AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ಖಂಡಿಸಿ ಆಗಸ್ಟ್ 14 ರಂದು ನಂಜನಗೂಡಿನಲ್ಲಿ ಬೃಹತ್ ಪ್ರತಿಭಟನೆ

ಕರ್ನಾಟಕದಿಂದ ತಮಿಳುನಾಡಿಗೆ ನೀರು ಬಿಡುವುದನ್ನು ಖಂಡಿಸಿ ಆಗಸ್ಟ್ 14 ರಂದು ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಲಾಗಿದೆ. ಸಾಮೂಹಿಕ ನಾಯಕತ್ವದಲ್ಲಿ ಪ್ರತಿಭಟನೆ ನಡೆಸಲು ರೈತರು ನಿರ್ಧರಿಸಿದ್ದಾರೆ.

ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ಖಂಡಿಸಿ ಆಗಸ್ಟ್ 14 ರಂದು ನಂಜನಗೂಡಿನಲ್ಲಿ ಬೃಹತ್ ಪ್ರತಿಭಟನೆ
ಆಗಸ್ಟ್ 14 ರಂದು ನಂಜನಗೂಡಿನಲ್ಲಿ ರೈತರ ಪ್ರತಿಭಟನೆ
ರಾಮ್​, ಮೈಸೂರು
| Updated By: Rakesh Nayak Manchi|

Updated on: Aug 12, 2023 | 8:03 PM

Share

ಮೈಸೂರು, ಆಗಸ್ಟ್ 12: ತಮಿಳುನಾಡಿಗೆ (Tamil Nadu) ನೀರು ಬಿಡುತ್ತಿರುವುದನ್ನು ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ರೈತರು ಆಗಸ್ಟ್ 14 ರಂದು ನಂಜನಗೂಡಿನಲ್ಲಿ ಬೃಹತ್ ಪ್ರತಿಭಟನೆಗೆ (Protest) ಕರೆ ನೀಡಿದ್ದಾರೆ. ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಪ್ರತಿಭಟನೆ ನಡೆಯಲಿದೆ.

ನಂಜನಗೂಡಿನ ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಅಭಿಯಂತರದ ಕಚೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆಗೆ ನಿರ್ಧಾರ ಮಾಡಲಾಗಿದೆ. ನಾಲೆಗಳಲ್ಲಿ ಹೂಳು ತೆಗೆದಿಲ್ಲ, ಗಿಡ ಗಂಟೆಗಳನ್ನು ತೆರವು ಮಾಡಿಲ್ಲ. ಕಬಿನಿ ಬಲದಂಡೆ ಮತ್ತು ಎಡದಂಡೆ ಹಾಗೂ ನುಗು ನಾಲೆಗಳ ಕಡೆಯ ಭಾಗದ ರೈತರ ಜಮೀನುಗಳಿಗೆ ನೀರು ಬಿಟ್ಟಿಲ್ಲ. ಆದರೆ ತಮಿಳುನಾಡಿಗೆ ಕಪಿಲಾ ನದಿ ಮೂಲಕ ನೀರು ಹರಿದು ಹೋಗುತ್ತಿದೆ ಎಂದು ರೈತರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಗದ್ದಲ; ಪಟ್ಟು ಬಿಡದ ತಮಿಳುನಾಡು ಅಧಿಕಾರಿಗಳು

ಕರ್ನಾಟಕದ ರೈತರು ಬೆಳೆ ಬೆಳೆಯಲು ನೀರು ಇಲ್ಲ. ಸಮರ್ಪಕವಾಗಿ ಗೇಟ್​ಗಳನ್ನು ಅಳವಡಿಸದೆ ರೈತರ ಜೊತೆ ಅಧಿಕಾರಿಗಳು ಚೆಲ್ಲಾಟ ಆಡುತ್ತಿದ್ದಾರೆ. ಇಂತಹ ಬೇಜವಾಬ್ದಾರಿ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತದೆ. ಪ್ರತಿಭಟನೆಗೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ತಮಿಳುನಾಡಿಗೆ ಬಿಟ್ಟಿರುವ ನೀರನ್ನು ನಿಲ್ಲಿಸುವ ತನಕ ಹೋರಾಟ ಮಾಡುತ್ತೇವೆ ಎಂದು ರೈತರು ಎಚ್ಚರಿಕೆ ನೀಡಿದ್ದಾರೆ.

ಇದೇ ವೇಳೆ ನಾಲೆಗಳಿಗೆ ನೀರು ಬಿಡುವಂತೆ ರೈತರು ಒತ್ತಾಯಿಸಿದ್ದಾರೆ. ಭತ್ತದ ಬೆಳೆ ಬೆಳೆಯಲು ಅನ್ನದಾತರು ಕಾದು ಕುಳಿತಿದ್ದಾರೆ. ಭತ್ತದ ಬೆಳೆಗೆ ಸಮಯವೂ ಮೀರುತ್ತಿರುವುದರಿಂದ ಆತಂಕದಲ್ಲಿ ಕಾಲಕಳೆಯುತ್ತಿದ್ದಾರೆ. ಜಲಾಶಯಗಳು ತುಂಬಿದ್ದರೂ ನಾಲೆಗಳಿಗೆ ನೀರು ಬಿಡದಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಹುಣಸೂರು, ಕೆ.ಆರ್. ನಗರ ಭಾಗದಲ್ಲೂ ನೀರು ಬಿಡುವಂತೆ ರೈತರು ಒತ್ತಾಯಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!