AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್​​ಗೂ, ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟಕ್ಕೂ ಸಾಮ್ಯತೆ ಇಲ್ಲ: ಸಿದ್ದರಾಮಯ್ಯ

ಆರೋಪಿ ಮಾಸ್ಕ್​, ಟೋಪಿ​ ಹಾಕಿಕೊಂಡು ಬಂದು ಸ್ಫೋಟಿಸಿದ್ದಾನೆ. ಹೋಟೆಲ್​​ನಲ್ಲಿ ತಿಂಡಿಯ ಟೋಕನ್​ ತೆಗೆದುಕೊಂಡಿದ್ದಾನೆ. ನಂತರ ಹೋಟೆಲ್​​ನಲ್ಲಿ ಕುಳಿತು ಟೈಮರ್​ ಫಿಕ್ಸ್​ ಮಾಡಿದ್ದಾನೆ. ಟೈಮರ್ ಫಿಕ್ಸ್​ ಮಾಡಿ ಇಟ್ಟು ಹೋಟೆಲ್​​ನಿಂದ ಹೊರಹೋಗಿದ್ದಾನೆ​. ಬಳಿಕ ಬ್ಲಾಸ್ಟ್​ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್​​ಗೂ, ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟಕ್ಕೂ ಸಾಮ್ಯತೆ ಇಲ್ಲ: ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
ರಾಮ್​, ಮೈಸೂರು
| Edited By: |

Updated on:Mar 02, 2024 | 11:38 AM

Share

ಮೈಸೂರು, ಮಾರ್ಚ್​ 02: ಮಂಗಳೂರಿನ ಕುಕ್ಕರ್ ಬಾಂಬ್ ಬ್ಲಾಸ್ಟ್​​ಗು (Cooker Bomb Blast), ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬ್ಲಾಸ್ಟ್​​ಗೂ (Bengaluru Rameshwaram Cafe Bomb Blast) ಸಾಮ್ಯತೆ ಇಲ್ಲ. ಮಂಗಳೂರಿನಲ್ಲಿ ಕುಕ್ಕರನಲ್ಲಿ ಆದ ಬ್ಲಾಸ್ಟ್, ಬೆಂಗಳೂರಿನಲ್ಲಿ ಯಾವ ಕುಕ್ಕರ್​​ನಲ್ಲೂ ಬ್ಲಾಸ್ಟ್ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆರೋಪಿ ಮಾಸ್ಕ್​, ಟೋಪಿ​ ಹಾಕಿಕೊಂಡು ಬಂದು ಸ್ಫೋಟಿಸಿದ್ದಾನೆ. ಆರೋಪಿಯು ಬಸ್​ನಿಂದ ಇಳಿದು ಹೋಟೆಲ್​ಗೆ ಹೋಗಿದ್ದಾನೆ. ಆರೋಪಿ ಬಸ್​ನಿಂದ ಇಳಿದು ಹೋಗಿರುವ ದೃಶ್ಯಾವಳಿಗಳು ಪತ್ತೆಯಾಗಿವೆ.  ಆರೋಪಿ ಕಪ್ಪು ಬಣ್ಣದ ಮಾಸ್ಕ್​ ಹಾಕಿಕೊಂಡು ಬಂದಿದ್ದನು. ಆರೋಪಿ ಟೋಪಿ ಹಾಕಿಕೊಂಡು ಬಂದಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹೋಟೆಲ್​​ನಲ್ಲಿ ತಿಂಡಿಯ ಟೋಕನ್​ ತೆಗೆದುಕೊಂಡಿದ್ದಾನೆ. ನಂತರ ಹೋಟೆಲ್​​ನಲ್ಲಿ ಕುಳಿತು ಟೈಮರ್​ ಫಿಕ್ಸ್​ ಮಾಡಿದ್ದಾನೆ. ಟೈಮರ್ ಫಿಕ್ಸ್​ ಮಾಡಿ ಇಟ್ಟು ಹೋಟೆಲ್​​ನಿಂದ ಹೊರಹೋಗಿದ್ದಾನೆ​. ಬಳಿಕ ಬ್ಲಾಸ್ಟ್​ ಆಗಿದೆ ಎಂದರು.

ವ್ಯಕ್ತಿಯ ಗುರುತು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ. ವ್ಯಕ್ತಿಯ ಗುರುತು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ. ಇದು ಓರ್ವ ವ್ಯಕ್ತಿಯ ಕೃತ್ಯವಾ ಅಥವಾ ಸಂಘಟನೆಯ ಕೃತ್ಯವಾ ಗೊತ್ತಿಲ್ಲ. ಭಯೋತ್ಪಾದಕ ಕೃತ್ಯನಾ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಪ್ರಕರಣದ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ; ನಾಲ್ವರು ಶಂಕಿತರನ್ನು ವಶಕ್ಕೆ ಪಡೆದ ಪೊಲೀಸರು

ಇನ್ನೂ ಎಫ್ಎಸ್ಎಲ್ ವರದಿ ಬಂದಿಲ್ಲ

ವಿಧಾನಸೌಧದಲ್ಲಿ ಪಾಕಿಸ್ತಾನ್​ ಜಿಂದಾಬಾದ್ ಘೋಷಣೆ ಆರೋಪಕ್ಕೆ ಸಂಬಂಧಿಸಿದಂತೆ ಇನ್ನೂ ಎಫ್ಎಸ್ಎಲ್ ವರದಿ ಬಂದಿಲ್ಲ. ತಪ್ಪು ಸಾಬೀತಾದರೆ ನಾವು ಯಾರನ್ನೂ ರಕ್ಷಣೆ ಮಾಡುವುದಿಲ್ಲ. ಇದರಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ವರದಿ ಬಂರದೆ ಆರೋಪಗಳಿಗೆ ಏನೂ ಉತ್ತರ ಕೊಡಲಿ? ಎಂದರು.

ಅಲ್ಪಸಂಖ್ಯಾತ ತುಷ್ಟೀಕರಣದಿಂದ ಇಂತಹ ಕೃತ್ಯ ನಡೆದಿದೆ ಎಂಬ ಬಿಜೆಪಿ ನಾಯಕರ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ, ಬಿಜೆಪಿಯ ಕಾಲದಲ್ಲಿ ಆದ ಬಾಂಬ್ ಬ್ಲಾಸ್ಟ್​​ಗಳಿಗೆ ಏನು ಕಾರಣ? ಅದು ಅಲ್ಪಸಂಖ್ಯಾತರ ತುಷ್ಟೀಕರಣವಾ? ಬಿಜೆಪಿ ರಾಜಕೀಯಕ್ಕಾಗಿ ಇಂತಹ ಹೇಳಿಕೆ ನೀಡುತ್ತಿದೆ. ಅಲ್ಪಸಂಖ್ಯಾರಿಗೂ ಇದಕ್ಕೂ ಏನು ಸಂಬಂಧ? ಬಿಜೆಪಿ ಇದನ್ನು ರಾಜಕೀಯ ಮಾಡುತ್ತಿದೆ ಅಷ್ಟೆ. ಈ ವಿಚಾರದಲ್ಲಿ ರಾಜಕೀಯ ಯಾರು ಮಾಡಬಾರದು ಎಂದು ಮನವಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:03 am, Sat, 2 March 24

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್