AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಜಾಬ್ ಧರಿಸಿ ಅಧಿವೇಶನಕ್ಕೆ ಬರುವ ಮೊದಲು ದಮ್ ಇದ್ದರೆ ಮಸೀದಿಗೆ ಮುಸ್ಲಿಂ ಮಹಿಳೆಗೆ ಪ್ರವೇಶ ಕೊಡಿಸಿ: ಸಚಿವ ಈಶ್ವರಪ್ಪ ಸವಾಲ್​

Hijab controversy: ಹಿಜಾಬ್ ಹಾಕಿಕೊಂಡು ಅಧಿವೇಶನಕ್ಕೆ ಬರುವುದಲ್ಲ. ನೀವು ಮೊದಲು ಮಸೀದಿಗೆ ಹೋಗಿ, ದಮ್ ಇದ್ದರೆ ಮಸೀದಿಗೆ ಮುಸ್ಲಿಂ ಮಹಿಳೆಯರಿಗೆ ಪ್ರವೇಶ ಕೊಡಿಸಿ ಎಂದು ಸಚಿವ ಕೆ ಎಸ್ ಈಶ್ವರಪ್ಪ ಶಾಸಕಿ ಖನೀಜ್ ಫಾತೀಮಾಗೆ ಸವಾಲು ಹಾಕಿದ್ದಾರೆ.

ಹಿಜಾಬ್ ಧರಿಸಿ ಅಧಿವೇಶನಕ್ಕೆ ಬರುವ ಮೊದಲು ದಮ್ ಇದ್ದರೆ ಮಸೀದಿಗೆ ಮುಸ್ಲಿಂ ಮಹಿಳೆಗೆ ಪ್ರವೇಶ ಕೊಡಿಸಿ: ಸಚಿವ ಈಶ್ವರಪ್ಪ ಸವಾಲ್​
ಸಚಿವ ಕೆ.ಎಸ್.ಈಶ್ವರಪ್ಪ
TV9 Web
| Updated By: ಸಾಧು ಶ್ರೀನಾಥ್​|

Updated on:Feb 08, 2022 | 8:50 AM

Share

ಮೈಸೂರು: ಹಿಜಾಬ್ ಧರಿಸಿಯೇ (hijab controversy) ಅಸೆಂಬ್ಲಿ ಅಧಿವೇಶನಕ್ಕೆ ಬರುವೆ, ಯಾರಿಗಾದರೂ ಧೈರ್ಯವಿದ್ರೆ ತಡೆಯಲಿ ಎಂದು ಕಲಬುರಗಿ ಶಾಸಕಿ ಖನೀಜ್ ಫಾತೀಮಾ (kaneez fatima) ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಚಿವ ಕೆ ಎಸ್ ಈಶ್ವರಪ್ಪ ಹಿಜಾಬ್ ಹಾಕಿಕೊಂಡು ಅಧಿವೇಶನಕ್ಕೆ ಬರುವುದಲ್ಲ. ನೀವು ಮೊದಲು ಮಸೀದಿಗೆ ಹೋಗಿ, ದಮ್ ಇದ್ದರೆ ಮಸೀದಿಗೆ ಮುಸ್ಲಿಂ ಮಹಿಳೆಯರಿಗೆ ಪ್ರವೇಶ ಕೊಡಿಸಿ ಶಾಸಕಿಗೆ ಸವಾಲು ಹಾಕಿದ್ದಾರೆ. ನಾವು ಶಾಲೆಗೆ ಮಾತ್ರ ಹಿಜಾಬ್ ನಿಷೇಧಿಸಿದ್ದೇವೆ. ಹೊರಗಡೆಗೆ ನಿಷೇಧ ಮಾಡಿಲ್ಲ. ಎಲ್ಲಾ ಕಡೆ ಅದನ್ನು ಹಾಕಿಕೊಂಡು ಹೋಗಬಹುದು ಎಂದು ಸಚಿವ ಈಶ್ವರಪ್ಪ ಹೇಳಿದ್ದಾರೆ. ಹಿಜಾಬ್ ವಿಚಾರದಲ್ಲಿ ಎಂ.ಎಲ್.ಸಿ. ಸಿಎಂ‌ ಇಬ್ರಾಹಿಂ ಹೇಳಿಕೆ ವಿಚಾರವನ್ನೂ ಪ್ರಸ್ತಾಪಿಸಿದ ಸಚಿವ ಕೆ ಎಸ್ ಈಶ್ವರಪ್ಪ ಇದು ವಿಕೃತಿಯಿಂದ ಕೂಡಿದ ಹೇಳಿಕೆ. ಇದು ಮುಸ್ಲಿಂ ಮಹಿಳೆಯರಿಗೆ ಮಾಡಿದ ಅವಮಾನ. ಅವರ ಮುಖ‌ ನೋಡಲು ಹಿಜಾಬ್ ತೆಗೆಯಬೇಕಾ? ಇಬ್ರಾಹಿಂ ಅವರ ಈ ಹೇಳಿಕೆ ಯಾರೂ ಒಪ್ಪುವಂತಹದ್ದಲ್ಲ ಎಂದು ಮೈಸೂರಿನಲ್ಲಿ ಈಶ್ವರಪ್ಪ (ks eshwarappa) ಪ್ರತಿಕ್ರಿಯಿಸಿದ್ದಾರೆ.

ಉಡುಪಿಯಿಂದಲೇ ಕಾಂಗ್ರೆಸ್ ಸರ್ವನಾಶದ ಆರಂಭವಾಗಿದೆ: ರಾಜ್ಯದಲ್ಲಿ ಹಿಜಾಬ್ ವಿವಾದ/ವಿಚಾರದಿಂದಲೇ ಕಾಂಗ್ರೆಸ್ ಸರ್ವನಾಶವಾಗುವುದು ಖಚಿತ. ಉಡುಪಿಯಿಂದಲೇ ಕಾಂಗ್ರೆಸ್ ಸರ್ವನಾಶದ ಆರಂಭವಾಗಿದೆ. ಈ ಹಿಂದೆ ಗೋ ಹತ್ಯೆ ನಿಷೇಧವನ್ನು ಉಡುಪಿಯಲ್ಲೇ ಮಾಡಿದ್ದರು. ಆಗ ಸಿದ್ದರಾಮಯ್ಯ ಸಿಎಂ ಅಧಿಕಾರ ಕಳೆದುಕೊಂಡರು. ಚಾಮುಂಡೇಶ್ವರಿಯಲ್ಲೂ ಸೋತರು. ಈಗ ಅಲ್ಲಿಂದಲೇ ಹಿಜಾಬ್ ವಿವಾದವಾಗಿದೆ. ಹಿಜಾಬ್ ವಿವಾದದ ಹಿಂದೆ ಸಂಪೂರ್ಣವಾಗಿ ಕಾಂಗ್ರೆಸ್ ಪಕ್ಷ ಇದೆ. ವೋಟ್ ಬ್ಯಾಂಕ್‌ಗಾಗಿ ಕಾಂಗ್ರೆಸ್ ಮುಖಂಡರಿಂದ ಈ ಕೆಲಸ ನಡೆದಿದೆ. ಕಾಂಗ್ರೆಸ್ ಮುಖಂಡರು ಮನಸು ಮಾಡಿದ್ದರೆ ಸಮಸ್ಯೆ ಬಗರಹರಿಸಬಹುದಿತ್ತು. ಆ ಆರೂ ವಿದ್ಯಾರ್ಥಿನಿಯರಿಗೆ ತಿಳಿವಳಿಕೆ ನೀಡಬಹುದಿತ್ತು. ಆದರೆ ಕಾಂಗ್ರೆಸ್‌ಗೆ ಮುಸ್ಲಿಂ ಮತಗಳೇ ಮುಖ್ಯವಾದವು. ಕಾಂಗ್ರೆಸ್ ಎಂದಿನಂತೆ ಒಡೆದು ಆಳುವ ನೀತಿ ಅನುಸರಿಸುತ್ತಿದೆ. ಹಿಂದೆ ವೀರಶೈವ ಲಿಂಗಾಯತ ಧರ್ಮ್, ನಂತರ ಮತಾಂತರದ ವಿಷಯ, ಗೋಹತ್ಯೆ. ಇದೀಗ ಹಿಜಾಬ್ ಅವರ ರಾಜಕೀಯ ವಿಚಾರವಾಗಿದೆ. ಹಿಂದೂ ಮುಸ್ಲಿಂ ಒಡೆದಿದ್ದು ಕಾಂಗ್ರೆಸ್, ಆದರೆ ಅದರ ಅಪವಾದ ನಮ್ಮ ಮೇಲೆ ಎಂದು ಮೈಸೂರಿನಲ್ಲಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ.

ಸಿಎಂ ಆಗಿದ್ದ ಸಿದ್ದರಾಮಯ್ಯಗೆ ನ್ಯಾಯಾಲಯದ ಆದೇಶ ಗೊತ್ತಿಲ್ಲವಾ? ರಾಜ್ಯದಲ್ಲಿ ಹಿಜಾಬ್ ವಿವಾದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದವೂ ಸಚಿವ ಕೆ ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ತಾನು ಎರಡನೇ ಅಂಬೇಡ್ಕರ್ ಅಂತಾ ಹೇಳಿಕೊಳ್ಳುತ್ತಾರೆ. ಅವರಿಗೆ ಸಂವಿಧಾನ, ಕಾನೂನು ಗೊತ್ತಿಲ್ಲವಾ? ಸಿಎಂ ಆಗಿದ್ದವರಿಗೆ ನ್ಯಾಯಾಲಯದ ಆದೇಶ ಕಾನೂನು ಗೊತ್ತಿಲ್ಲವಾ? ಕೇರಳದ ಹೈಕೋರ್ಟ್ ಏನು ಹೇಳಿದೆ ಎಂಬುದನ್ನು ಸಿದ್ದರಾಮಯ್ಯ ಓದಿ ಕೊಳ್ಳಲಿ. ಸರ್ಕಾರದ ಆದೇಶ ಮಾಡಿದೆ, ಈ ಬಗ್ಗೆ ಕಾಂಗ್ರೆಸ್ ನಿಲುವ ಸ್ಪಷ್ಟನೆ ಮಾಡಲಿ. ಕಾನೂನು ಪಾಲನೆ ಮಾಡಬೇಕೋ ಬೇಡವೋ ಸಿದ್ದರಾಮಯ್ಯ ಸ್ಪಷ್ಟಪಡಿಸಲಿ ಎಂದು ಮೈಸೂರಿನಲ್ಲಿ ಸಚಿವ ಕೆ ಎಸ್ ಈಶ್ವರಪ್ಪ ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಅಧಿಕಾರಕ್ಕೆ ಬಂದರೆ ದೇವಭೂಮಿಯಲ್ಲಿ ಮುಸ್ಲಿಂ ವಿಶ್ವವಿದ್ಯಾಲಯ ಸ್ಥಾಪಿಸುವುದು ನಿಶ್ಚಿತ ಎಂದ ಕಾಂಗ್ರೆಸ್, ಏನಿದರ ಹಕೀಕತ್ತು?

ಇದನ್ನೂ ಓದಿ: ಡಿವೈಡರ್‌ಗೆ ಕಾರು ಡಿಕ್ಕಿ ಚಾಲಕ ದುರ್ಮರಣ, ತೋಟದ ಮನೆಯಲ್ಲಿ ಆಕ್ರಮವಾಗಿ ಗ್ಯಾಸ್ ರಿಫಿಲ್ಲಿಂಗ್, ಮರಕ್ಕೆ ಕಾರು ಡಿಕ್ಕಿ ಇಬ್ಬರ ಸಾವು

Published On - 8:34 am, Tue, 8 February 22

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!