AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಕಾವೇರಿ ನದಿಯಲ್ಲಿ 6 ಜನ‌ ಜಲಸಮಾಧಿ; ದರ್ಗಾಕ್ಕೆ ಬಂದವರು ದುರಂತ ಅಂತ್ಯ

ಮೈಸೂರು ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಇಂದು ದುರಂತ ಸಂಭವಿಸಿದೆ. ಉರೂಸ್​ ಹಿನ್ನೆಲೆ ದರ್ಗಾಕ್ಕೆ ಬಂದಿದ್ದ 8 ಜನರ ತಂಡ ನದಿಯಲ್ಲಿ ಈಜಲು ತೆರಳಿದ್ದು, ಆರು ಮಂದಿ ನೀರುಪಾಲಾಗಿದ್ದಾರೆ. ಕೆ.ಆರ್.ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೈಸೂರು: ಕಾವೇರಿ ನದಿಯಲ್ಲಿ 6 ಜನ‌ ಜಲಸಮಾಧಿ; ದರ್ಗಾಕ್ಕೆ ಬಂದವರು ದುರಂತ ಅಂತ್ಯ
ಆಸ್ಪತ್ರೆ ಎದುರು ಜಮಾವಣೆಗೊಂಡಿರುವ ಜನರು Image Credit source: tv9 kannada
ರಾಮ್​, ಮೈಸೂರು
| Edited By: |

Updated on:Apr 19, 2026 | 7:55 PM

Share

ಮೈಸೂರು, ಏಪ್ರಿಲ್​ 19: ಕಾವೇರಿ ನದಿಯಲ್ಲಿ (Cauvery River) ಮುಳುಗಿ 6 ಜನ‌ ದುರ್ಮರಣ (death) ಹೊಂದಿರುವಂತಹ ಘಟನೆ ಜಿಲ್ಲೆ K.R.ನಗರದ ಅರ್ಕೇಶ್ವರ ದೇಗುಲದ ಬಳಿ ನಡೆದಿದೆ. ಉರೂಸ್​ ಹಿನ್ನೆಲೆ 8 ಜನರ ತಂಡ ದರ್ಗಾಕ್ಕೆ ಬಂದಿದ್ದು, ಈ ವೇಳೆ ನದಿಗೆ ಈಜಲು ತೆರಳಿದ್ದಾಗ ದುರ್ಘಟನೆ ಸಂಭವಿಸಿದೆ. ಸ್ಥಳೀಯರು ಇಬ್ಬರನ್ನು ರಕ್ಷಿಸಿದ್ದು, ಉಳಿದ 6 ಜನ ನೀರುಪಾಲಾಗಿದ್ದಾರೆ. ಸ್ಥಳಕ್ಕೆ ಕೆ.ಆರ್.ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಡೆದದ್ದೇನು? 

ಮೈಸೂರು ಜಿಲ್ಲೆಯ ಕೆ.ಆರ್.ನಗರದಲ್ಲಿ ಇಂದು ಉರೂಸ್ ಹಿನ್ನೆಲೆ ದರ್ಗಾಕ್ಕೆ ಬೆಂಗಳೂರು ಮತ್ತು ಊಟಿಯಿಂದ ಸಾಕಷ್ಟು ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು. ಈ ಸಂದರ್ಭದಲ್ಲಿ ಎಂಟು ಜನರ ತಂಡವೊಂದು ಅರ್ಕೇಶ್ವರ ದೇವಸ್ಥಾನದ ಸಮೀಪವಿರುವ ಕಾವೇರಿ ನದಿಗೆ ಈಜಲು ತೆರಳಿದ್ದಾರೆ. ಈ ವೇಳೆ ನದಿಯಲ್ಲಿ ಮುಳುಗಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಸ್ಥಳೀಯರು ಇಬ್ಬರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ದುರದೃಷ್ಟವಶಾತ್ ಉಳಿದ ಆರು ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಸಿಎಂ ಸಿದ್ದರಾಮಯ್ಯ ಟ್ವೀಟ್​

ಮೃತರು

ಬೆಂಗಳೂರಿನ ಯಾಸಿನ್​(23) ಹಾಗೂ ಹೈಮಾ(13), ಊಟಿ ಮೂಲದ 38 ವರ್ಷದ ಸೈದ್ ಫಾತಿಮಾ, ಮೈಸೂರು ಜಿಲ್ಲೆಯ ನೇಹಾ(20), ಉಮೇರ್(7) ಮತ್ತು ಅಫಿಯಾ(20) ಮೃತರು. ಸದ್ಯ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮೃತದೇಹಗಳನ್ನು ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

ಸಿಎಂ ಸಂತಾಪ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ ಪರಿಹಾರ ಘೋಷಣೆ

ಇನ್ನು ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಮೈಸೂರಿನ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ 6 ಮಂದಿ ನೀರುಪಾಲಾದ ವಿಚಾರ ತಿಳಿದು ದುಃಖವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬ ಸದಸ್ಯರಿಗೆ ಅಗಲಿಕೆಯ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.

ಇದನ್ನೂ ಓದಿ: ಅರಹಳ್ಳಿ ಕೆರೆಯಲ್ಲಿ ದುರಂತ: ಮಕ್ಕಳನ್ನು ರಕ್ಷಿಸಲು ಹೋಗಿ ಜೀವ ತೆತ್ತ ಮಹಿಳೆಯರು

ಕುಟುಂಬ ಸದಸ್ಯರನ್ನು ಕಳೆದುಕೊಂಡು ನೊಂದಿರುವ ಜೀವಗಳಿಗೆ ಆರ್ಥಿಕ ಸವಾಲುಗಳು ಮತ್ತಷ್ಟು ಬಾಧಿಸದಿರಲಿ ಎಂಬ ಮಾನವೀಯ ಕಾಳಜಿಯೊಂದಿಗೆ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ದುರ್ಘಟನೆಯಲ್ಲಿ ರಕ್ಷಿಸಲ್ಪಟ್ಟು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:11 pm, Sun, 19 April 26

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More