AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮ್ಮ ಸ್ಕೂಟರ್​ ಕೊಡಿಸಿಲ್ಲವೆಂದು ತಂಗಿಯ ಮಗುವನ್ನು ಕೊಂದವ ಅರೆಸ್ಟ್​; 8 ತಿಂಗಳ ಮಗುವನ್ನು ಗೋಡೆಗೆ ಎಸೆದು ಹತ್ಯೆ

ರಾಜುವಿನ ತಂಗಿ ರಮ್ಯಾ, ಬಾಣಂತನಕ್ಕಾಗಿ ಬಂದವಳು, ತವರು ಮನೆಯಲ್ಲೇ ಇದ್ದಳು. ತಾಯಿ ಮನೆಯಲ್ಲಿ ಇಲ್ಲದಾಗ, ಬಾಗಿಲ ಚಿಲಕ ಹಾಕಿಕೊಂಡು ತಂಗಿಯ ಬಳಿ ಜೋರಾಗಿ ಗಲಾಟೆ ಮಾಡಿದ್ದ.

ಅಮ್ಮ ಸ್ಕೂಟರ್​ ಕೊಡಿಸಿಲ್ಲವೆಂದು ತಂಗಿಯ ಮಗುವನ್ನು ಕೊಂದವ ಅರೆಸ್ಟ್​; 8 ತಿಂಗಳ ಮಗುವನ್ನು ಗೋಡೆಗೆ ಎಸೆದು ಹತ್ಯೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Apr 30, 2022 | 8:27 AM

Share

ಮೈಸೂರು: ಅಮ್ಮ ಸ್ಕೂಟರ್​ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಸಿಟ್ಟಾಗಿ, ಇಲ್ಲೊಬ್ಬ ವ್ಯಕ್ತಿ ತನ್ನ ತಂಗಿಯ 8 ತಿಂಗಳ ಮಗುವನ್ನೇ ಕೊಂದಿದ್ದಾನೆ. ಕನಕಗಿರಿಯಲ್ಲಿ ಘಟನೆ ನಡೆದಿದ್ದು, ಆರೋಪಿಯ ಹೆಸರು ರಾಜು(33). ಈತ ತರಕಾರಿ ವ್ಯಾಪಾರ ಮಾಡಿಕೊಂಡಿದ್ದ. ಹಣಕ್ಕಾಗಿ ತನ್ನ ತಾಯಿಯ ಬಳಿ ಸದಾ ಜಗಳವಾಡುತ್ತಿದ್ದ. ಸ್ಕೂಟರ್​ ಬೇಕು ಎಂದು ಬಹುದಿನಗಳಿಂದಲೂ ದಂಬಾಲು ಬಿದ್ದಿದ್ದ. ಆದರೆ ಸ್ಕೂಟರ್​ ತಂದುಕೊಟ್ಟಿರಲಿಲ್ಲ ಎಂಬ ಕಾರಣಕ್ಕೆ ಸದಾ ಜಗಳವಾಡುತ್ತಿದ್ದ.

ರಾಜುವಿನ ತಂಗಿ ರಮ್ಯಾ, ಬಾಣಂತನಕ್ಕಾಗಿ ಬಂದವಳು, ತವರು ಮನೆಯಲ್ಲೇ ಇದ್ದಳು. ತಾಯಿ ಮನೆಯಲ್ಲಿ ಇಲ್ಲದಾಗ, ಬಾಗಿಲ ಚಿಲಕ ಹಾಕಿಕೊಂಡು ತಂಗಿಯ ಬಳಿ ಜೋರಾಗಿ ಗಲಾಟೆ ಮಾಡಿದ್ದ. ಕೈಯಿಗೆ ಸಿಕ್ಕಿದ್ದನ್ನೆಲ್ಲ ತೆಗೆದು ಬಿಸಾಕಿದ್ದ. ಅಣ್ಣನ ರೌದ್ರಾವತಾರ ನೋಡಿದ ತಂಗಿ ಹೆದರಿ, ಅಲ್ಲಿಂದ ಎದುರುಮನೆಗೆ ಓಡಿಹೋಗಿದ್ದಳು. ಆದರೆ ಹಾಗೆ ಹೋಗುವಾಗ ಆಕೆ, ಮಗುವನ್ನು ಮನೆಯಲ್ಲೇ ಬಿಟ್ಟು ಹೊರಟುಹೋಗಿದ್ದಳು. ತಂಗಿ ಅತ್ತ ಹೋಗುತ್ತಿದ್ದಂತೆ ಇತ್ತ ರಾಜು ಆ ಮಗುವನ್ನೇ ಎತ್ತಿ ಗೋಡೆಗೆ ಬಿಸಾಕಿದ್ದಾನೆ. ಪುಟ್ಟ ಮಗುವಿನ ತಲೆಗೆ ತುಂಬ ಏಟಾಗಿ ಅದು ಕೊನೆಯುಸಿರೆಳೆದಿದೆ. ಇಷ್ಟು ಮಾಡಿಯಾದ ಮೇಲೆ ರಾಜು ಓಡಿಹೋಗಿದ್ದ. ಸದ್ಯ ಆತನನ್ನು ವಿದ್ಯಾರಣ್ಯಪುರಂ ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ‘ಅಜಯ್​ ದೇವಗನ್​ ಹೇಳಿದ್ರಲ್ಲಿ ತಪ್ಪಿಲ್ಲ, ಆದ್ರೆ ಸಂಸ್ಕೃತ ರಾಷ್ಟ್ರ ಭಾಷೆ ಆಗಲಿ’: ಕಂಗನಾ ಹೊಸ ಟ್ವಿಸ್ಟ್​

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ