Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮ್ಮ ಸ್ಕೂಟರ್​ ಕೊಡಿಸಿಲ್ಲವೆಂದು ತಂಗಿಯ ಮಗುವನ್ನು ಕೊಂದವ ಅರೆಸ್ಟ್​; 8 ತಿಂಗಳ ಮಗುವನ್ನು ಗೋಡೆಗೆ ಎಸೆದು ಹತ್ಯೆ

ರಾಜುವಿನ ತಂಗಿ ರಮ್ಯಾ, ಬಾಣಂತನಕ್ಕಾಗಿ ಬಂದವಳು, ತವರು ಮನೆಯಲ್ಲೇ ಇದ್ದಳು. ತಾಯಿ ಮನೆಯಲ್ಲಿ ಇಲ್ಲದಾಗ, ಬಾಗಿಲ ಚಿಲಕ ಹಾಕಿಕೊಂಡು ತಂಗಿಯ ಬಳಿ ಜೋರಾಗಿ ಗಲಾಟೆ ಮಾಡಿದ್ದ.

ಅಮ್ಮ ಸ್ಕೂಟರ್​ ಕೊಡಿಸಿಲ್ಲವೆಂದು ತಂಗಿಯ ಮಗುವನ್ನು ಕೊಂದವ ಅರೆಸ್ಟ್​; 8 ತಿಂಗಳ ಮಗುವನ್ನು ಗೋಡೆಗೆ ಎಸೆದು ಹತ್ಯೆ
ಸಾಂಕೇತಿಕ ಚಿತ್ರ
Follow us
TV9 Web
| Updated By: Lakshmi Hegde

Updated on: Apr 30, 2022 | 8:27 AM

ಮೈಸೂರು: ಅಮ್ಮ ಸ್ಕೂಟರ್​ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಸಿಟ್ಟಾಗಿ, ಇಲ್ಲೊಬ್ಬ ವ್ಯಕ್ತಿ ತನ್ನ ತಂಗಿಯ 8 ತಿಂಗಳ ಮಗುವನ್ನೇ ಕೊಂದಿದ್ದಾನೆ. ಕನಕಗಿರಿಯಲ್ಲಿ ಘಟನೆ ನಡೆದಿದ್ದು, ಆರೋಪಿಯ ಹೆಸರು ರಾಜು(33). ಈತ ತರಕಾರಿ ವ್ಯಾಪಾರ ಮಾಡಿಕೊಂಡಿದ್ದ. ಹಣಕ್ಕಾಗಿ ತನ್ನ ತಾಯಿಯ ಬಳಿ ಸದಾ ಜಗಳವಾಡುತ್ತಿದ್ದ. ಸ್ಕೂಟರ್​ ಬೇಕು ಎಂದು ಬಹುದಿನಗಳಿಂದಲೂ ದಂಬಾಲು ಬಿದ್ದಿದ್ದ. ಆದರೆ ಸ್ಕೂಟರ್​ ತಂದುಕೊಟ್ಟಿರಲಿಲ್ಲ ಎಂಬ ಕಾರಣಕ್ಕೆ ಸದಾ ಜಗಳವಾಡುತ್ತಿದ್ದ.

ರಾಜುವಿನ ತಂಗಿ ರಮ್ಯಾ, ಬಾಣಂತನಕ್ಕಾಗಿ ಬಂದವಳು, ತವರು ಮನೆಯಲ್ಲೇ ಇದ್ದಳು. ತಾಯಿ ಮನೆಯಲ್ಲಿ ಇಲ್ಲದಾಗ, ಬಾಗಿಲ ಚಿಲಕ ಹಾಕಿಕೊಂಡು ತಂಗಿಯ ಬಳಿ ಜೋರಾಗಿ ಗಲಾಟೆ ಮಾಡಿದ್ದ. ಕೈಯಿಗೆ ಸಿಕ್ಕಿದ್ದನ್ನೆಲ್ಲ ತೆಗೆದು ಬಿಸಾಕಿದ್ದ. ಅಣ್ಣನ ರೌದ್ರಾವತಾರ ನೋಡಿದ ತಂಗಿ ಹೆದರಿ, ಅಲ್ಲಿಂದ ಎದುರುಮನೆಗೆ ಓಡಿಹೋಗಿದ್ದಳು. ಆದರೆ ಹಾಗೆ ಹೋಗುವಾಗ ಆಕೆ, ಮಗುವನ್ನು ಮನೆಯಲ್ಲೇ ಬಿಟ್ಟು ಹೊರಟುಹೋಗಿದ್ದಳು. ತಂಗಿ ಅತ್ತ ಹೋಗುತ್ತಿದ್ದಂತೆ ಇತ್ತ ರಾಜು ಆ ಮಗುವನ್ನೇ ಎತ್ತಿ ಗೋಡೆಗೆ ಬಿಸಾಕಿದ್ದಾನೆ. ಪುಟ್ಟ ಮಗುವಿನ ತಲೆಗೆ ತುಂಬ ಏಟಾಗಿ ಅದು ಕೊನೆಯುಸಿರೆಳೆದಿದೆ. ಇಷ್ಟು ಮಾಡಿಯಾದ ಮೇಲೆ ರಾಜು ಓಡಿಹೋಗಿದ್ದ. ಸದ್ಯ ಆತನನ್ನು ವಿದ್ಯಾರಣ್ಯಪುರಂ ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ‘ಅಜಯ್​ ದೇವಗನ್​ ಹೇಳಿದ್ರಲ್ಲಿ ತಪ್ಪಿಲ್ಲ, ಆದ್ರೆ ಸಂಸ್ಕೃತ ರಾಷ್ಟ್ರ ಭಾಷೆ ಆಗಲಿ’: ಕಂಗನಾ ಹೊಸ ಟ್ವಿಸ್ಟ್​

RCB ಅನ್​ಬಾಕ್ಸ್ ಕಾರ್ಯಕ್ರಮ ಮಿಸ್ ಮಾಡಿಕೊಂಡಿದ್ದೀರಾ? ಇಲ್ಲಿದೆ ವಿಡಿಯೋ
RCB ಅನ್​ಬಾಕ್ಸ್ ಕಾರ್ಯಕ್ರಮ ಮಿಸ್ ಮಾಡಿಕೊಂಡಿದ್ದೀರಾ? ಇಲ್ಲಿದೆ ವಿಡಿಯೋ
ಮುಸ್ಲಿಮರಿಗೆ ಶೇ 4 ಮೀಸಲಾತಿ ಸುಪ್ರೀಂ​ನಲ್ಲಿ ಪ್ರಶ್ನಿಸಲಾಗ್ತಿದೆ: ಬೊಮ್ಮಾಯಿ
ಮುಸ್ಲಿಮರಿಗೆ ಶೇ 4 ಮೀಸಲಾತಿ ಸುಪ್ರೀಂ​ನಲ್ಲಿ ಪ್ರಶ್ನಿಸಲಾಗ್ತಿದೆ: ಬೊಮ್ಮಾಯಿ
ತುಮಕೂರು: ಓರ್ವ ವಿದ್ಯಾರ್ಥಿನಿಗಾಗಿ ಒಂದು ಸರ್ಕಾರಿ ಶಾಲೆ, ಓರ್ವ ಶಿಕ್ಷಕಿ
ತುಮಕೂರು: ಓರ್ವ ವಿದ್ಯಾರ್ಥಿನಿಗಾಗಿ ಒಂದು ಸರ್ಕಾರಿ ಶಾಲೆ, ಓರ್ವ ಶಿಕ್ಷಕಿ
ಅಧಿಕಾರಿಗಳು ಜನಪ್ರತಿನಿಧಿಗಳಿಗೆ ಗೌರವ ನೀಡದಿದ್ದರೆ ಹೇಗೆ? ಯುಟಿ ಖಾದರ್
ಅಧಿಕಾರಿಗಳು ಜನಪ್ರತಿನಿಧಿಗಳಿಗೆ ಗೌರವ ನೀಡದಿದ್ದರೆ ಹೇಗೆ? ಯುಟಿ ಖಾದರ್
ಇಡೀ ಜಗತ್ತು ಮಹಾ ಕುಂಭಮೇಳದ ರೂಪದಲ್ಲಿ ಭಾರತದ ಶ್ರೇಷ್ಠ ರೂಪ ನೋಡಿದೆ: ಮೋದಿ
ಇಡೀ ಜಗತ್ತು ಮಹಾ ಕುಂಭಮೇಳದ ರೂಪದಲ್ಲಿ ಭಾರತದ ಶ್ರೇಷ್ಠ ರೂಪ ನೋಡಿದೆ: ಮೋದಿ
ಕುಡಿದ ಮತ್ತಿನಲ್ಲಿ ಹೈಟೆನ್ಷನ್ ವಿದ್ಯುತ್​ ಕಂಬ ಏರಿದ ಯುವಕ!
ಕುಡಿದ ಮತ್ತಿನಲ್ಲಿ ಹೈಟೆನ್ಷನ್ ವಿದ್ಯುತ್​ ಕಂಬ ಏರಿದ ಯುವಕ!
ನಿಮ್ಮಪ್ಪಂದಾ ಪದ ಹುಟ್ಟುಹಾಕಿದ್ದು ಬಿಜೆಪಿ ನಾಯಕರು: ಪ್ರದೀಪ್ ಈಶ್ವರ್
ನಿಮ್ಮಪ್ಪಂದಾ ಪದ ಹುಟ್ಟುಹಾಕಿದ್ದು ಬಿಜೆಪಿ ನಾಯಕರು: ಪ್ರದೀಪ್ ಈಶ್ವರ್
ಹಣದ ಬದಲು ಅಕ್ಕಿ ಕೊಡುವುದೇ ಲೇಸು ಎನ್ನುತ್ತಾರೆ ಫಲಾನುಭವಿಗಳು
ಹಣದ ಬದಲು ಅಕ್ಕಿ ಕೊಡುವುದೇ ಲೇಸು ಎನ್ನುತ್ತಾರೆ ಫಲಾನುಭವಿಗಳು
ಕಾಂಗ್ರೆಸ್ ಮುಖಂಡರು ದೆಹಲಿಗೆ ಹೋದಾಗ ಕುತೂಹಲ ಹುಟ್ಟೋದು ಸಹಜ!
ಕಾಂಗ್ರೆಸ್ ಮುಖಂಡರು ದೆಹಲಿಗೆ ಹೋದಾಗ ಕುತೂಹಲ ಹುಟ್ಟೋದು ಸಹಜ!
ದಾವಣಗೆರೆ: ಇದ್ದಕ್ಕಿದ್ದಂತೆ ಒಡೆದು ಹೋದ ಭದ್ರಾ ಕಾಲುವೆ
ದಾವಣಗೆರೆ: ಇದ್ದಕ್ಕಿದ್ದಂತೆ ಒಡೆದು ಹೋದ ಭದ್ರಾ ಕಾಲುವೆ