AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಅಧಿಕಾರಿಗಳು ಹೊಲಗಳಿಗೆ ಹೋಗಿ ಬೆಳೆ ಹಾನಿ ಪರಿಶೀಲಿಸಲು ಸಚಿವ ಬಿಸಿ ಪಾಟೀಲ್ ಸೂಚನೆ

ಮಾಹಿತಿ ಸಂಗ್ರಹದ ನಂತರ ಸೂಕ್ತ ಪರಿಹಾರ ನೀಡಲಾಗುತ್ತದೆ. ರೈತರು ಯಾವುದೇ ಆತಂಕ ಪಡಬಾರದು. ರಾಜ್ಯ ಸರ್ಕಾರ ಬೆಳೆ ಹಾನಿ ಪರಿಹಾರಕ್ಕೆ ಕ್ರಮಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.

ಕೃಷಿ ಅಧಿಕಾರಿಗಳು ಹೊಲಗಳಿಗೆ ಹೋಗಿ ಬೆಳೆ ಹಾನಿ ಪರಿಶೀಲಿಸಲು ಸಚಿವ ಬಿಸಿ ಪಾಟೀಲ್ ಸೂಚನೆ
ಸಚಿವ ಬಿಸಿ ಪಾಟೀಲ್
TV9 Web
| Edited By: |

Updated on:May 19, 2022 | 10:58 AM

Share

ಮೈಸೂರು: ರಾಜ್ಯಾದ್ಯಂತ ನಿರಂತರ ಮಳೆಯಿಂದ (Heavy Rain) ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಈ ಹಿನ್ನೆಲೆ ಕೃಷಿ ಅಧಿಕಾರಿಗಳು ಹೊಲಗಳಿಗೆ ಹೋಗಿ ಪರಿಶೀಲಿಸಬೇಕು ಅಂತ ಮೈಸೂರಿನಲ್ಲಿ ಟಿವಿ9 ಮೂಲಕ ಕೃಷಿ ಸಚಿವ ಬಿಸಿ ಪಾಟೀಲ್ ಸೂಚನೆ (BC Nagesh) ನೀಡಿದ್ದಾರೆ. ಕೃಷಿ ಅಧಿಕಾರಿಗಳು ಜಮೀನಿಗೆ ತೆರಳದಿದ್ದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಮಳೆ ಹಾನಿ ಬಗ್ಗೆ ಅಧಿಕಾರಿಗಳು ಮಾಹಿತಿ ಸಂಗ್ರಹಿಸಬೇಕು. ಮಾಹಿತಿ ಸಂಗ್ರಹದ ನಂತರ ಸೂಕ್ತ ಪರಿಹಾರ ನೀಡಲಾಗುತ್ತದೆ. ರೈತರು ಯಾವುದೇ ಆತಂಕ ಪಡಬಾರದು. ರಾಜ್ಯ ಸರ್ಕಾರ ಬೆಳೆ ಹಾನಿ ಪರಿಹಾರಕ್ಕೆ ಕ್ರಮಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.

ಮುಂದುವರಿದು ಮಾತನಾಡಿದ ಸಚಿವರು, ರಾಜ್ಯದಲ್ಲಿ ರಸಗೊಬ್ಬರ ಕೊರತೆ ಇಲ್ಲ. ಕೃತಕ ಅಭಾವ ಸೃಷ್ಟಿಸಿದರೆ ಅಂಥವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ. ಸಬ್ಸಿಡಿ ದರದಲ್ಲಿ ರಸಗೊಬ್ಬರವನ್ನು ಮಾರಾಟ ಮಾಡುತ್ತಿದ್ದೇವೆ. ಕಾಳ ಸಂತೆಕೋರರ ಪತ್ತೆಗೆ ನಾವು ತಂಡವನ್ನು ರಚಿಸಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: ಬಿಜೆಪಿ ಮುಖಂಡ ಅನಂತರಾಜು ಆತ್ಮಹತ್ಯೆ ಪ್ರಕರಣಕ್ಕೆ ತಿರುವು: ಪತಿ ಸಾವಿನ ಬಗ್ಗೆ ಮತ್ತೊಬ್ಬ ಮಹಿಳೆಯ ಜೊತೆ ಹೆಂಡತಿ ಮಾತುಕತೆ ವೈರಲ್

ಇದನ್ನೂ ಓದಿ
Image
How To Store Pulses: ಹುಳುಗಳಿಂದ ಬೇಳೆಕಾಳುಗಳನ್ನು ರಕ್ಷಣೆ ಮಾಡಿಕೊಳ್ಳುವುದು ಹೇಗೆ?
Image
ಕೃಷಿ ಅಧಿಕಾರಿಗಳು ಹೊಲಗಳಿಗೆ ಹೋಗಿ ಬೆಳೆ ಹಾನಿ ಪರಿಶೀಲಿಸಲು ಸಚಿವ ಬಿಸಿ ಪಾಟೀಲ್ ಸೂಚನೆ
Image
Viral Video: ರೈಲು ನಿಲ್ದಾಣಕ್ಕೆ ಅನಿರೀಕ್ಷಿತವಾಗಿ ಭೇಟಿ ನೀಡಿದ ಲಂಡನ್ ರಾಣಿ ಎಲಿಜಬೆತ್; ಯಾಕೆ ಗೊತ್ತಾ?
Image
Crime News: ಸ್ನೇಹಿತರ ಜೊತೆ ಈಜಲು ತೆರಳಿದ್ದ ಬಾಲಕ ಕೆರೆಯಲ್ಲಿ ಮುಳುಗಿ ಸಾವು

ಸಿದ್ದರಾಮಯ್ಯ ಹೇಳಿಕೆಗೆ ಮೈಸೂರಿನಲಿ ಬಿಸಿ ಪಾಟೀಲ್ ವ್ಯಂಗ್ಯ: ತಾನು ಸಿಎಂ ಆದರೆ ದಲಿತರ ಸಾಲ ಮಾಡುತ್ತೇನೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಬಿ ಸಿ ಪಾಟೀಲ್ ವ್ಯಂಗ್ಯವಾಡಿದ್ದಾರೆ. ಸಿದ್ದರಾಮಯ್ಯ ಸಿಎಂ ಆದರೆ ತಾನೇ ಅವರು ಕೊಡುವ ಭರವಸೆ ಈಡೇರುವುದು? ಕಾಂಗ್ರೆಸ್​ನಲ್ಲಿ ಕೂಸು ಹುಟ್ಟುವ ಮುಂಚೆ ಕುಲವಿ ಹೊಲಿಸಲಾಗುತ್ತಿದೆ. ಬಿಜೆಪಿ ಮುಂದಿನ ಭಾರಿಯೂ ಅಧಿಕಾರಕ್ಕೆ ಬರುವುದು ನಿಶ್ಚಿತ. ಸಿದ್ದರಾಮಯ್ಯಗೆ ಬಿಜೆಪಿ ಬಗ್ಗೆ ಹೇಳಲು ಏನು ಇಲ್ಲ. ನಮ್ಮ ಸರ್ಕಾರದಿಂದ ಸಿದ್ದರಾಮಯ್ಯಗೆ ಪ್ರಯೋಜನ ಆಗುತ್ತಿಲ್ಲ. ಜನರಿಗೆ ಪ್ರಯೋಜನ ಆಗುತ್ತಿದೆ ಎಂದರು.

ಜಿ ಟಿ ದೇವೇಗೌಡರ ಮನೆಗೆ ಬಿ ಸಿ ಪಾಟೀಲ್ ಭೇಟಿ: ಶಾಸಕ ಜಿ ಟಿ ದೇವೇಗೌಡರ ಮೊಮ್ಮಗಳು ಮೃತಪಟ್ಟಿರುವ ಹಿನ್ನೆಲೆ ದೇವೇಗೌಡರ ನಿವಾಸಕ್ಕೆ ಕೃಷಿ ಸಚಿವ ಬಿ ಸಿ ಪಾಟೀಲ್ ಭೇಟಿ ನೀಡಿದರು. ಈ ವೇಳೆ ದೇವೇಗೌಡರಿಗೆ ಸಾಂತ್ವಾನ ಹೇಳಿದರು.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:45 am, Thu, 19 May 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!