AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಕ್ ಚಂದ್ರು ಖ್ಯಾತಿಯ N.ಚಂದ್ರಶೇಖರ್ ಹೃದಯಾಘಾತದಿಂದ ನಿಧನ

ಮೈಕ್ ಚಂದ್ರು ತಮ್ಮ ವಿಭಿನ್ನ ಧ್ವನಿಯಿಂದ ಚಿರಪರಿಚಿತರಾಗಿದ್ದವರು. ದಸರಾ ವಸ್ತು ಪ್ರದರ್ಶನ, ಕುಸ್ತಿ ಅಖಾಡ, ನಾಟಕಗಳು, ಸರ್ಕಾರಿ ಕಾರ್ಯಕ್ರಮ, ಆಟೋ ಪ್ರಚಾರಗಳಲ್ಲಿ ಭಾಗಿಯಾಗಿ ತಮ್ಮ ವಾಕ್ಚಾತುರ್ಯದಿಂದ ಎಲ್ಲರ ಗಮನ ಸೆಳೆದಿದ್ರು.

ಮೈಕ್ ಚಂದ್ರು ಖ್ಯಾತಿಯ N.ಚಂದ್ರಶೇಖರ್ ಹೃದಯಾಘಾತದಿಂದ ನಿಧನ
ಮೈಕ್ ಚಂದ್ರು ಖ್ಯಾತಿಯ N.ಚಂದ್ರಶೇಖರ್
TV9 Web
| Edited By: |

Updated on:Sep 12, 2021 | 9:55 AM

Share

ಮೈಸೂರು: ಮೈಕ್ ಚಂದ್ರು(Mike Chandru) ಎಂದೇ ಖ್ಯಾತರಾಗಿದ್ದ N.ಚಂದ್ರಶೇಖರ್(71) ಹೃದಯಾಘಾತದಿಂದ ಸೆಪ್ಟೆಂಬರ್ 12ರ ಭಾನುವಾರ ಜೆ.ಪಿ ನಗರದ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಮೈಕ್ ಚಂದ್ರು ತಮ್ಮ ವಿಭಿನ್ನ ಧ್ವನಿಯಿಂದ ಚಿರಪರಿಚಿತರಾಗಿದ್ದವರು. ದಸರಾ ವಸ್ತು ಪ್ರದರ್ಶನ, ಕುಸ್ತಿ ಅಖಾಡ, ನಾಟಕಗಳು, ಸರ್ಕಾರಿ ಕಾರ್ಯಕ್ರಮ, ಆಟೋ ಪ್ರಚಾರಗಳಲ್ಲಿ ಭಾಗಿಯಾಗಿ ತಮ್ಮ ವಾಕ್ಚಾತುರ್ಯದಿಂದ ಎಲ್ಲರ ಗಮನ ಸೆಳೆದಿದ್ರು.

ಮೈಕ್ ಚಂದ್ರು ಐದು ದಶಕಗಳಿಂದ ಜನಪ್ರಿಯ ಮೈಕ್ ಅನೌನ್ಸರ್ ಆಗಿದ್ದಾರೆ ಮತ್ತು ಲೆಕ್ಕವಿಲ್ಲದಷ್ಟು ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂಗೀತದ ಕಾರ್ಯಕ್ರಮಗಳು, ಆರ್ಕೆಸ್ಟ್ರಾ ಅಥವಾ ರಾಜಕೀಯ ರ್ಯಾಲಿಗಳು ಸೇರಿದಂತೆ ಅನೇಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಆಯೋಜಕರು ಇವರ ಧ್ವನಿಯನ್ನು ಹುಡುಕಿಕೊಂಡು ಬರುತ್ತಾರೆ. ಇವರು ಕನ್ನಡ, ಇಂಗ್ಲಿಷ್, ಹಿಂದಿ, ತಮಿಳು, ತೆಲುಗು ಮತ್ತು ಮಲಯಾಳಂನಂತಹ ಹಲವಾರು ಭಾಷೆಗಳಲ್ಲಿ ಪ್ರವೀಣರಾಗಿದ್ದರು.

ಟಿ ನರಸೀಪುರದವರಾದ ಚಂದ್ರು ರಂಗಭೂಮಿ ಕಲಾವಿದರಾಗಿ ತಮ್ಮ ಪ್ರಯಾಣವನ್ನು ಆರಂಭಿಸಿದರು ಮತ್ತು ಅಮರ ಕಲಾ ಸಂಘ, ಕಲಾಪ್ರಿಯ, ಸಮುದಾಯದಂತಹ ಹಲವಾರು ತಂಡಗಳೊಂದಿಗೆ ಕೆಲಸ ಮಾಡಿದರು. ಅವರು ತಮ್ಮ ಜನಪ್ರಿಯ ನಾಟಕ ‘ಲಂಚಾವತಾರ’ದಲ್ಲಿ ಪ್ರಸಿದ್ಧ ರಂಗಕರ್ಮಿ ದಿವಂಗತ ಹಿರಣ್ಣಯ್ಯನವರ ಜೊತೆಯೂ ನಟಿಸಿದ್ದರು. ಅವರು ಅನೌನ್ಸಿಂಗ್ ಕಲೆಯ ಕಡೆಗೆ ಆಕರ್ಷಿತರಾದರು, ಚಂದ್ರು ಬನುಮಯ್ಯ ಕಾಲೇಜಿನಲ್ಲಿ ತಮ್ಮ ಪದವಿ ಅಧ್ಯಯನವನ್ನು ಅರ್ಧಕ್ಕೆ ನಿಲ್ಲಿಸಿ ಫುಲ್ ಟೈಮ್ ಮೈಕ್ ಅನೌನ್ಸರ್ ಆದರು. ನಂತರ ಅವರಿಗೆ ಸರ್ಕಾರಿ ನೌಕರಿ ದೊರಕಿದರೂ, ಚಂದ್ರುರಿಗೆ ತಮ್ಮ ಕಲೆಯಲ್ಲಿದ್ದ ಆಸಕ್ತಿಯಿಂದ ಸರ್ಕಾರಿ ನೌಕರಿ ಆಫರ್ರನ್ನು ಅವರ ಸ್ವೀಕರಿಸಲಿಲ್ಲ.

ಇದನ್ನೂ ಓದಿ: Women Health: ಮಹಿಳೆಯರಲ್ಲಿ ಕ್ಯಾಲ್ಸಿಯಂ ಕೊರತೆ ಹೆಚ್ಚಾಗಲು ಕಾರಣ ಏನು? ಇದರ ಲಕ್ಷಣಗಳನ್ನು ಗುರುತಿಸುವುದು ಹೇಗೆ?

ಕಲಬುರಗಿ ಪಾಲಿಕೆ ಮೈತ್ರಿ ವಿಚಾರ; ನಾಳೆ ಅಂತಿಮ ನಿರ್ಧಾರ ಪ್ರಕಟ

Published On - 9:43 am, Sun, 12 September 21

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು