Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮ್ಮ ಸ್ಕೂಟರ್​ ಕೊಡಿಸಿಲ್ಲವೆಂದು ತಂಗಿಯ ಮಗುವನ್ನು ಕೊಂದವ ಅರೆಸ್ಟ್​; 8 ತಿಂಗಳ ಮಗುವನ್ನು ಗೋಡೆಗೆ ಎಸೆದು ಹತ್ಯೆ

ರಾಜುವಿನ ತಂಗಿ ರಮ್ಯಾ, ಬಾಣಂತನಕ್ಕಾಗಿ ಬಂದವಳು, ತವರು ಮನೆಯಲ್ಲೇ ಇದ್ದಳು. ತಾಯಿ ಮನೆಯಲ್ಲಿ ಇಲ್ಲದಾಗ, ಬಾಗಿಲ ಚಿಲಕ ಹಾಕಿಕೊಂಡು ತಂಗಿಯ ಬಳಿ ಜೋರಾಗಿ ಗಲಾಟೆ ಮಾಡಿದ್ದ.

ಅಮ್ಮ ಸ್ಕೂಟರ್​ ಕೊಡಿಸಿಲ್ಲವೆಂದು ತಂಗಿಯ ಮಗುವನ್ನು ಕೊಂದವ ಅರೆಸ್ಟ್​; 8 ತಿಂಗಳ ಮಗುವನ್ನು ಗೋಡೆಗೆ ಎಸೆದು ಹತ್ಯೆ
ಸಾಂಕೇತಿಕ ಚಿತ್ರ
Follow us
TV9 Web
| Updated By: Lakshmi Hegde

Updated on: Apr 30, 2022 | 8:27 AM

ಮೈಸೂರು: ಅಮ್ಮ ಸ್ಕೂಟರ್​ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಸಿಟ್ಟಾಗಿ, ಇಲ್ಲೊಬ್ಬ ವ್ಯಕ್ತಿ ತನ್ನ ತಂಗಿಯ 8 ತಿಂಗಳ ಮಗುವನ್ನೇ ಕೊಂದಿದ್ದಾನೆ. ಕನಕಗಿರಿಯಲ್ಲಿ ಘಟನೆ ನಡೆದಿದ್ದು, ಆರೋಪಿಯ ಹೆಸರು ರಾಜು(33). ಈತ ತರಕಾರಿ ವ್ಯಾಪಾರ ಮಾಡಿಕೊಂಡಿದ್ದ. ಹಣಕ್ಕಾಗಿ ತನ್ನ ತಾಯಿಯ ಬಳಿ ಸದಾ ಜಗಳವಾಡುತ್ತಿದ್ದ. ಸ್ಕೂಟರ್​ ಬೇಕು ಎಂದು ಬಹುದಿನಗಳಿಂದಲೂ ದಂಬಾಲು ಬಿದ್ದಿದ್ದ. ಆದರೆ ಸ್ಕೂಟರ್​ ತಂದುಕೊಟ್ಟಿರಲಿಲ್ಲ ಎಂಬ ಕಾರಣಕ್ಕೆ ಸದಾ ಜಗಳವಾಡುತ್ತಿದ್ದ.

ರಾಜುವಿನ ತಂಗಿ ರಮ್ಯಾ, ಬಾಣಂತನಕ್ಕಾಗಿ ಬಂದವಳು, ತವರು ಮನೆಯಲ್ಲೇ ಇದ್ದಳು. ತಾಯಿ ಮನೆಯಲ್ಲಿ ಇಲ್ಲದಾಗ, ಬಾಗಿಲ ಚಿಲಕ ಹಾಕಿಕೊಂಡು ತಂಗಿಯ ಬಳಿ ಜೋರಾಗಿ ಗಲಾಟೆ ಮಾಡಿದ್ದ. ಕೈಯಿಗೆ ಸಿಕ್ಕಿದ್ದನ್ನೆಲ್ಲ ತೆಗೆದು ಬಿಸಾಕಿದ್ದ. ಅಣ್ಣನ ರೌದ್ರಾವತಾರ ನೋಡಿದ ತಂಗಿ ಹೆದರಿ, ಅಲ್ಲಿಂದ ಎದುರುಮನೆಗೆ ಓಡಿಹೋಗಿದ್ದಳು. ಆದರೆ ಹಾಗೆ ಹೋಗುವಾಗ ಆಕೆ, ಮಗುವನ್ನು ಮನೆಯಲ್ಲೇ ಬಿಟ್ಟು ಹೊರಟುಹೋಗಿದ್ದಳು. ತಂಗಿ ಅತ್ತ ಹೋಗುತ್ತಿದ್ದಂತೆ ಇತ್ತ ರಾಜು ಆ ಮಗುವನ್ನೇ ಎತ್ತಿ ಗೋಡೆಗೆ ಬಿಸಾಕಿದ್ದಾನೆ. ಪುಟ್ಟ ಮಗುವಿನ ತಲೆಗೆ ತುಂಬ ಏಟಾಗಿ ಅದು ಕೊನೆಯುಸಿರೆಳೆದಿದೆ. ಇಷ್ಟು ಮಾಡಿಯಾದ ಮೇಲೆ ರಾಜು ಓಡಿಹೋಗಿದ್ದ. ಸದ್ಯ ಆತನನ್ನು ವಿದ್ಯಾರಣ್ಯಪುರಂ ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ‘ಅಜಯ್​ ದೇವಗನ್​ ಹೇಳಿದ್ರಲ್ಲಿ ತಪ್ಪಿಲ್ಲ, ಆದ್ರೆ ಸಂಸ್ಕೃತ ರಾಷ್ಟ್ರ ಭಾಷೆ ಆಗಲಿ’: ಕಂಗನಾ ಹೊಸ ಟ್ವಿಸ್ಟ್​

PSL 2025: ಟಿ20 ಪಂದ್ಯದಲ್ಲಿ ಟೆಸ್ಟ್ ಆಡಿದ ಬಾಬರ್ ಆಝಂ
PSL 2025: ಟಿ20 ಪಂದ್ಯದಲ್ಲಿ ಟೆಸ್ಟ್ ಆಡಿದ ಬಾಬರ್ ಆಝಂ
ಸಾಲಿಗ್ರಾಮಕ್ಕೆ ಪ್ರತಿನಿತ್ಯ ಪೂಜೆ, ನೈವೇದ್ಯ ಅರ್ಪಿಸಬೇಕಾ? ಇಲ್ಲಿದೆ ವಿವರಣೆ
ಸಾಲಿಗ್ರಾಮಕ್ಕೆ ಪ್ರತಿನಿತ್ಯ ಪೂಜೆ, ನೈವೇದ್ಯ ಅರ್ಪಿಸಬೇಕಾ? ಇಲ್ಲಿದೆ ವಿವರಣೆ
VIDEO: ಔಟಾ... ನಾಟೌಟಾ... ಇದು ಕನ್ನಡಿಗನ ಕೂಲ್ ಕ್ಯಾಚ್​
VIDEO: ಔಟಾ... ನಾಟೌಟಾ... ಇದು ಕನ್ನಡಿಗನ ಕೂಲ್ ಕ್ಯಾಚ್​
ಸುಬ್ರಹ್ಮಣ್ಯನ ಲಹರಿಯುಳ್ಳ ಈ ದಿನದ ರಾಶಿ ಭವಿಷ್ಯ ಇಲ್ಲಿದೆ ನೋಡಿ
ಸುಬ್ರಹ್ಮಣ್ಯನ ಲಹರಿಯುಳ್ಳ ಈ ದಿನದ ರಾಶಿ ಭವಿಷ್ಯ ಇಲ್ಲಿದೆ ನೋಡಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್