AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮ್ಮ ಸ್ಕೂಟರ್​ ಕೊಡಿಸಿಲ್ಲವೆಂದು ತಂಗಿಯ ಮಗುವನ್ನು ಕೊಂದವ ಅರೆಸ್ಟ್​; 8 ತಿಂಗಳ ಮಗುವನ್ನು ಗೋಡೆಗೆ ಎಸೆದು ಹತ್ಯೆ

ರಾಜುವಿನ ತಂಗಿ ರಮ್ಯಾ, ಬಾಣಂತನಕ್ಕಾಗಿ ಬಂದವಳು, ತವರು ಮನೆಯಲ್ಲೇ ಇದ್ದಳು. ತಾಯಿ ಮನೆಯಲ್ಲಿ ಇಲ್ಲದಾಗ, ಬಾಗಿಲ ಚಿಲಕ ಹಾಕಿಕೊಂಡು ತಂಗಿಯ ಬಳಿ ಜೋರಾಗಿ ಗಲಾಟೆ ಮಾಡಿದ್ದ.

ಅಮ್ಮ ಸ್ಕೂಟರ್​ ಕೊಡಿಸಿಲ್ಲವೆಂದು ತಂಗಿಯ ಮಗುವನ್ನು ಕೊಂದವ ಅರೆಸ್ಟ್​; 8 ತಿಂಗಳ ಮಗುವನ್ನು ಗೋಡೆಗೆ ಎಸೆದು ಹತ್ಯೆ
ಸಾಂಕೇತಿಕ ಚಿತ್ರ
TV9 Web
| Updated By: Lakshmi Hegde|

Updated on: Apr 30, 2022 | 8:27 AM

Share

ಮೈಸೂರು: ಅಮ್ಮ ಸ್ಕೂಟರ್​ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಸಿಟ್ಟಾಗಿ, ಇಲ್ಲೊಬ್ಬ ವ್ಯಕ್ತಿ ತನ್ನ ತಂಗಿಯ 8 ತಿಂಗಳ ಮಗುವನ್ನೇ ಕೊಂದಿದ್ದಾನೆ. ಕನಕಗಿರಿಯಲ್ಲಿ ಘಟನೆ ನಡೆದಿದ್ದು, ಆರೋಪಿಯ ಹೆಸರು ರಾಜು(33). ಈತ ತರಕಾರಿ ವ್ಯಾಪಾರ ಮಾಡಿಕೊಂಡಿದ್ದ. ಹಣಕ್ಕಾಗಿ ತನ್ನ ತಾಯಿಯ ಬಳಿ ಸದಾ ಜಗಳವಾಡುತ್ತಿದ್ದ. ಸ್ಕೂಟರ್​ ಬೇಕು ಎಂದು ಬಹುದಿನಗಳಿಂದಲೂ ದಂಬಾಲು ಬಿದ್ದಿದ್ದ. ಆದರೆ ಸ್ಕೂಟರ್​ ತಂದುಕೊಟ್ಟಿರಲಿಲ್ಲ ಎಂಬ ಕಾರಣಕ್ಕೆ ಸದಾ ಜಗಳವಾಡುತ್ತಿದ್ದ.

ರಾಜುವಿನ ತಂಗಿ ರಮ್ಯಾ, ಬಾಣಂತನಕ್ಕಾಗಿ ಬಂದವಳು, ತವರು ಮನೆಯಲ್ಲೇ ಇದ್ದಳು. ತಾಯಿ ಮನೆಯಲ್ಲಿ ಇಲ್ಲದಾಗ, ಬಾಗಿಲ ಚಿಲಕ ಹಾಕಿಕೊಂಡು ತಂಗಿಯ ಬಳಿ ಜೋರಾಗಿ ಗಲಾಟೆ ಮಾಡಿದ್ದ. ಕೈಯಿಗೆ ಸಿಕ್ಕಿದ್ದನ್ನೆಲ್ಲ ತೆಗೆದು ಬಿಸಾಕಿದ್ದ. ಅಣ್ಣನ ರೌದ್ರಾವತಾರ ನೋಡಿದ ತಂಗಿ ಹೆದರಿ, ಅಲ್ಲಿಂದ ಎದುರುಮನೆಗೆ ಓಡಿಹೋಗಿದ್ದಳು. ಆದರೆ ಹಾಗೆ ಹೋಗುವಾಗ ಆಕೆ, ಮಗುವನ್ನು ಮನೆಯಲ್ಲೇ ಬಿಟ್ಟು ಹೊರಟುಹೋಗಿದ್ದಳು. ತಂಗಿ ಅತ್ತ ಹೋಗುತ್ತಿದ್ದಂತೆ ಇತ್ತ ರಾಜು ಆ ಮಗುವನ್ನೇ ಎತ್ತಿ ಗೋಡೆಗೆ ಬಿಸಾಕಿದ್ದಾನೆ. ಪುಟ್ಟ ಮಗುವಿನ ತಲೆಗೆ ತುಂಬ ಏಟಾಗಿ ಅದು ಕೊನೆಯುಸಿರೆಳೆದಿದೆ. ಇಷ್ಟು ಮಾಡಿಯಾದ ಮೇಲೆ ರಾಜು ಓಡಿಹೋಗಿದ್ದ. ಸದ್ಯ ಆತನನ್ನು ವಿದ್ಯಾರಣ್ಯಪುರಂ ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ‘ಅಜಯ್​ ದೇವಗನ್​ ಹೇಳಿದ್ರಲ್ಲಿ ತಪ್ಪಿಲ್ಲ, ಆದ್ರೆ ಸಂಸ್ಕೃತ ರಾಷ್ಟ್ರ ಭಾಷೆ ಆಗಲಿ’: ಕಂಗನಾ ಹೊಸ ಟ್ವಿಸ್ಟ್​

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?