AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಟಗಳ್ಳಿ ಠಾಣೆ ಪೊಲೀಸರ ಕಾರ್ಯಾಚರಣೆ; 9 ದ್ವಿಚಕ್ರ ವಾಹನ ಕಳ್ಳತನ ಪ್ರಕರಣಗಳಲ್ಲಿ ಬೇಕಿದ್ದ ನಾಲ್ವರು ಅರೆಸ್ಟ್

ಮೈಸೂರು, ಮಂಡ್ಯ, ಹಾಸನ ಜಿಲ್ಲೆಯಲ್ಲಿ ದ್ವಿಚಕ್ರ ವಾಹನ ಕಳ್ಳತನ ಮಾಡಿದ್ದ ನಾಲ್ವರು ಆರೋಪಿಗಳನ್ನು ಮೇಟಗಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಆರೋಪಿಗಳು ಬೇರೆ ಬೇರೆ ಠಾಣೆಯಲ್ಲಿ 9 ಪ್ರಕರಣಗಳನ್ನು ಹೊಂದಿದ್ದಾರೆ. ಆರೋಪಿಗಳಿಂದ 6 ಲಕ್ಷ ರೂಪಾಯಿ ಮೌಲ್ಯದ 9 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ.

ಮೇಟಗಳ್ಳಿ ಠಾಣೆ ಪೊಲೀಸರ ಕಾರ್ಯಾಚರಣೆ; 9 ದ್ವಿಚಕ್ರ ವಾಹನ ಕಳ್ಳತನ ಪ್ರಕರಣಗಳಲ್ಲಿ ಬೇಕಿದ್ದ ನಾಲ್ವರು ಅರೆಸ್ಟ್
9 ದ್ವಿಚಕ್ರ ವಾಹನ ಕಳ್ಳತನ ಪ್ರಕರಣಗಳಲ್ಲಿ ಬೇಕಿದ್ದ ನಾಲ್ವರು ಅರೆಸ್ಟ್
Follow us
ರಾಮ್​, ಮೈಸೂರು
| Updated By: ಆಯೇಷಾ ಬಾನು

Updated on: Mar 05, 2024 | 10:40 AM

ಮೈಸೂರು, ಮಾರ್ಚ್.05: ಮೇಟಗಳ್ಳಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರು ದ್ವಿಚಕ್ರ (Two Wheeler) ವಾಹನ ಕಳ್ಳರನ್ನು ಬಂಧಿಸಿದ್ದಾರೆ. ಬಂಧಿತರಿಂದ 6 ಲಕ್ಷ ರೂಪಾಯಿ ಮೌಲ್ಯದ 9 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ. ಆರೋಪಿಗಳು ಮೈಸೂರು, ಮಂಡ್ಯ, ಹಾಸನ ಜಿಲ್ಲೆಯಲ್ಲಿ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದರು. ಈ ಸಂಬಂಧ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರದಕರಣ ದಾಖಲಾಗಿದ್ದು ಆರೋಪಿಗಳು ಅರೆಸ್ಟ್ ಆಗಿದ್ದಾರೆ.

ಮೇಟಗಳ್ಳಿ ಠಾಣೆಯ 2, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ 2, ಕೆಆರ್​ಎಸ್ ನ 1, ಪಾಂಡವಪುರದ 2, ಮೇಲುಕೋಟೆ 1, ಹಾಸನದ ಎಕ್ಸ್ ಟೆನ್ಷನ್ ಠಾಣೆಯ 1 ಪ್ರಕರಣ ಸೇರಿದಂತೆ ಒಟ್ಟು 9 ದ್ವಿಚಕ್ರ ವಾಹನ ಕಳವು ಪ್ರಕರಣಗಳು ಬೆಳಕಿಗೆ ಬಂದಿವೆ. ನಂಬರ್ ಪ್ಲೇಟ್ ಇಲ್ಲದ ಎರಡು ದ್ವಿಚಕ್ರ ವಾಹನಗಳಲ್ಲಿ ಇಬ್ಬರು ಆರೋಪಿಗಳು ಬರುತ್ತಿದ್ದರು. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ಬಂಧಿತ ಆರೋಪಿಗಳು ನೀಡಿದ ಸುಳಿವಿನ ಮೇರೆಗೆ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Niranjan Hiranandani: 10 ಗಂಟೆಗಳ ಕಾಲ ಕೈಗಾರಿಕೋದ್ಯಮಿ ನಿರಂಜನ್ ಹೀರಾನಂದಾನಿ ವಿಚಾರಣೆ ನಡೆಸಿದ ಇಡಿ

ಬೇಕರಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ

ಕ್ಷುಲಕ ಕಾರಣಕ್ಕೆ ಬೇಕರಿಗೆ ನುಗ್ಗಿದ ಗುಂಪೊಂದು ಮಹಿಳೆ ಮೇಲೆ ಹಲ್ಲೆ ಮಾಡಿದೆ. ಹೊಸನಗರ ತಾಲೂಕು ಕೋಡೂರಿನಲ್ಲಿ ನಡೆದಿದೆ. ಲಕ್ಷ್ಮಿ ಮಲ್ನಾಡ್ ಬೇಕರಿಗೆ ನುಗ್ಗಿದ, ಕೀರ್ತಿ, ಯೋಗೇಂದ್ರ, ಮಂಜುಶೆಟ್ಟಿ, ಕಿರಣ್ ಹಾಗೂ ಸಂದೀಪ್ ಶೆಟ್ಟಿ ಎಂಬುವರು, ಬೇಕರಿ ಮಾಲೀಕ ಪ್ರದೀಪ್ ಹಾಗೂ ಪತ್ನಿ ವಿದ್ಯಾ ಮೇಲೆ ಹಲ್ಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಹಲ್ಲೆ ಪ್ರಕರಣ ದಾಖಲಿಸಿದೆ.

ಕಾರಿನಲ್ಲಿ ಬಂದು ಕುರಿ ಕಳ್ಳತನ

ಬೆಂಗಳೂರು ಹೊರವಲಯದ ಮಾದನಾಯಕನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಕುರಿ-ಮೇಕೆ ಕಳ್ಳರ ಕಾಟ ಮಿತಿಮೀರಿದೆ. ಇನ್ನೋವಾ ಕಾರಿನಲ್ಲಿ ಬಂದಿದ್ದ ಖದೀಮರು ರಾತ್ರೋರಾತ್ರಿ 28 ಕುರಿ ಮತ್ತು ಮೇಕೆಗಳನ್ನ ಹೊತ್ತೊಯ್ದಿದ್ದಾರೆ. ಬೊಮ್ಮನಹಳ್ಳಿ ಶ್ರೀರಾಮಣ್ಣ ಅವರ 6, ದೊಡ್ಡಿಪಾಳ್ಯದ ಬೈಲಪ್ಪಅವರ5, ಬೆತ್ತನಗೆರೆ ಬೈಲಪ್ಪ ಅವರ 9 ಹಾಗೂ ಹುಸ್ಕೂರಿನ ಸುಧಾಮ್ಮ ಅವರ8 ಮೇಕೆಗಳನ್ನ ಕಳ್ಳತನ ಮಾಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ
ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ