AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಸುತ್ತೂರು ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದ ಸಚಿವ ದಿನೇಶ್ ಗುಂಡೂರಾವ್; ಇಲ್ಲಿದೆ ಕಾರ್ಯಕ್ರಮಗಳ ವಿವರ

ಮೈಸೂರು ಜಿಲ್ಲೆಯ ನಂಜನಗೂಡು(Nanjangud) ತಾಲ್ಲೂಕಿನ ಸುತ್ತೂರು ಗ್ರಾಮದಲ್ಲಿ ಫೆಬ್ರವರಿ 6 ರಿಂದ ಫೆ.11 ರವರೆಗೆ 6 ದಿನಗಳ ಕಾಲ ಸುತ್ತೂರು ಜಾತ್ರಾ ಮಹೋತ್ಸವಕ್ಕೆ ಇಂದು(ಫೆ.06) ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು. ಇನ್ನು ಈ ಬಾರಿ ಜಾತ್ರೆಯ ಆರು ದಿನಗಳು ಕೂಡ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜೊತೆಗೆ ಬರುವಂತಹ ಭಕ್ತರಿಗಾಗಿ 4 ಲಕ್ಷಕ್ಕೂ ಹೆಚ್ಚು ಲಡ್ಡು ತಯಾರಿಸಲಾಗಿದೆ.

ಮೈಸೂರು: ಸುತ್ತೂರು ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದ ಸಚಿವ ದಿನೇಶ್ ಗುಂಡೂರಾವ್; ಇಲ್ಲಿದೆ ಕಾರ್ಯಕ್ರಮಗಳ ವಿವರ
ಸುತ್ತೂರು ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದ ದಿನೇಶ್​ ಗುಂಡೂರಾವ್
ದಿಲೀಪ್​, ಚೌಡಹಳ್ಳಿ
| Edited By: |

Updated on:Feb 06, 2024 | 6:41 PM

Share

ಮೈಸೂರು, ಫೆ.06: ಇಂದಿನಿಂದ 6 ದಿನಗಳ ಕಾಲ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮಿಜಿ ನೇತೃತ್ವದಲ್ಲಿ ನಡೆಯುವ ಇತಿಹಾಸ ಪ್ರಸಿದ್ದ ಸುತ್ತೂರು ಜಾತ್ರಾ ಮಹೋತ್ಸವಕ್ಕೆ(Suttur Jatra Mahotsav) ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು. ಮೈಸೂರು ಜಿಲ್ಲೆಯ ನಂಜನಗೂಡು(Nanjangud) ತಾಲ್ಲೂಕಿನ ಸುತ್ತೂರು ಗ್ರಾಮದಲ್ಲಿ ಫೆಬ್ರವರಿ 6 ರಿಂದ ಫೆ.11 ರವರೆಗೆ 6 ದಿನಗಳ ಕಾಲ ನಡೆಯುವ ಈ ಜಾತ್ರೆಯಲ್ಲಿ ಪ್ರತಿದಿನವೂ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸಾಮೂಹಿಕ ವಿವಾಹ, ರಥೋತ್ಸವ, ಗ್ರಾಮೀಣ ಕ್ರೀಡೆಗಳು, ಕೃಷಿ ಮೇಳ, ಲಕ್ಷ ದೀಪೋತ್ಸವ ಹಾಗೂ ತೆಪ್ಪೋತ್ಸವ ಸೇರಿ ಹಲವು ಕಾರ್ಯಕ್ರಮಗಳು ನಡೆಯಲಿದೆ.

ಜಾತ್ರೆಗೆ ಅಂದಾಜು 25 ಲಕ್ಷ ಜನರು ಬರುವ ನಿರೀಕ್ಷೆ; ಬರುವಂತ ಭಕ್ತರಿಗೆ ಪ್ರಸಾದದ ವ್ಯವಸ್ಥೆ

ಇದೇ ವೇಳೆ ಸಚಿವರು, ‘ಜಾತ್ರಾ ಮಹೋತ್ಸವದ ವಸ್ತುಪ್ರದರ್ಶ‌ನ, ಕೃಷಿಮೇಳ, ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿದರು. ಇನ್ನು ಶಿವರಾತ್ರಿ ದೇಶಿಕೇಂದ್ರ ಸ್ವಾಮಿಜಿ ನೇತೃತ್ವದಲ್ಲಿ ನಡೆಯುತ್ತಿರುವ ಈ ಜಾತ್ರೆಗೆ ಸುಮಾರು 25 ಲಕ್ಷ ಜನರು ಬರುವ ನಿರೀಕ್ಷೆಯಿದೆ. ಜೊತೆಗೆ ಬರುವಂತ ಭಕ್ತರಿಗೂ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ:ಮಾರ್ಚ್ 19 ರಿಂದ ಶಿರಸಿ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವ

4 ಲಕ್ಷಕ್ಕೂ ಹೆಚ್ಚು ಲಡ್ಡು, 40 ಸಾವಿರ ಮೈಸೂರ್ ಪಾಕ್ ತಯಾರಿ

ಇಂದಿನಿಂದ ಆರಂಭಗೊಂಡ ಜಾತ್ರೆಗೆ ಬರುವಂತಹ ಭಕ್ತರಿಗೆ ಸಿಹಿಯನ್ನ ವಿತರಿಸಲು ಸುತ್ತೂರು ಮಠ ಆಯೋಜನೆ ಮಾಡಿಕೊಂಡಿದ್ದು, ಅಂದಾಜು 200 ಕ್ಕೂ ಹೆಚ್ಚು ಬಾಣಸಿಗರು ಸೇರಿ ಸುಮಾರು 150 ರಿಂದ 200 ಕ್ವಿಂಟಾಲ್ ಕಡಲೆ ಬೇಳೆಗಳನ್ನು ಬಳಸಿ 4 ಲಕ್ಷಕ್ಕೂ ಹೆಚ್ಚು ಲಡ್ಡು,  40 ಸಾವಿರ ಮೈಸೂರ್ ಪಾಕ್,  30 ಸಾವಿರ ಬಾದುಷಾ, ಕಡ್ಡಿಕಾರ ಹಾಗೂ ಬುಂದಿಕಾರಗಳನ್ನು ತಯಾರು ಮಾಡಲಾಗಿದೆ. ಇದನ್ನು ಜಾತ್ರೆಗೆ ಬರುವಂತಹ ಭಕ್ತಾದಿಗಳಿಗೆ ಪ್ರಸಾದದ ಜೊತೆಗೆ ವಿತರಣೆ ಮಾಡಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:32 pm, Tue, 6 February 24

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು