AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಬರಿಯಿಂದ ಬೆಂಗಳೂರಿಗೆ ಹೊರಟ ಈಶ್ವರಪ್ಪ: ಸಿಎಂ ಭೇಟಿ ಬಳಿಕ ರಾಜೀನಾಮೆ ಕುರಿತ ನಿರ್ಧಾರ ಪ್ರಕಟ ಸಾಧ್ಯತೆ

ಯಾವುದೋ ಫೋನ್ ಕರೆ ಬಂದ ನಂತರ ಉದ್ವಿಗ್ನಗೊಂಡ ಅವರು ತರಾತುರಿಯಲ್ಲಿ ಬೆಂಗಳೂರಿಗೆ ಹೊರಟರು. ಸುಮಾರು 15 ನಿಮಿಷಗಳ ಕಾಲ ಫೋನ್​ನಲ್ಲಿ ಮಾತನಾಡಿದ ಅವರು ಸಂಘಟನಾತ್ಮಕ ಸಭೆಯಲ್ಲಿ ಭಾಗಿಯಾಗದೆ ಬೆಂಗಳೂರಿಗೆ ಧಾವಿಸಿದರು.

ಗಾಬರಿಯಿಂದ ಬೆಂಗಳೂರಿಗೆ ಹೊರಟ ಈಶ್ವರಪ್ಪ: ಸಿಎಂ ಭೇಟಿ ಬಳಿಕ ರಾಜೀನಾಮೆ ಕುರಿತ ನಿರ್ಧಾರ ಪ್ರಕಟ ಸಾಧ್ಯತೆ
ಮೈಸೂರಿನ ಲಲಿತ ಮಹಲ್​ನಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಮೊಬೈಲ್ ಸಂಭಾಷಣೆ
TV9 Web
| Edited By: |

Updated on:Apr 13, 2022 | 10:25 AM

Share

ಮೈಸೂರು: ಮುಂದಿನ ವಿಧಾನಸಭಾ ಚುನಾವಣೆಗೆ ಬಿಜೆಪಿ ಸಂಘಟನೆಯನ್ನು ಬಲಪಡಿಸಿಕೊಳ್ಳಲು ಯತ್ನಿಸುತ್ತಿರುವ ಸಂದರ್ಭದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕೇಳಿಬಂದಿರುವ ಶೇ 40ರ ಕಮಿಷನ್ ಆರೋಪ ಪಕ್ಷಕ್ಕೆ ಹಿನ್ನಡೆ ತಂದೊಡ್ಡಬಹುದು ಎಂಬ ಅಭಿಪ್ರಾಯಗಳು ಕೇಳಿಬರುತ್ತಿವೆ. ಮೈಸೂರಿನಲ್ಲಿ ಬುಧವಾರ ಎರಡನೇ ದಿನದ ಬಿಜೆಪಿ ಸಂಘಟನಾತ್ಮಕ ಯಾತ್ರೆ ನಡೆಯಬೇಕಿತ್ತು. ಸಚಿವ ಸಂಪುಟದಲ್ಲಿ ಹಿರಿಯ ಸಚಿವರಾಗಿರುವ ಕೆ.ಎಸ್.ಈಶ್ವರಪ್ಪ ಹಲವು ಪ್ರಮುಖರನ್ನು ಭೇಟಿಯಾಗಿ ಸಂಘಟನೆ ಬಲಗೊಳಿಸುವ ಬಗ್ಗೆ ಚರ್ಚಿಸಬೇಕಿತ್ತು. ಆದರೆ ಯಾವುದೋ ಫೋನ್ ಕರೆ ಬಂದ ನಂತರ ಉದ್ವಿಗ್ನಗೊಂಡ ಅವರು ತರಾತುರಿಯಲ್ಲಿ ಬೆಂಗಳೂರಿಗೆ ಹೊರಟರು. ಸುಮಾರು 15 ನಿಮಿಷಗಳ ಕಾಲ ಫೋನ್​ನಲ್ಲಿ ಮಾತನಾಡಿದ ಅವರು ಸಂಘಟನಾತ್ಮಕ ಸಭೆಯಲ್ಲಿ ಭಾಗಿಯಾಗದೆ ಬೆಂಗಳೂರಿಗೆ ಧಾವಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚಿಸಿದ ಬಳಿಕ ರಾಜೀನಾಮೆ ಕುರಿತು ಅಂತಿಮ ನಿರ್ಧಾರ ಪ್ರಕಟಿಸಬಹುದು ಎಂದು ಉನ್ನತ ಮೂಲಗಳು ಹೇಳಿವೆ. ಸದ್ಯ ಮಂಗಳೂರಿನಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಧ್ಯಾಹ್ನ 2.30ಕ್ಕೆ ಬೆಂಗಳೂರಿಗೆ ಆಗಮಿಸಲಿದ್ದಾರೆ.

ಮೈಸೂರಿನ ಲಲಿತ್ ಮಹಲ್​ನಲ್ಲಿ ಕೆ.ಎಸ್.ಈಶ್ವರಪ್ಪ ವಾಸ್ತವ್ಯ ಹೂಡಿದ್ದರು. ಲಲಿತ್ ಮಹಲ್​ನ ಒಳ ಆವರಣದಲ್ಲಿ ಏಕಾಂಗಿಯಾಗಿ ಫೋನ್​ನಲ್ಲಿ ಬಿರುಸಿನ ಮಾತುಕತೆ ನಡೆಸಿದರು. ಫೋನ್ ಮಾತುಕತೆಯ ನಂತರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲು ಭೇಟಿಗೆ ಯತ್ನಿಸಿದರಾದರೂ ಅದು ಭೇಟಿ ಮಾಡಲು ಸಾಧ್ಯವಾಗಲಿಲ್ಲ. ರೂಮಿಗೆ ತೆರಳಿ ವಾಪಸ್ ಬಂದರು. ತಿಂಡಿ‌ ಮುಗಿಸಿ ಮತ್ತೆ ಫೋನ್​ ಸಂಭಾಷಣೆ ನಡೆಸುತ್ತಲೇ ಕಾರು ಹತ್ತಿ ಬೆಂಗಳೂರಿಗೆ ಹೊರಟರು.

ರಾಜೀನಾಮೆ ಪರಿಸ್ಥಿತಿ ನಿರ್ಮಾಣವಾಗಿಲ್ಲ: ಕಟೀಲ್ ಸಂತೋಷ್ ಪಾಟೀಲ್ ಆತ್ಮಹತ್ಯೆ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ವಿಪಕ್ಷದವರು ಪ್ರತಿ ಸಣ್ಣ ವಿಚಾರಕ್ಕೂ ರಾಜೀನಾಮೆ ಕೇಳುತ್ತಾರೆ. ಅವರು ಕೇಳಿದ್ದಕ್ಕೆಲ್ಲಾ ರಾಜೀನಾಮೆ ಕೊಡಲು ಆಗುವುದಿಲ್ಲ. ಡಿವೈಎಸ್​ಪಿ ಗಣಪತಿ ಪ್ರಕರಣದಲ್ಲಿ ಅಂದಿನ ಗೃಹ ಸಚಿವ ಕೆ.ಜೆ.ಜಾರ್ಜ್ 7 ತಿಂಗಳ ಬಳಿಕ ರಾಜೀನಾಮೆ ನೀಡಿದ್ದರು. ಆದರೆ ಈ ಪ್ರಕರಣದಲ್ಲಿ ಸರ್ಕಾರ ತಕ್ಷಣ ತನಿಖೆಗೆ ಆದೇಶಿಸಿದೆ. ಈಶ್ವರಪ್ಪ ರಾಜೀನಾಮೆ ಪಡೆಯುವ ಸ್ಥಿತಿ ಈಗ ನಿರ್ಮಾಣವಾಗಿಲ್ಲ. ತನಿಖೆ ಬಳಿಕ ತಪ್ಪಿತಸ್ಥರು ಎಂದು ಸಾಬೀತಾದರೆ ಕ್ರಮ ಕೈಗೊಳ್ಳುತ್ತೇವೆ ಎಂದರು.

ವಿರೋಧ ಪಕ್ಷಗಳು ಇಂದು ರಾಜ್ಯಪಾಲರ ಭೇಟಿ ಮಾಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ರಾಜ್ಯಪಾಲರನ್ನೇಕೆ ಸಮಯ ಸಿಕ್ಕರೆ ರಾಷ್ಟ್ರಪತಿಗಳನ್ನೇ ಭೇಟಿ ಮಾಡಲಿ ಎಂದರು. ಸಿಎಂ ರಾಜೀನಾಮೆ ಕೇಳಿದರೆ ಕೊಡುತ್ತೇನೆ ಎಂಬ ಈಶ್ವರಪ್ಪ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಅದು ಸಿಎಂಗೆ ಬಿಟ್ಟ ವಿಚಾರ. ರಾಜ್ಯಾಧ್ಯಕ್ಷನಾಗಿ ನಾನು ನನ್ನ ಹೇಳಿಕೆ ತಿಳಿಸಿದ್ದೇನೆ. ಸಿಎಂಗೆ ಈ ಬಗ್ಗೆ ನಾನು ಏನಾದರೂ ಹೇಳುವುದಿದ್ದರೆ ಅವರನ್ನು ಭೇಟಿ ಮಾಡಿ ಹೇಳುತ್ತೇನ ಎಂದರು.

ಇದನ್ನೂ ಓದಿ:ಸಚಿವ ಈಶ್ವರಪ್ಪ ವಜಾ ಮಾಡುವಂತೆ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದ ಕಾಂಗ್ರೆಸ್ ನಿಯೋಗ

ಇದನ್ನೂ ಓದಿ: ಸಂತೋಷ್ ಆತ್ಮಹತ್ಯೆ ಪ್ರಕರಣ ಹಿನ್ನೆಲೆ; ಇಂದು ಸಚಿವ ಸ್ಥಾನಕ್ಕೆ ಕೆ.ಎಸ್ ಈಶ್ವರಪ್ಪ ರಾಜೀನಾಮೆ ಸಾಧ್ಯತೆ

Published On - 10:22 am, Wed, 13 April 22

ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ