AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರಾತಕ ಮದುವೆಯಾಗಿದ್ದರೂ ಮತ್ತೊಬ್ಬ ಯುವತಿಯನ್ನು ಪ್ರೀತಿಗಾಗಿ ಪೀಡಿಸ್ತಿದ್ದ, ಕಾಟ ತಾಳದೆ ಹುಡುಗಿ ಆತ್ಮಹತ್ಯೆ ಮಾಡಿಕೊಂಡಳು

ಪ್ರೀತಿ ಹೆಸರಿನಲ್ಲಿ ವಿವಾಹಿತ ನೀಡಿದ ಕಿರುಕುಳಕ್ಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಯುವತಿ!

ಕಿರಾತಕ ಮದುವೆಯಾಗಿದ್ದರೂ ಮತ್ತೊಬ್ಬ ಯುವತಿಯನ್ನು ಪ್ರೀತಿಗಾಗಿ ಪೀಡಿಸ್ತಿದ್ದ, ಕಾಟ ತಾಳದೆ ಹುಡುಗಿ ಆತ್ಮಹತ್ಯೆ ಮಾಡಿಕೊಂಡಳು
ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಯುವತಿ!
ರಾಮ್​, ಮೈಸೂರು
| Edited By: |

Updated on: Jul 04, 2023 | 12:12 PM

Share

ಆತನಿಗೆ ಮದುವೆಯಾಗಿ ಒಂದು ಮಗು ಇತ್ತು (married person). ಆದ್ರೂ ಕಿರಾತಕನಿಗೆ ಮತ್ತೊಂದು ಪ್ರೇಮದ ಖಯಾಲಿ‌ (Love) ಮೂಡಿತ್ತು. ಹೀಗಾಗಿ ನಾಲ್ಕು ವರ್ಷಗಳಿಂದ ಒಂದು ಯುವತಿಯನ್ನು ಪ್ರೀತಿಗಾಗಿ ಪೀಡಿಸುತ್ತಿದ್ದ. ಪ್ರೀತ್ಸೆ ಪ್ರೀತ್ರೆ ಅಂತ ಪೀಡಿಸುವುದರ (Torture) ಜೊತೆಗೆ ಆಕೆಯ ಮದುವೆಯನ್ನೂ ಮುರಿದಿದ್ದ. ಪ್ರೀತ್ಸು ಇಲ್ಲವೇ ಜೊತೆಯಲ್ಲಿ ಸಾಯಿ ಎಂದವನು ಯುವತಿ ಆತ್ಮಹತ್ಯೆ (Suicide) ಮಾಡಿಕೊಳ್ಳುತ್ತಿದ್ದಂತೆ ನಾಪತ್ತೆಯಾಗಿದ್ದಾನೆ. ನಾನು ಆಟೋ ಓಡುಸ್ತಿದ್ರೂ ಆಫೀಸರ್ ಮಗಳಂಗೆ ಸಾಕಿದ್ವೀ ಸರ್… ಅನ್ಯಾಯ ಮಾಡಿಬಿಟ್ಟ ಎಂದು ಆ ಹಿರಿಯ ವ್ಯಕ್ತಿ ಗೋಳಾಡ್ತಾ ಇರೋದು ಮಗಳ ಸಾವಿಗಾಗಿ. ಸತ್ತು ಹೋದ ಮಗಳನ್ನು ನೆನೆ ನೆನೆದು ಕಣ್ಣೀರು ಹಾಕುತ್ತಿರುವ ಈ ತಾಯಿಯ ಹೆಸರು ಶೋಭ. ಈಕೆಯ ಮುದ್ದಿನ ಮಗಳು ಹರ್ಷಿತಾ ರಾಣಿ ಈಗ ಬಾರದ ಲೋಕಕ್ಕೆ ಹೋಗಿದ್ದಾಳೆ. ಪ್ರೀತಿ ಹೆಸರಿನ ಕಿರುಕುಳಕ್ಕೆ ಬೆಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಈ ಹೃದಯ ವಿದ್ರಾವಕ ಘಟನೆಗೆ ಸಾಕ್ಷಿಯಾಗಿರುವುದು ಮೈಸೂರು (Mysore) ತಾಲೂಕಿನ ಗಣಗರ ಹುಂಡಿ. ಪ್ರೀತಿ ಹೆಸರಿನಲ್ಲಿ ವಿವಾಹಿತ ನೀಡಿದ ಕಿರುಕುಳಕ್ಕೆ ಹರ್ಷಿತಾ ಎಂಬ ಯುವತಿ ವಿಷದ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಗಣಗರಹುಂಡಿ ಗ್ರಾಮದ ವೇಣುಗೋಪಾಲ್-ಶೋಭಾ ದಂಪತಿ ಮಗಳಾದ 21 ವರ್ಷದ ಹರ್ಷಿತಾಳಿಗೆ ಇದೇ ಗ್ರಾಮದಲ್ಲಿ ಪ್ಲಂಬರಿಂಗ್ ಅಂಗಡಿ ನಡೆಸುತ್ತಿದ್ದ 26 ವರ್ಷದ ಶಿವು ಎಂಬಾತ ಕಾಡುತ್ತಿದ್ದ. ಪ್ರೀತಿ ಹೆಸರಿನಲ್ಲಿ ಕಿರುಕುಳ ನೀಡುತ್ತಿದ್ದನಂತೆ.

ಮೂಲತಃ ಕನಕಪುರದ ಶಿವು ಹಲವು ವರ್ಷಗಳಿಂದ ಗಣಗರಹುಂಡಿಯಲ್ಲೇ ವಾಸವಿದ್ದ. ಕಾಲೇಜು ಓದಲು ಮೈಸೂರಿಗೆ ಹೋಗುತ್ತಿದ್ದ ರಾಣಿಯನ್ನು ನಾಲ್ಕು ವರ್ಷಗಳ ಹಿಂದೆಯೇ ಪುಸಲಾಯಿಸಿ ಪ್ರೀತಿಗೆ ಬೀಳಿಸಿದ್ದ. ಈ ವಿಚಾರ ರಾಣಿ ಮನೆಯವರಿಗೆ ಗೊತ್ತಾಗಿ, ಶಿವುಗೆ ಚೆನ್ನಾಗಿ ಥಳಿಸಿ ಬುದ್ದಿ ಹೇಳಿದ್ದರು. ಆಗ ಸುಮ್ಮನಿದ್ದವನು ಮತ್ತೆ ಪ್ರೀತಿಗಾಗಿ ಯುವತಿಯ ಬೆನ್ನು ಬಿದ್ದಿದ್ದನಂತೆ.

ಕೊನೆಗೆ ರಾಣಿ ಮನೆಯವರು ತಮ್ಮ ಮಗಳಿಗೆ ಬೇರೆ ಹುಡುಗನ ಜೊತೆ ಮದುವೆ ಕೂಡ ಗೊತ್ತು ಮಾಡಿದ್ದರು. ಆದರೆ ಆ ಮದುವೆಯನ್ನೂ ಮುರಿಯುವಂತೆ ಮಾಡಿದ್ದ ಆರೋಪಿ ಶಿವು. ಇಬ್ಬರೂ ಒಟ್ಟಿಗೆ ಸಾಯೋಣ ಅಂತ ಹೇಳಿ ಆಕೆಯ ತಲೆ ಕೆಡಿಸಿದ್ದಾನೆ ಎನ್ನುವುದು ರಾಣಿ ತಂದೆ ಆರೋಪ.

ಜುಲೈ 1 ಶನಿವಾರದಂದು ಕಂಪ್ಯೂಟರ್ ಕ್ಲಾಸ್ ಮುಗಿಸಿ ಮನೆಗೆ ಬಂದ ರಾಣಿ ವಿಷದ ಮಾತ್ರೆ ಸೇವಿಸಿ ಆಸ್ವಸ್ಥಳಾಗಿದ್ದಾಳೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾಣಿ ಕೊನೆಯುಸಿರೆಳೆದಿದ್ದಾಳೆ. ಇನ್ನು ವಯಸ್ಸಿಗೆ ಬಂದ ಮಗಳನ್ನು ಕಳೆದುಕೊಂಡ ತಾಯಿ ಮೊಬೈಲ್ ನಲ್ಲಿ ಮಗಳ ಪೋಟೋಗಳನ್ನು ನೋಡುತ್ತಾ ಕಣ್ಣೀರು ಹಾಕುತ್ತಿರುವ ದೃಶ್ಯ ಎಂತಹವರದೇ ಕರುಳು ಹಿಂಡುವಂತಿದೆ.

ಇನ್ನು ತಂದೆ ಆಟೋ ಓಡಿಸಿದರೂ ಮಗಳನ್ನು ಆಫೀಸರ್ ಮಗಳಂತೆ ಸಾಕಿದ್ದರು. ಮುದ್ದಾದ ಮಗಳು ರಾಣಿಗೆ ಮುದ್ದಾದ ಆ ನಾಯಿ ಅಂದ್ರೆ ತುಂಬಾ ಪ್ರೀತಿ. ಆಕೆಯನ್ನು ಕಾಣದ ನಾಯಿ ಕೂಡಾ ಚಿಂತಾಕ್ರಾಂತವಾಗಿದೆ.

ಈ ಬಗ್ಗೆ ಮೈಸೂರಿನ ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ನಂತರ ಆರೋಪಿ ಶಿವು ಪರಾರಿಯಾಗಿದ್ದಾನೆ. ಆತನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಇದೆಲ್ಲಾ ಏನೇ ಇರಲಿ ತಾನು ಮದುವೆಯಾಗಿದ್ದರೂ ಮತ್ತೊಂದು ಯುವತಿಗೆ ಪ್ರೀತಿ ಪ್ರೇಮದ ಹೆಸರಲ್ಲಿ ಕಿರುಕುಳ ನೀಡಿದ್ದು ಮಾತ್ರವಲ್ಲ ಆಕೆಯ ಸಾವಿಗೂ ಕಾರಣವಾಗಿದ್ದು‌ ಮಾತ್ರ ಘೋರ ಅಪರಾಧವೇ ಸರಿ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್