಿಷ್ಠರಿಗೆ ದೂರು ಕೊಡುತ್ತೇವೆ ಎಂದು ಹೇಳಿದ ರವಿ, ರಾಜ್ಯ ಎಸ್​ಸಿ ಮೋರ್ಚಾದ ಅಧ್ಯಕ್ಷರನ್ನು ಭೇಟಿ ಮಾಡಿ ಮನವಿ ಕೊಡುತ್ತೇವೆ. ಸಂಸದರನ್ನು ನಿಯಂತ್ರಣದಲ್ಲಿ ಇಡುವಂತೆ ಮನವಿ ಮಾಡುತ್ತೇವೆ. ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ