AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಕ್ ಚಂದ್ರು ಖ್ಯಾತಿಯ N.ಚಂದ್ರಶೇಖರ್ ಹೃದಯಾಘಾತದಿಂದ ನಿಧನ

ಮೈಕ್ ಚಂದ್ರು ತಮ್ಮ ವಿಭಿನ್ನ ಧ್ವನಿಯಿಂದ ಚಿರಪರಿಚಿತರಾಗಿದ್ದವರು. ದಸರಾ ವಸ್ತು ಪ್ರದರ್ಶನ, ಕುಸ್ತಿ ಅಖಾಡ, ನಾಟಕಗಳು, ಸರ್ಕಾರಿ ಕಾರ್ಯಕ್ರಮ, ಆಟೋ ಪ್ರಚಾರಗಳಲ್ಲಿ ಭಾಗಿಯಾಗಿ ತಮ್ಮ ವಾಕ್ಚಾತುರ್ಯದಿಂದ ಎಲ್ಲರ ಗಮನ ಸೆಳೆದಿದ್ರು.

ಮೈಕ್ ಚಂದ್ರು ಖ್ಯಾತಿಯ N.ಚಂದ್ರಶೇಖರ್ ಹೃದಯಾಘಾತದಿಂದ ನಿಧನ
ಮೈಕ್ ಚಂದ್ರು ಖ್ಯಾತಿಯ N.ಚಂದ್ರಶೇಖರ್
TV9 Web
| Updated By: ಆಯೇಷಾ ಬಾನು|

Updated on:Sep 12, 2021 | 9:55 AM

Share

ಮೈಸೂರು: ಮೈಕ್ ಚಂದ್ರು(Mike Chandru) ಎಂದೇ ಖ್ಯಾತರಾಗಿದ್ದ N.ಚಂದ್ರಶೇಖರ್(71) ಹೃದಯಾಘಾತದಿಂದ ಸೆಪ್ಟೆಂಬರ್ 12ರ ಭಾನುವಾರ ಜೆ.ಪಿ ನಗರದ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಮೈಕ್ ಚಂದ್ರು ತಮ್ಮ ವಿಭಿನ್ನ ಧ್ವನಿಯಿಂದ ಚಿರಪರಿಚಿತರಾಗಿದ್ದವರು. ದಸರಾ ವಸ್ತು ಪ್ರದರ್ಶನ, ಕುಸ್ತಿ ಅಖಾಡ, ನಾಟಕಗಳು, ಸರ್ಕಾರಿ ಕಾರ್ಯಕ್ರಮ, ಆಟೋ ಪ್ರಚಾರಗಳಲ್ಲಿ ಭಾಗಿಯಾಗಿ ತಮ್ಮ ವಾಕ್ಚಾತುರ್ಯದಿಂದ ಎಲ್ಲರ ಗಮನ ಸೆಳೆದಿದ್ರು.

ಮೈಕ್ ಚಂದ್ರು ಐದು ದಶಕಗಳಿಂದ ಜನಪ್ರಿಯ ಮೈಕ್ ಅನೌನ್ಸರ್ ಆಗಿದ್ದಾರೆ ಮತ್ತು ಲೆಕ್ಕವಿಲ್ಲದಷ್ಟು ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂಗೀತದ ಕಾರ್ಯಕ್ರಮಗಳು, ಆರ್ಕೆಸ್ಟ್ರಾ ಅಥವಾ ರಾಜಕೀಯ ರ್ಯಾಲಿಗಳು ಸೇರಿದಂತೆ ಅನೇಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಆಯೋಜಕರು ಇವರ ಧ್ವನಿಯನ್ನು ಹುಡುಕಿಕೊಂಡು ಬರುತ್ತಾರೆ. ಇವರು ಕನ್ನಡ, ಇಂಗ್ಲಿಷ್, ಹಿಂದಿ, ತಮಿಳು, ತೆಲುಗು ಮತ್ತು ಮಲಯಾಳಂನಂತಹ ಹಲವಾರು ಭಾಷೆಗಳಲ್ಲಿ ಪ್ರವೀಣರಾಗಿದ್ದರು.

ಟಿ ನರಸೀಪುರದವರಾದ ಚಂದ್ರು ರಂಗಭೂಮಿ ಕಲಾವಿದರಾಗಿ ತಮ್ಮ ಪ್ರಯಾಣವನ್ನು ಆರಂಭಿಸಿದರು ಮತ್ತು ಅಮರ ಕಲಾ ಸಂಘ, ಕಲಾಪ್ರಿಯ, ಸಮುದಾಯದಂತಹ ಹಲವಾರು ತಂಡಗಳೊಂದಿಗೆ ಕೆಲಸ ಮಾಡಿದರು. ಅವರು ತಮ್ಮ ಜನಪ್ರಿಯ ನಾಟಕ ‘ಲಂಚಾವತಾರ’ದಲ್ಲಿ ಪ್ರಸಿದ್ಧ ರಂಗಕರ್ಮಿ ದಿವಂಗತ ಹಿರಣ್ಣಯ್ಯನವರ ಜೊತೆಯೂ ನಟಿಸಿದ್ದರು. ಅವರು ಅನೌನ್ಸಿಂಗ್ ಕಲೆಯ ಕಡೆಗೆ ಆಕರ್ಷಿತರಾದರು, ಚಂದ್ರು ಬನುಮಯ್ಯ ಕಾಲೇಜಿನಲ್ಲಿ ತಮ್ಮ ಪದವಿ ಅಧ್ಯಯನವನ್ನು ಅರ್ಧಕ್ಕೆ ನಿಲ್ಲಿಸಿ ಫುಲ್ ಟೈಮ್ ಮೈಕ್ ಅನೌನ್ಸರ್ ಆದರು. ನಂತರ ಅವರಿಗೆ ಸರ್ಕಾರಿ ನೌಕರಿ ದೊರಕಿದರೂ, ಚಂದ್ರುರಿಗೆ ತಮ್ಮ ಕಲೆಯಲ್ಲಿದ್ದ ಆಸಕ್ತಿಯಿಂದ ಸರ್ಕಾರಿ ನೌಕರಿ ಆಫರ್ರನ್ನು ಅವರ ಸ್ವೀಕರಿಸಲಿಲ್ಲ.

ಇದನ್ನೂ ಓದಿ: Women Health: ಮಹಿಳೆಯರಲ್ಲಿ ಕ್ಯಾಲ್ಸಿಯಂ ಕೊರತೆ ಹೆಚ್ಚಾಗಲು ಕಾರಣ ಏನು? ಇದರ ಲಕ್ಷಣಗಳನ್ನು ಗುರುತಿಸುವುದು ಹೇಗೆ?

ಕಲಬುರಗಿ ಪಾಲಿಕೆ ಮೈತ್ರಿ ವಿಚಾರ; ನಾಳೆ ಅಂತಿಮ ನಿರ್ಧಾರ ಪ್ರಕಟ

Published On - 9:43 am, Sun, 12 September 21

ಪೂಜೆ ಮಾಡಿದರೆ ಇಷ್ಟಾರ್ಥಗಳು ನೆರವೇರುತ್ತವೆ ಎನ್ನುವ ಗೃಹಿಣಿಯರು
ಪೂಜೆ ಮಾಡಿದರೆ ಇಷ್ಟಾರ್ಥಗಳು ನೆರವೇರುತ್ತವೆ ಎನ್ನುವ ಗೃಹಿಣಿಯರು
‘ನಮ್ಮ ಮನೆ ಹತ್ತಿರವೇ ಅಟ್ಯಾಕ್ ಆಗಿದೆ’: ಪೊಲೀಸ್ ಎದುರು ಪ್ರಥಮ್ ಅಳಲು
‘ನಮ್ಮ ಮನೆ ಹತ್ತಿರವೇ ಅಟ್ಯಾಕ್ ಆಗಿದೆ’: ಪೊಲೀಸ್ ಎದುರು ಪ್ರಥಮ್ ಅಳಲು
ಹುಲಿರಾಯನ ಫೋಸ್​ ಕಂಡು ಹೌದು ಹುಲಿಯಾ ಎಂದ ಪ್ರವಾಸಿಗರು
ಹುಲಿರಾಯನ ಫೋಸ್​ ಕಂಡು ಹೌದು ಹುಲಿಯಾ ಎಂದ ಪ್ರವಾಸಿಗರು
PM Modi Speech Live: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಭಾಷಣದ ನೇರಪ್ರಸಾರ
PM Modi Speech Live: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಭಾಷಣದ ನೇರಪ್ರಸಾರ
ದರ್ಶನ್ ವಿಗ್ ಧರಿಸುತ್ತಾರೆ, ಅದನ್ನು ಹೇಗೆ ಕಿತ್ತುಕೊಳ್ಳಲಾದೀತು? ಪ್ರಥಮ್
ದರ್ಶನ್ ವಿಗ್ ಧರಿಸುತ್ತಾರೆ, ಅದನ್ನು ಹೇಗೆ ಕಿತ್ತುಕೊಳ್ಳಲಾದೀತು? ಪ್ರಥಮ್
ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮೇಘಸ್ಫೋಟ; ದಿಢೀರ್ ಪ್ರವಾಹದಿಂದ ಮೂವರು ಸಾವು
ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮೇಘಸ್ಫೋಟ; ದಿಢೀರ್ ಪ್ರವಾಹದಿಂದ ಮೂವರು ಸಾವು
ಪಹಲ್ಗಾಮ್ ದಾಳಿಗೆ ಭದ್ರತಾ ಲೋಪವೇ ಕಾರಣ: ಖರ್ಗೆ
ಪಹಲ್ಗಾಮ್ ದಾಳಿಗೆ ಭದ್ರತಾ ಲೋಪವೇ ಕಾರಣ: ಖರ್ಗೆ
ಕಾಂಗ್ರೆಸ್​ನ ದಲಿತ ವಿರೋಧಿ ನೀತಿಯಿಂದ ಖರ್ಗೆ ಸಿಎಂ ಆಗಲಿಲ್ಲ: ಜ್ಞಾನೇಂದ್ರ
ಕಾಂಗ್ರೆಸ್​ನ ದಲಿತ ವಿರೋಧಿ ನೀತಿಯಿಂದ ಖರ್ಗೆ ಸಿಎಂ ಆಗಲಿಲ್ಲ: ಜ್ಞಾನೇಂದ್ರ
ಅವಮಾನಗಳ ಹೊರತಾಗಿಯೂ ಸಿಎಂ ವಿರುದ್ಧ ಮಾತಾಡದ ಶಿವಕುಮಾರ್
ಅವಮಾನಗಳ ಹೊರತಾಗಿಯೂ ಸಿಎಂ ವಿರುದ್ಧ ಮಾತಾಡದ ಶಿವಕುಮಾರ್
ಖರ್ಗೆಯವರ ಪೂರ್ತಿ ಹೇಳಿಕೆ ಕೇಳಿಸಿಕೊಂಡರೆ ವಿಷಯ ಅರ್ಥವಾಗುತ್ತದೆ: ಪ್ರಿಯಾಂಕ್
ಖರ್ಗೆಯವರ ಪೂರ್ತಿ ಹೇಳಿಕೆ ಕೇಳಿಸಿಕೊಂಡರೆ ವಿಷಯ ಅರ್ಥವಾಗುತ್ತದೆ: ಪ್ರಿಯಾಂಕ್