AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಷ ದಸರಾ: ಬಿಜೆಪಿ V/S ಪ್ರಗತಿಪರರ ಜಟಾಪಟಿ: ಚಾಮುಂಡಿ ಬೆಟ್ಟ ಸೇರಿ ಮೈಸೂರು ನಗರದಲ್ಲಿ ಸೆಕ್ಷನ್ 144 ಜಾರಿ

ಯಾವುದೇ ಸಂಘಟನೆ ಅಥವಾ ಸಾರ್ವಜನಿಕರು ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಹಾಗೂ ಸಭೆ-ಸಮಾರಂಭ ಮೆರವಣಿಗೆ, ಪ್ರತಿಭಟನೆ, ರ್ಯಾಲಿ ನಡೆಸಲು ಪ್ರಯತ್ನಿಸಿದಲ್ಲಿ, ಅಲ್ಲಿ ಸೇರಿರುವ ಜನರ ಕೂಟವನ್ನು ಅಕ್ರಮ ಕೂಟವೆಂದು ಪರಿಗಣಿಸಿ, ಆದೇಶ ಉಲ್ಲಂಘನೆ ಕುರಿತಂತೆ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಮೈಸೂರು ಸಿಟಿ ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.

ಮಹಿಷ ದಸರಾ: ಬಿಜೆಪಿ V/S ಪ್ರಗತಿಪರರ ಜಟಾಪಟಿ: ಚಾಮುಂಡಿ ಬೆಟ್ಟ ಸೇರಿ ಮೈಸೂರು ನಗರದಲ್ಲಿ ಸೆಕ್ಷನ್ 144 ಜಾರಿ
ಮೈಸೂರು ನಗರ ಆಯುಕ್ತ ರಮೇಶ್ ಬಾನೋತ್
Follow us
ದಿಲೀಪ್​, ಚೌಡಹಳ್ಳಿ
| Updated By: ಕಿರಣ್ ಹನುಮಂತ್​ ಮಾದಾರ್

Updated on:Oct 12, 2023 | 2:48 PM

ಮೈಸೂರು, ಅ.12: ಮಹಿಷ ದಸರಾ(Mahisha Dasara) ಪರ-ವಿರೋಧ ವಿವಾದ ವಿಚಾರಕ್ಕೆ ಸಂಬಂಧಪಟ್ಟಂತೆ ಒಂದೆಡೆ ದಲಿತ ಸಮಿತಿಗಳು ಹಾಗೂ ಮಹಿಷ ದಸರಾ ಸಮಿತಿಯವರು ನಡೆಸಬೇಕು ಎಂದರೆ, ಇತ್ತ ಸಂಸದ ಪ್ರತಾಪ್​ ಸಿಂಹ ನೇತೃತ್ವದಲ್ಲಿ ವಿರೋಧಿಸಿ ಚಾಮುಂಡಿ ಬೆಟ್ಟ ಚಲೋಗೆ ಕರೆ ಕೊಟ್ಟಿದ್ದರು. ಆದರೆ, ಮೈಸೂರು ನಗರ ಆಯುಕ್ತ ರಮೇಶ್ ಬಾನೋತ್ (Ramesh Banoth) ಅವರು ಎರಡು ಕಡೆಯವರ ಮನವಿಯನ್ನು ತಿರಸ್ಕರಿಸಿದ್ದರು. ಇದೀಗ ಕಾನೂನು ಮತ್ತು ಸುವ್ಯಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಚಾಮುಂಡಿ ಬೆಟ್ಟ ಸೇರಿ (ಟೌನ್ ಹಾಲ್ ಹೊರತುಪಡಿಸಿ) ಮೈಸೂರು ನಗರದ ವ್ಯಾಪ್ತಿಯಲ್ಲಿ ಅ.12 ರ ಮಧ್ಯರಾತ್ರಿ 12-00 ಗಂಟೆಯಿಂದ ಅ.14 ರ ಬೆಳಿಗ್ಗೆ 06-00 ಗಂಟೆಯವರೆಗೆ ಸೆಕ್ಷನ್ 144 ಜಾರಿಗೊಳಿಸಲಾಗಿದೆ ಎಂದು ಮೈಸೂರು ಸಿಟಿ ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.

ಯಾವುದೇ ಸಭೆ-ಸಮಾರಂಭ, ರ್ಯಾಲಿ ಹಾಗೂ ಮೆರವಣಿಗೆ ನಡೆಸದಂತೆ ನಿಷೇಧ

1) ಯಾವುದೇ ಮೆರವಣಿಗೆ, ಪ್ರತಿಭಟನೆ, ರಾಲಿ, ಬೈಕ್ ರಾಲಿ, ನಡೆಸುವುದು. 2) ಪರ ವಿರೋಧ ಘೋಷಣೆ ಕೂಗುವುದು 3) ಪಟಾಕಿ ಸಿಡಿಸಿ ಸಂಭ್ರಮಾಚರಣೆ ಆಚರಿಸುವುದು 4) 05 ಜನರಿಗಿಂತ ಹೆಚ್ಚಿನ ಜನ ಗುಂಪು ಸೇರುವುದು. 5) ಯಾವುದೇ ಬಹಿರಂಗ ಸಭೆ ಸಮಾರಂಭಗಳನ್ನು ನಡೆಸುವುದು. 6) ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಪುಚಾರ, ಧ್ವನಿವರ್ಧಕ ಬಳಸುವುದು, ಫೆಕ್ಸ್ ಬ್ಯಾನರ್ ಅಳವಡಿಸುವುದು, ಕರಪತ್ರಗಳನ್ನು ಹಂಚುವುದು, ಮೂರ್ತಿ ಮೆರವಣಿಗೆ ಮಾಡುವುದು ನಿಷೇಧ.

ಇದನ್ನೂ ಓದಿ:ಮಹಿಷ ದಸರಾಗೆ ವಿರೋಧ: ಬರಿಗಾಲಲ್ಲಿ ಬೆಟ್ಟ ಹತ್ತಿ, ದುಷ್ಟರನ್ನು ಶಿಕ್ಷಿಸು ಎಂದು ಚಾಮುಂಡೇಶ್ವರಿಗೆ ಪಾರ್ಥನೆ

ಇತ್ಯಾದಿ ಸೇರಿದಂತೆ ಯಾವುದೇ ಸಂಘಟನೆ ಅಥವಾ ಸಾರ್ವಜನಿಕರು ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಹಾಗೂ ಸಭೆ-ಸಮಾರಂಭ ಮೆರವಣಿಗೆ, ಪ್ರತಿಭಟನೆ, ರ್ಯಾಲಿ ನಡೆಸಲು ಪ್ರಯತ್ನಿಸಿದಲ್ಲಿ, ಅಲ್ಲಿ ಸೇರಿರುವ ಜನರ ಕೂಟವನ್ನು ಅಕ್ರಮ ಕೂಟವೆಂದು ಪರಿಗಣಿಸಿ, ಆದೇಶ ಉಲ್ಲಂಘನೆ ಕುರಿತಂತೆ ಕಾನೂನು ಕ್ರಮಕೈಗೊಳ್ಳಲಾಗುವುದು. ಹಾಗೂ ಈ ಆದೇಶವು ಮದುವೆ ಸಮಾರಂಭಗಳಿಗೆ ಮತ್ತು ಶವಸಂಸ್ಕಾರಗಳಿಗೆ ಹಾಗೂ ಶಾಲಾ, ಕಾಲೇಜು ಮತ್ತು ಪರೀಕ್ಷೆಗಳಿಗೆ ತೆರಳುವವರಿಗೆ ಅನ್ವಯಿಸುವುದಿಲ್ಲ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:38 pm, Thu, 12 October 23

ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ