AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಅತ್ಯಾಚಾರ ಪ್ರಕರಣ: ಆರೋಪಿಗಳಿಂದ ತಪ್ಪೊಪ್ಪಿಗೆ, ಹೇಳಿಕೆ ನೀಡಲು ಸಂತ್ರಸ್ತೆ ನಿರಾಕರಣೆ; ಆರೋಪಿಗಳಿಗೆ ಇಂದೇ ವೈದ್ಯಕೀಯ ಪರೀಕ್ಷೆ

ಅತ್ಯಾಚಾರದಲ್ಲಿ 6 ಜನ ಭಾಗಿಯಾಗಿದ್ದರು ಎಂದು ಹೇಳಲಾಗುತ್ತಿತ್ತು. ಆದರೆ ಪೊಲೀಸರ ತನಿಖೆ ವೇಳೆ ಇನ್ನೊರ್ವ ಭಾಗಿಯಾಗಿರುವ ಮಾಹಿತಿ ಲಭ್ಯವಾಗಿದೆ.

ಮೈಸೂರು ಅತ್ಯಾಚಾರ ಪ್ರಕರಣ: ಆರೋಪಿಗಳಿಂದ ತಪ್ಪೊಪ್ಪಿಗೆ, ಹೇಳಿಕೆ ನೀಡಲು ಸಂತ್ರಸ್ತೆ ನಿರಾಕರಣೆ;  ಆರೋಪಿಗಳಿಗೆ ಇಂದೇ ವೈದ್ಯಕೀಯ ಪರೀಕ್ಷೆ
ಸಾಂದರ್ಭಿಕ ಚಿತ್ರ
TV9 Web
| Updated By: sandhya thejappa|

Updated on:Aug 29, 2021 | 3:40 PM

Share

ಮೈಸೂರು: ವಿದ್ಯಾರ್ಥಿನಿ ಮೇಲೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಿಗೆ ಇಂದೇ ವೈದ್ಯಕೀಯ ಪರೀಕ್ಷೆ ನಡೆಯುತ್ತದೆ. ವೈದ್ಯಕೀಯ ಪರೀಕ್ಷೆಗಾಗಿ (Medical Test )ವಿಶೇಷ ತಂಡ ಆಗಮಿಸಿದೆ. ಮೈಸೂರಿಗೆ ಆಗಮಿಸಿದ ತಜ್ಞರ ತಂಡ ಆರೋಪಿಗಳಿಂದ ಎಲ್ಲಾ ಸ್ಯಾಂಪಲ್​ಗಳನ್ನು ಸಂಗ್ರಹಿಸುತ್ತಾರೆ. ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಮಿಯಲ್ಲಿ ಇರುವ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಲ್ಯಾಬ್ ಟೆಕ್ನಿಷಿಯನ್ಸ್ ಮತ್ತು ತಜ್ಞರು ಪರೀಕ್ಷೆ ನಡೆಸುತ್ತಾರೆ. ಸಂಪೂರ್ಣ ವರದಿ ಸಿಗುವವರೆಗೂ ತಜ್ಞರ ತಂಡ ಮೈಸೂರಿನಲ್ಲಿಯೇ ಬೀಡು ಬಿಡಲಿದ್ದಾರೆ.

ಹೇಳಿಕೆ ನೀಡುವುದಕ್ಕೆ ಸಂತ್ರಸ್ತೆ ನಿರಾಕರಣೆ ಆರೋಪಿಗಳ ಬಂಧನ ಬಳಿಕವೂ ಘಟನೆಯ ಬಗ್ಗೆ ಹೇಳಿಕೆ ನೀಡುವುದಕ್ಕೆ ಸಂತ್ರಸ್ತೆ ನಿರಾಕರಿಸುತ್ತಿದ್ದಾರೆ. ಹೇಳಿಕೆಗಳನ್ನು ಪಡೆಯಲು ಪೊಲೀಸರು ಹರಸಾಹಸ ಪಡುತ್ತಿದ್ದು, ಸಂತ್ರಸ್ತೆ ಜತೆಗಿದ್ದ ಸ್ನೇಹಿತನ ಹೇಳಿಕೆ ಆಧರಿಸಿ ಎಫ್‌ಐಆರ್ ದಾಖಲಾಗಿದೆ. ಸಿಆರ್‌ಪಿಸಿ ಸೆಕ್ಷನ್ 164ರ ಅಡಿ ಸಂತ್ರಸ್ತೆ ತನಗಾದ ಲೈಂಗಿಕ ದೌರ್ಜನ್ಯದ ಬಗ್ಗೆ ಹೇಳಿಕೆ ನೀಡಬೇಕು. ಸಂತ್ರಸ್ತೆ ಹೇಳಿಕೆ ನೀಡಿದರೆ ಅದು ಮಹತ್ವದ ಸಾಕ್ಷ್ಯವಾಗಲಿದೆ. ಆಗ ಸರ್ಕಾರಕ್ಕೂ ಪೊಲೀಸರು ವರದಿಯನ್ನು ನೀಡಬಹುದು. ಆದರೆ ಸಂತ್ರಸ್ತೆ ಮಾತ್ರ ಹೇಳಿಕೆ ನೀಡುವುದಕ್ಕೆ ನಿರಾಕರಣೆ ಮಾಡುತ್ತಿದ್ದಾರೆ.

ಆರೋಪಿಗಳಿಂದ ತಪ್ಪೊಪ್ಪಿಗೆ ಪೊಲೀಸರ ವಿಚಾರಣೆ ವೇಳೆ ಆರೋಪಿಗಳು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಅಂದು ನಡೆದ ಘಟನೆ ಬಗ್ಗೆ ಪೊಲೀಸರ ಮುಂದೆ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಡಿಸಿಪಿ ಪ್ರದೀಪ್ ಗುಂಟಿ ನೇತೃತ್ವದಲ್ಲಿ ಮೈಸೂರಿನ ಅಜ್ಞಾತ ಸ್ಥಳದಲ್ಲಿ ಆರೋಪಿಗಳನ್ನು ವಿಚಾರಣೆ ನಡೆಸಲಾಗಿದೆ.

ಅತ್ಯಾಚಾರದಲ್ಲಿ 6 ಜನ ಭಾಗಿಯಾಗಿದ್ದರು ಎಂದು ಹೇಳಲಾಗುತ್ತಿತ್ತು. ಆದರೆ ಪೊಲೀಸರ ತನಿಖೆ ವೇಳೆ ಇನ್ನೋರ್ವ ಭಾಗಿಯಾಗಿರುವ ಮಾಹಿತಿ ಲಭ್ಯವಾಗಿದೆ. ಸದ್ಯ ಐವರು ಬಂಧನಕ್ಕೊಳಗಾಗಿದ್ದು, ಇಬ್ಬರು ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ಶುರುಮಾಡಿದ್ದಾರೆ. ಇನ್ನು ಆರೋಪಿಗಳನ್ನು ಬಂಧಿಸಲು ಪೊಲೀಸರು ನಡೆಸಿದ ಕಾರ್ಯಚರಣೆ ರೋಚಕವಾಗಿತ್ತು. ಮೈಸೂರು ಪೊಲೀಸರ ತಂಡ ತಾಳವಾಡಿಯ ಸೂಸಿಪುರಂಗೆ ಹೋಗಿತ್ತು. ಮಾಹಿತಿ ಸಿಕ್ಕರೂ ಆರೋಪಿ ಸ್ಥಳಕ್ಕೆ ಹೋಗುವುದು ಸವಾಲಾಗಿತ್ತು. ಮಾಹಿತಿ ಎಲ್ಲಾ ಪಡೆದರು ರಾತ್ರಿಯಾಗುವುದಕ್ಕೆ ಕಾಯುತ್ತಿದ್ದ ಪೊಲೀಸರು, ಕತ್ತಲಾಗುತ್ತಿದ್ದಂತೆ ಮನೆ ಮೇಲೆ ದಾಳಿ ಮಾಡಿದ್ದರು. ತಮಿಳು ಬಾಷೆ ಗೊತ್ತಿರುವ ಪೊಲೀಸರನ್ನು ಮೈಸೂರು ಪೊಲೀಸರು ಕರೆದುಕೊಂಡು ಹೋಗಿದ್ದರು.

ಇದನ್ನೂ ಓದಿ

ವಿಜಯಪುರ: ನಿನ್ನೆ ಬಂಧನಕ್ಕೊಳಗಾಗಿದ್ದ ಅತ್ಯಾಚಾರ ಆರೋಪಿ ಠಾಣೆ ಶೌಚಾಲಯದಲ್ಲಿ ನೇಣಿಗೆ ಶರಣು; ಪೋಷಕರ ಆಕ್ರೋಶ

ಮೈಸೂರು ಅತ್ಯಾಚಾರ ಪ್ರಕರಣ; ಆರೋಪಿಯ ತಾಯಿ ಕಣ್ಣೀರು

(medical test will be conducted for the accused of rape in Mysuru)

Published On - 3:10 pm, Sun, 29 August 21

ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ
ತುಂಗಭದ್ರಾ ಜಲಾಶದಿಂದ ಏಕಾಏಕಿ ನುಗ್ಗಿ ಬಂದ ನೀರು, ಶ್ವಾನಗಳು ಎಸ್ಕೇಪ್
ತುಂಗಭದ್ರಾ ಜಲಾಶದಿಂದ ಏಕಾಏಕಿ ನುಗ್ಗಿ ಬಂದ ನೀರು, ಶ್ವಾನಗಳು ಎಸ್ಕೇಪ್