AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ನೆಲೆಸಿದ್ದ ಶಂಕಿತ ಉಗ್ರ ಶಾರಿಕ್: ಬಾಡಿಗೆ ಮನೆ ಪಡೆಯಲು ಜಾರಿಯಾಗಲಿದೆ ಹೊಸ ಮಾರ್ಗಸೂಚಿ

ಮಂಗಳೂರಿನಲ್ಲಿ ನಡೆದ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ, ಶಂಕಿತ ಉಗ್ರ ಶಾರಿಕ್ ಮೈಸೂರಿನ ಲೋಕನಾಯಕ ಬಡಾವಣೆಯಲ್ಲಿ ವಾಸವಿದ್ದ ಎಂಬ ಮಾಹಿತಿ ತಿಳಿದುಬಂದಿದೆ.

ಮೈಸೂರಿನಲ್ಲಿ ನೆಲೆಸಿದ್ದ ಶಂಕಿತ ಉಗ್ರ ಶಾರಿಕ್: ಬಾಡಿಗೆ ಮನೆ ಪಡೆಯಲು ಜಾರಿಯಾಗಲಿದೆ ಹೊಸ ಮಾರ್ಗಸೂಚಿ
ಮೈಸೂರಿನಲ್ಲಿ ನೆಲೆಸಿದ್ದ ಶಂಕಿತ ಉಗ್ರ ಶಾರಿಕ್: ಬಾಡಿಗೆ ಮನೆ ಪಡೆಯಲು ಜಾರಿಯಾಗಲಿದೆ ಹೊಸ ಮಾರ್ಗಸೂಚಿ
TV9 Web
| Edited By: Rakesh Nayak Manchi|

Updated on: Nov 25, 2022 | 10:21 AM

Share

ಮೈಸೂರು: ಮಂಗಳೂರಿನಲ್ಲಿ ನಡೆದ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ (Mangaluru bomb blast case) ಆರೋಪಿ, ಶಂಕಿತ ಉಗ್ರ ಶಾರಿಕ್ ಮೈಸೂರಿನ ಲೋಕನಾಯಕ ಬಡಾವಣೆಯಲ್ಲಿ ವಾಸವಿದ್ದ ಎಂಬ ಮಾಹಿತಿ ತಿಳಿದುಬಂದಿದೆ. ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್ (Ramesh Banoth), ಶಂಕಿತ ಉಗ್ರ ಶಾರಿಕ್, ನಕಲಿ ದಾಖಲೆ ನೀಡಿ ಮನೆ ಬಾಡಿಗೆ ಪಡೆದಿದ್ದ. ಮನೆ ಬಾಡಿಗೆ ನೀಡುವ ಮುನ್ನ ವ್ಯಕ್ತಿಯ ಪೂರ್ವಾಪರ ತಿಳಿಯಬೇಕು. ಬಾಡಿಗೆದಾರರು ನೀಡುವ ದಾಖಲೆ ಸಂಪೂರ್ಣ ಪರಿಶೀಲಿಸಬೇಕು. ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗೂ ಮಾಹಿತಿ ನೀಡಬೇಕು. ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲೆ ಸಂಗ್ರಹಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಮೈಸೂರಿನಲ್ಲಿ ತಲೆ ಮರೆಸಿಕೊಂಡಿದ್ದ ಶಂಕಿತ ಉಗ್ರ ಶಾರಿಕ್, ನಕಲಿ ದಾಖಲೆ ನೀಡಿ ಮನೆ ಪಡೆದಿದ್ದ ಎಂದು ಹೇಳಿದ ರಮೇಶ್ ಬಾನೋತ್, ನಗರದಲ್ಲಿ ಮನೆ ಬಾಡಿಗೆ ಪಡೆಯುವ ವಿಚಾರವಾಗಿ ಮೈಸೂರು ಪೊಲೀಸರು ಶೀಘ್ರದಲ್ಲೇ ಮಾರ್ಗಸೂಚಿ ಹೊರಡಿಸಲಿದ್ದಾರೆ ಎಂದರು. ನಗರದಲ್ಲಿ ಬಾಡಿಗೆಗಾಗಿ ಮನೆ ಕೇಳಿಕೊಂಡು ಬಂದಾಗ ಅಂತಹ ವ್ಯಕ್ತಿಗಳ ಪೂರ್ವಾಪರ ತಿಳಿದುಕೊಳ್ಳಬೇಕು. ಅವರು ನೀಡುವ ದಾಖಲೆಗಳನ್ನು ಸರಿಯಾಗಿ ಪರಿಶೀಲಿಸಬೇಕು. ಇದರ ಜೊತೆಗೆ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲೆ ಸಂಗ್ರಹಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಇದನ್ನೂ ಓದಿ: ಮಂಗಳೂರು ಕುಕ್ಕರ್ ಬ್ಲಾಸ್ಟ್ ಆರೋಪಿ ಶಾರಿಕ್ ಮೈಸೂರಲ್ಲಿ ಪ್ರೇಮರಾಜ್ ಹೆಸರಲ್ಲಿ ಓಡಾಡಿಕೊಂಡಿದ್ದ!

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಹಾಗೂ ಶಂಕಿತ ಉಗ್ರ ಶಾರೀಕ್ ನೆಲೆಸಿದ್ದ ಮೈಸೂರಿನ ಲೋಕನಾಯಕನಗರ ಬಡಾವಣೆಯಲ್ಲಿ ನೀರವ ಮೌನ ನೆಲೆಸಿದೆ. ಶಾರೀಕ್ ಇದ್ದ ಮನೆಯಿರುವ ರಸ್ತೆಯಲ್ಲಿಯೂ ಎಲ್ಲ ಮನೆಗಳು ಖಾಲಿಖಾಲಿಯಾಗಿವೆ. ಬಹುತೇಕ ಮನೆಗಳಲ್ಲಿ ಜನರು ಹೆದರಿಕೆಯಿಂದ ಮನೆ ತೊರೆದು ಬೇರೆಡೆಗೆ ಹೋಗಿದ್ದಾರೆ. ಇರುವವರೂ ಮಾತನಾಡಲು, ಶಾರೀಕ್ ಬಗ್ಗೆ ಯಾವುದೇ ಮಾಹಿತಿ ಕೊಡಲು ಹಿಂಜರಿಯುತ್ತಿದ್ದಾರೆ. ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟಿಸಿದ ಘಟನೆ ನಡೆದು 6 ದಿನ ಕಳೆದರೂ ಜನರು ಶಾಕ್​ನಿಂದ ಹೊರಗೆ ಬಂದಿಲ್ಲ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ