AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಷಾ ದಸರಾ ವಿವಾದ: ಸಂಸದ ಪ್ರತಾಪ್ ಸಿಂಹ ವಿರುದ್ಧ ತಿರುಗಿಬಿದ್ದ ಬಿಜೆಪಿ ಎಸ್​ಸಿ ಮೋರ್ಚಾ

ಮಹಿಷ ದಸರಾ ವಿರುದ್ಧ ಚಾಮುಂಡಿ ಬೆಟ್ಟ ಚಲೋ ಅಭಿಯಾನ ವಿಚಾರದಲ್ಲಿ ಬಿಜೆಪಿಯೊಳಗೆಯೇ ಗೊಂದಲದ ಗೂಡು ನಿರ್ಮಾಣವಾಗಿದೆ. ಸಂಸದ ಪ್ರತಾಪ್ ಸಿಂಹ ಸೇರಿದಂತೆ ಕೆಲವು ನಾಯಕರು ಚಲೋ ಅಭಿಯಾನಕ್ಕೆ ಕರೆ ನೀಡಿದ್ದು, ಮೈಸೂರು ನಗರ ಬಿಜೆಪಿ ಎಸ್​ಸಿ ಮೋರ್ಚಾವು ಇದಕ್ಕೆ ತದ್ವಿರುದ್ಧವಾಗಿ ನಿಂತಂತಿದೆ. ಪ್ರತಾಪಸಿಂಹ ಸಂವಿಧಾನ ವಿರೋಧಿ ನಡೆ ಅನುಸರಿಸುತ್ತಿದ್ದಾರೆ‌ ಎಂದು ಮೋರ್ಚಾದ ಅಧ್ಯಕ್ಷರು ಆರೋಪಿಸಿದ್ದಾರೆ.

ಮಹಿಷಾ ದಸರಾ ವಿವಾದ: ಸಂಸದ ಪ್ರತಾಪ್ ಸಿಂಹ ವಿರುದ್ಧ ತಿರುಗಿಬಿದ್ದ ಬಿಜೆಪಿ ಎಸ್​ಸಿ ಮೋರ್ಚಾ
ಮಹಿಷಾ ದಸರಾ ವಿವಾದ: ಸಂಸದ ಪ್ರತಾಪ್ ಸಿಂಹ ವಿರುದ್ಧ ತಿರುಗಿಬಿದ್ದ ಬಿಜೆಪಿ ಎಸ್​ಸಿ ಮೋರ್ಚಾ
ದಿಲೀಪ್​, ಚೌಡಹಳ್ಳಿ
| Edited By: |

Updated on: Oct 12, 2023 | 2:56 PM

Share

ಮೈಸೂರು, ಅ.12: ಮಹಿಷ ದಸರಾ (Mahisha Dasara) ವಿರುದ್ಧ ಚಾಮುಂಡಿ ಬೆಟ್ಟ ಚಲೋ ಅಭಿಯಾನ ವಿಚಾರದಲ್ಲಿ ಬಿಜೆಪಿಯೊಳಗೆಯೇ ಗೊಂದಲದ ಗೂಡು ನಿರ್ಮಾಣವಾಗಿದೆ. ಸಂಸದ ಪ್ರತಾಪ್ ಸಿಂಹ (Pratap Simha) ಸೇರಿದಂತೆ ಕೆಲವು ನಾಯಕರು ಚಲೋ ಅಭಿಯಾನಕ್ಕೆ ಕರೆ ನೀಡಿದ್ದು, ಮೈಸೂರು ನಗರ ಬಿಜೆಪಿ ಎಸ್​ಸಿ ಮೋರ್ಚಾವು ಇದಕ್ಕೆ ತದ್ವಿರುದ್ಧವಾಗಿ ನಿಂತಂತಿದೆ. ಪ್ರತಾಪಸಿಂಹ ಸಂವಿಧಾನ ವಿರೋಧಿ ನಡೆ ಅನುಸರಿಸುತ್ತಿದ್ದಾರೆ‌ ಎಂದು ಮೋರ್ಚಾದ ಅಧ್ಯಕ್ಷರು ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೋರ್ಚಾ ಅಧ್ಯಕ್ಷ ಈಶ್ವರ್, ಸಂಸದ ಪ್ರತಾಪಸಿಂಹ ಅವರು ಮಹಿಷ ದಸರಾ ಬಗ್ಗೆ ಇಲ್ಲಸಲ್ಲದ ರಾಜಕೀಯ ಮಾಡುತ್ತಿದ್ದಾರೆ. ಧಾರ್ಮಿಕ ಆಚರಣೆಗೆ ಸಂವಿಧಾನದಲ್ಲಿ ಮುಕ್ತ ಅವಕಾಶವಿದೆ. ಇದನ್ನು ದಮನ ಮಾಡಲು ಪ್ರತಾಪಸಿಂಹ ಹುನ್ನಾರ ನಡೆಸಿದ್ದಾರೆ. ದಲಿತರ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡುತ್ತಿದ್ದಾರೆ ಎಂದರು.

ಒಂದು ಸಮುದಾಯವನ್ನು ಗುರಿಯಾಗಿಸಿ ದಲಿತ ನಾಯಕರ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಇದರಿಂದ ಬಿಜೆಪಿ ಪಕ್ಷ ಮತ್ತಷ್ಟು ಸಂಕಷ್ಟಕ್ಕೆ ಸಿಲುಕುತ್ತದೆ. ಈ ಕೂಡಲೇ ಪಕ್ಷದ ವರಿಷ್ಠರು ಮಧ್ಯ ಪ್ರವೇಶಿಸಿ ಪ್ರತಾಪ್ ಸಿಂಹಗೆ ಬುದ್ಧಿ ಹೇಳಬೇಕು ಎಂದರು.

ಚಲೋ ಚಾಮುಂಡಿ ವಿಚಾರವಾಗಿ ನಮ್ಮ ಬಳಿ ಚರ್ಚೆಯೇ ಮಾಡಿಲ್ಲ. ಪ್ರತಾಪ ಸಿಂಹ, ಶಾಸಕ ಶ್ರೀವತ್ಸ ಸ್ವಯಂ ನಿರ್ಧಾರ ಕೈಗೊಂಡಿದ್ದಾರೆ. ನಮ್ಮನ್ನು ನಾಮಾಕಾವಸ್ಥೆಗೆ ಪದವಿಯಲ್ಲಿ ಕೂರಿಸಿರುವಂತೆ ಕಾಣುತ್ತದೆ ಎಂದು ಈಶ್ವರ್ ಅವರು ಆಕ್ರೋಶ ಹೊರಹಾಕಿದ್ದಾರೆ.

ಪ್ರತಾಪ್ ಸಿಂಹ ನಡೆ ಖಂಡಿಸಿ ವರಿಷ್ಠರಿಗೆ ದೂರು

ಪ್ರತಾಪ್ ಸಿಂಹ ಒಂದೇ ಒಂದು ಸಭೆ ಕರೆದಿಲ್ಲ. ಎಸ್​ಸಿ ಮೋರ್ಚಾದ ಯಾರಿಗೂ ಮಾಹಿತಿ ಇಲ್ಲ. ಶಾಸಕ ಶ್ರೀವತ್ಸ ಹಾಗೂ ಪ್ರತಾಪ್ ಸಿಂಹ ಏಕಾ ಪಕ್ಷಿಯ ನಿರ್ಧಾರ ಮಾಡುತ್ತಿದ್ದಾರೆ. ಪ್ರತಾಪ್ ಸಿಂಹ ಎಸ್​ಸಿ ಮೋರ್ಚಾವನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಇವರಿಗೆ ಮೈಸೂರು ಇತಿಹಾಸ ಗೊತ್ತಿಲ್ಲ ಎಂದು ಮೋರ್ಚಾದ ಕೆ.ಆರ್ ಕ್ಷೇತ್ರ ಉಪಾಧ್ಯಕ್ಷ ಜೆ.ರವಿ ಹೇಳಿದ್ದಾರೆ.

ಪ್ರತಾಪ್ ಸಿಂಹ ದಲಿತ ವಿರೋಧಿಯಾಗಿದ್ದಾರೆ. ಇವರ ನಡೆ ಖಂಡಿಸಿ ವರಿಷ್ಠರಿಗೆ ದೂರು ಕೊಡುತ್ತೇವೆ ಎಂದು ಹೇಳಿದ ರವಿ, ರಾಜ್ಯ ಎಸ್​ಸಿ ಮೋರ್ಚಾದ ಅಧ್ಯಕ್ಷರನ್ನು ಭೇಟಿ ಮಾಡಿ ಮನವಿ ಕೊಡುತ್ತೇವೆ. ಸಂಸದರನ್ನು ನಿಯಂತ್ರಣದಲ್ಲಿ ಇಡುವಂತೆ ಮನವಿ ಮಾಡುತ್ತೇವೆ. ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Dileep CP
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!