AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಕ್ ಚಂದ್ರು ಖ್ಯಾತಿಯ N.ಚಂದ್ರಶೇಖರ್ ಹೃದಯಾಘಾತದಿಂದ ನಿಧನ

ಮೈಕ್ ಚಂದ್ರು ತಮ್ಮ ವಿಭಿನ್ನ ಧ್ವನಿಯಿಂದ ಚಿರಪರಿಚಿತರಾಗಿದ್ದವರು. ದಸರಾ ವಸ್ತು ಪ್ರದರ್ಶನ, ಕುಸ್ತಿ ಅಖಾಡ, ನಾಟಕಗಳು, ಸರ್ಕಾರಿ ಕಾರ್ಯಕ್ರಮ, ಆಟೋ ಪ್ರಚಾರಗಳಲ್ಲಿ ಭಾಗಿಯಾಗಿ ತಮ್ಮ ವಾಕ್ಚಾತುರ್ಯದಿಂದ ಎಲ್ಲರ ಗಮನ ಸೆಳೆದಿದ್ರು.

ಮೈಕ್ ಚಂದ್ರು ಖ್ಯಾತಿಯ N.ಚಂದ್ರಶೇಖರ್ ಹೃದಯಾಘಾತದಿಂದ ನಿಧನ
ಮೈಕ್ ಚಂದ್ರು ಖ್ಯಾತಿಯ N.ಚಂದ್ರಶೇಖರ್
TV9 Web
| Edited By: |

Updated on:Sep 12, 2021 | 9:55 AM

Share

ಮೈಸೂರು: ಮೈಕ್ ಚಂದ್ರು(Mike Chandru) ಎಂದೇ ಖ್ಯಾತರಾಗಿದ್ದ N.ಚಂದ್ರಶೇಖರ್(71) ಹೃದಯಾಘಾತದಿಂದ ಸೆಪ್ಟೆಂಬರ್ 12ರ ಭಾನುವಾರ ಜೆ.ಪಿ ನಗರದ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಮೈಕ್ ಚಂದ್ರು ತಮ್ಮ ವಿಭಿನ್ನ ಧ್ವನಿಯಿಂದ ಚಿರಪರಿಚಿತರಾಗಿದ್ದವರು. ದಸರಾ ವಸ್ತು ಪ್ರದರ್ಶನ, ಕುಸ್ತಿ ಅಖಾಡ, ನಾಟಕಗಳು, ಸರ್ಕಾರಿ ಕಾರ್ಯಕ್ರಮ, ಆಟೋ ಪ್ರಚಾರಗಳಲ್ಲಿ ಭಾಗಿಯಾಗಿ ತಮ್ಮ ವಾಕ್ಚಾತುರ್ಯದಿಂದ ಎಲ್ಲರ ಗಮನ ಸೆಳೆದಿದ್ರು.

ಮೈಕ್ ಚಂದ್ರು ಐದು ದಶಕಗಳಿಂದ ಜನಪ್ರಿಯ ಮೈಕ್ ಅನೌನ್ಸರ್ ಆಗಿದ್ದಾರೆ ಮತ್ತು ಲೆಕ್ಕವಿಲ್ಲದಷ್ಟು ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂಗೀತದ ಕಾರ್ಯಕ್ರಮಗಳು, ಆರ್ಕೆಸ್ಟ್ರಾ ಅಥವಾ ರಾಜಕೀಯ ರ್ಯಾಲಿಗಳು ಸೇರಿದಂತೆ ಅನೇಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಆಯೋಜಕರು ಇವರ ಧ್ವನಿಯನ್ನು ಹುಡುಕಿಕೊಂಡು ಬರುತ್ತಾರೆ. ಇವರು ಕನ್ನಡ, ಇಂಗ್ಲಿಷ್, ಹಿಂದಿ, ತಮಿಳು, ತೆಲುಗು ಮತ್ತು ಮಲಯಾಳಂನಂತಹ ಹಲವಾರು ಭಾಷೆಗಳಲ್ಲಿ ಪ್ರವೀಣರಾಗಿದ್ದರು.

ಟಿ ನರಸೀಪುರದವರಾದ ಚಂದ್ರು ರಂಗಭೂಮಿ ಕಲಾವಿದರಾಗಿ ತಮ್ಮ ಪ್ರಯಾಣವನ್ನು ಆರಂಭಿಸಿದರು ಮತ್ತು ಅಮರ ಕಲಾ ಸಂಘ, ಕಲಾಪ್ರಿಯ, ಸಮುದಾಯದಂತಹ ಹಲವಾರು ತಂಡಗಳೊಂದಿಗೆ ಕೆಲಸ ಮಾಡಿದರು. ಅವರು ತಮ್ಮ ಜನಪ್ರಿಯ ನಾಟಕ ‘ಲಂಚಾವತಾರ’ದಲ್ಲಿ ಪ್ರಸಿದ್ಧ ರಂಗಕರ್ಮಿ ದಿವಂಗತ ಹಿರಣ್ಣಯ್ಯನವರ ಜೊತೆಯೂ ನಟಿಸಿದ್ದರು. ಅವರು ಅನೌನ್ಸಿಂಗ್ ಕಲೆಯ ಕಡೆಗೆ ಆಕರ್ಷಿತರಾದರು, ಚಂದ್ರು ಬನುಮಯ್ಯ ಕಾಲೇಜಿನಲ್ಲಿ ತಮ್ಮ ಪದವಿ ಅಧ್ಯಯನವನ್ನು ಅರ್ಧಕ್ಕೆ ನಿಲ್ಲಿಸಿ ಫುಲ್ ಟೈಮ್ ಮೈಕ್ ಅನೌನ್ಸರ್ ಆದರು. ನಂತರ ಅವರಿಗೆ ಸರ್ಕಾರಿ ನೌಕರಿ ದೊರಕಿದರೂ, ಚಂದ್ರುರಿಗೆ ತಮ್ಮ ಕಲೆಯಲ್ಲಿದ್ದ ಆಸಕ್ತಿಯಿಂದ ಸರ್ಕಾರಿ ನೌಕರಿ ಆಫರ್ರನ್ನು ಅವರ ಸ್ವೀಕರಿಸಲಿಲ್ಲ.

ಇದನ್ನೂ ಓದಿ: Women Health: ಮಹಿಳೆಯರಲ್ಲಿ ಕ್ಯಾಲ್ಸಿಯಂ ಕೊರತೆ ಹೆಚ್ಚಾಗಲು ಕಾರಣ ಏನು? ಇದರ ಲಕ್ಷಣಗಳನ್ನು ಗುರುತಿಸುವುದು ಹೇಗೆ?

ಕಲಬುರಗಿ ಪಾಲಿಕೆ ಮೈತ್ರಿ ವಿಚಾರ; ನಾಳೆ ಅಂತಿಮ ನಿರ್ಧಾರ ಪ್ರಕಟ

Published On - 9:43 am, Sun, 12 September 21

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್