AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್​​ಗೂ, ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟಕ್ಕೂ ಸಾಮ್ಯತೆ ಇಲ್ಲ: ಸಿದ್ದರಾಮಯ್ಯ

ಆರೋಪಿ ಮಾಸ್ಕ್​, ಟೋಪಿ​ ಹಾಕಿಕೊಂಡು ಬಂದು ಸ್ಫೋಟಿಸಿದ್ದಾನೆ. ಹೋಟೆಲ್​​ನಲ್ಲಿ ತಿಂಡಿಯ ಟೋಕನ್​ ತೆಗೆದುಕೊಂಡಿದ್ದಾನೆ. ನಂತರ ಹೋಟೆಲ್​​ನಲ್ಲಿ ಕುಳಿತು ಟೈಮರ್​ ಫಿಕ್ಸ್​ ಮಾಡಿದ್ದಾನೆ. ಟೈಮರ್ ಫಿಕ್ಸ್​ ಮಾಡಿ ಇಟ್ಟು ಹೋಟೆಲ್​​ನಿಂದ ಹೊರಹೋಗಿದ್ದಾನೆ​. ಬಳಿಕ ಬ್ಲಾಸ್ಟ್​ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್​​ಗೂ, ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟಕ್ಕೂ ಸಾಮ್ಯತೆ ಇಲ್ಲ: ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
ರಾಮ್​, ಮೈಸೂರು
| Edited By: ವಿವೇಕ ಬಿರಾದಾರ|

Updated on:Mar 02, 2024 | 11:38 AM

Share

ಮೈಸೂರು, ಮಾರ್ಚ್​ 02: ಮಂಗಳೂರಿನ ಕುಕ್ಕರ್ ಬಾಂಬ್ ಬ್ಲಾಸ್ಟ್​​ಗು (Cooker Bomb Blast), ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬ್ಲಾಸ್ಟ್​​ಗೂ (Bengaluru Rameshwaram Cafe Bomb Blast) ಸಾಮ್ಯತೆ ಇಲ್ಲ. ಮಂಗಳೂರಿನಲ್ಲಿ ಕುಕ್ಕರನಲ್ಲಿ ಆದ ಬ್ಲಾಸ್ಟ್, ಬೆಂಗಳೂರಿನಲ್ಲಿ ಯಾವ ಕುಕ್ಕರ್​​ನಲ್ಲೂ ಬ್ಲಾಸ್ಟ್ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆರೋಪಿ ಮಾಸ್ಕ್​, ಟೋಪಿ​ ಹಾಕಿಕೊಂಡು ಬಂದು ಸ್ಫೋಟಿಸಿದ್ದಾನೆ. ಆರೋಪಿಯು ಬಸ್​ನಿಂದ ಇಳಿದು ಹೋಟೆಲ್​ಗೆ ಹೋಗಿದ್ದಾನೆ. ಆರೋಪಿ ಬಸ್​ನಿಂದ ಇಳಿದು ಹೋಗಿರುವ ದೃಶ್ಯಾವಳಿಗಳು ಪತ್ತೆಯಾಗಿವೆ.  ಆರೋಪಿ ಕಪ್ಪು ಬಣ್ಣದ ಮಾಸ್ಕ್​ ಹಾಕಿಕೊಂಡು ಬಂದಿದ್ದನು. ಆರೋಪಿ ಟೋಪಿ ಹಾಕಿಕೊಂಡು ಬಂದಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹೋಟೆಲ್​​ನಲ್ಲಿ ತಿಂಡಿಯ ಟೋಕನ್​ ತೆಗೆದುಕೊಂಡಿದ್ದಾನೆ. ನಂತರ ಹೋಟೆಲ್​​ನಲ್ಲಿ ಕುಳಿತು ಟೈಮರ್​ ಫಿಕ್ಸ್​ ಮಾಡಿದ್ದಾನೆ. ಟೈಮರ್ ಫಿಕ್ಸ್​ ಮಾಡಿ ಇಟ್ಟು ಹೋಟೆಲ್​​ನಿಂದ ಹೊರಹೋಗಿದ್ದಾನೆ​. ಬಳಿಕ ಬ್ಲಾಸ್ಟ್​ ಆಗಿದೆ ಎಂದರು.

ವ್ಯಕ್ತಿಯ ಗುರುತು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ. ವ್ಯಕ್ತಿಯ ಗುರುತು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ. ಇದು ಓರ್ವ ವ್ಯಕ್ತಿಯ ಕೃತ್ಯವಾ ಅಥವಾ ಸಂಘಟನೆಯ ಕೃತ್ಯವಾ ಗೊತ್ತಿಲ್ಲ. ಭಯೋತ್ಪಾದಕ ಕೃತ್ಯನಾ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಪ್ರಕರಣದ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ; ನಾಲ್ವರು ಶಂಕಿತರನ್ನು ವಶಕ್ಕೆ ಪಡೆದ ಪೊಲೀಸರು

ಇನ್ನೂ ಎಫ್ಎಸ್ಎಲ್ ವರದಿ ಬಂದಿಲ್ಲ

ವಿಧಾನಸೌಧದಲ್ಲಿ ಪಾಕಿಸ್ತಾನ್​ ಜಿಂದಾಬಾದ್ ಘೋಷಣೆ ಆರೋಪಕ್ಕೆ ಸಂಬಂಧಿಸಿದಂತೆ ಇನ್ನೂ ಎಫ್ಎಸ್ಎಲ್ ವರದಿ ಬಂದಿಲ್ಲ. ತಪ್ಪು ಸಾಬೀತಾದರೆ ನಾವು ಯಾರನ್ನೂ ರಕ್ಷಣೆ ಮಾಡುವುದಿಲ್ಲ. ಇದರಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ವರದಿ ಬಂರದೆ ಆರೋಪಗಳಿಗೆ ಏನೂ ಉತ್ತರ ಕೊಡಲಿ? ಎಂದರು.

ಅಲ್ಪಸಂಖ್ಯಾತ ತುಷ್ಟೀಕರಣದಿಂದ ಇಂತಹ ಕೃತ್ಯ ನಡೆದಿದೆ ಎಂಬ ಬಿಜೆಪಿ ನಾಯಕರ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ, ಬಿಜೆಪಿಯ ಕಾಲದಲ್ಲಿ ಆದ ಬಾಂಬ್ ಬ್ಲಾಸ್ಟ್​​ಗಳಿಗೆ ಏನು ಕಾರಣ? ಅದು ಅಲ್ಪಸಂಖ್ಯಾತರ ತುಷ್ಟೀಕರಣವಾ? ಬಿಜೆಪಿ ರಾಜಕೀಯಕ್ಕಾಗಿ ಇಂತಹ ಹೇಳಿಕೆ ನೀಡುತ್ತಿದೆ. ಅಲ್ಪಸಂಖ್ಯಾರಿಗೂ ಇದಕ್ಕೂ ಏನು ಸಂಬಂಧ? ಬಿಜೆಪಿ ಇದನ್ನು ರಾಜಕೀಯ ಮಾಡುತ್ತಿದೆ ಅಷ್ಟೆ. ಈ ವಿಚಾರದಲ್ಲಿ ರಾಜಕೀಯ ಯಾರು ಮಾಡಬಾರದು ಎಂದು ಮನವಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:03 am, Sat, 2 March 24

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ