Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹಲಕ್ಷ್ಮೀ ಯೋಜನೆ: 59 ತಿಂಗಳ ಹಣ ನಾಡದೇವತೆ ಚಾಮುಂಡೇಶ್ವರಿಗೆ ಅರ್ಪಿಸಿದ ಲಕ್ಷ್ಮೀ ಹೆಬ್ಬಾಳ್ಕರ್‌

ಈಗ ಪ್ರತಿ ತಿಂಗಳು ನಾಡದೇವತೆ ತಾಯಿ ಚಾಮುಂಡೇಶ್ವರಿಗೂ 2 ಸಾವಿರ ಅರ್ಪಣೆ ಮಾಡಲಾಗುತ್ತಿದ್ದು 59 ತಿಂಗಳ ಒಟ್ಟು ಮೊತ್ತವನ್ನು ದೇವಸ್ಥಾನಕ್ಕೆ ಸಂದಾಯ ಮಾಡಲಾಗಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಮ್ಮ ವೈಯಕ್ತಿಕ ಹಣವನ್ನು ತಾಯಿ ಚಾಮುಂಡೇಶ್ವರಿಗೆ ಅರ್ಪಿಸಿದ್ದಾರೆ. 59 ತಿಂಗಳ ಒಟ್ಟು ಹಣ 1,18,000 ರೂಗಳನ್ನು ಸಂದಾಯ ಮಾಡಲಾಗಿದೆ.

ಗೃಹಲಕ್ಷ್ಮೀ ಯೋಜನೆ: 59 ತಿಂಗಳ ಹಣ ನಾಡದೇವತೆ ಚಾಮುಂಡೇಶ್ವರಿಗೆ ಅರ್ಪಿಸಿದ ಲಕ್ಷ್ಮೀ ಹೆಬ್ಬಾಳ್ಕರ್‌
ನಾಡದೇವತೆ ಚಾಮುಂಡೇಶ್ವರಿ
Follow us
ರಾಮ್​, ಮೈಸೂರು
| Updated By: ಆಯೇಷಾ ಬಾನು

Updated on: Nov 28, 2023 | 8:12 AM

ಮೈಸೂರು, ನ.28: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಯಶಸ್ಸಿನ ಹಾದಿಯಲ್ಲಿ ಸಾಗುತ್ತಿದೆ. ರಕ್ಷಾ ಬಂಧನದ ದಿನ ಮೈಸೂರಿನಲ್ಲಿ ರಾಹುಲ್ ಗಾಂಧಿಯವರ (Rahul Gandhi) ನೇತೃತ್ವದಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗಿತ್ತು. ಆಗ ನಾಡದೇವತೆ ಚಾಮುಂಡೇಶ್ವರಿಗೆ (Mysuru Chamundeshwari Temple) 2000 ರೂ. ಅರ್ಪಿಸಲಾಗಿತ್ತು. ಸದ್ಯ ಈಗ 59 ತಿಂಗಳ ಹಣವನ್ನು ತಾಯಿ ಚಾಮುಂಡೇಶ್ವರಿ ದೇಗುಲಕ್ಕೆ ಅರ್ಪಣೆ ಮಾಡಲಾಗಿದೆ. ಪ್ರತಿ ತಿಂಗಳು 2 ಸಾವಿರ ರೂ.ನಂತೆ 1,18,000 ಹಣವನ್ನು ಸಂದಾಯ ಮಾಡಲಾಗಿದೆ.

ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡುವ ರಾಜ್ಯದ ಮಹತ್ವದ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ನಾಡದೇವತೆಗೆ 59 ತಿಂಗಳ ಒಟ್ಟು ಹಣ 1,18,000 ರೂಗಳನ್ನು ಸಂದಾಯ ಮಾಡಲಾಗಿದೆ. ಈ ಹಿಂದೆ ಪ್ರತಿ ತಿಂಗಳು ಚಾಮುಂಡಿ ದೇವಸ್ಥಾನಕ್ಕೆ ಯೋಜನೆಯ ಹಣ ನೀಡುವಂತೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ಅವರಿಗೆ ಎಂಎಲ್​ಸಿ ದಿನೇಶ್ ಗೂಳಿಗೌಡ ಪತ್ರ ಬರೆದಿದ್ದರು. ಬಳಿಕ ಈ ಬಗ್ಗೆ ಕ್ರಮ ವಹಿಸುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಡಿಸಿಎಂ ಡಿಕೆ ಶಿವಕುಮಾರ್ ಸೂಚಿಸಿದ್ದರು. ಇದರ ಬೆನ್ನಲ್ಲೆ ಈಗ ಪ್ರತಿ ತಿಂಗಳು ನಾಡದೇವತೆ ತಾಯಿ ಚಾಮುಂಡೇಶ್ವರಿಗೂ 2 ಸಾವಿರ ಅರ್ಪಣೆ ಮಾಡಲಾಗುತ್ತಿದ್ದು 59 ತಿಂಗಳ ಒಟ್ಟು ಮೊತ್ತವನ್ನು ದೇವಸ್ಥಾನಕ್ಕೆ ಸಂದಾಯ ಮಾಡಲಾಗಿದೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಮ್ಮ ವೈಯಕ್ತಿಕ ಹಣವನ್ನು ತಾಯಿ ಚಾಮುಂಡೇಶ್ವರಿಗೆ ಅರ್ಪಿಸಿದ್ದಾರೆ. ಪ್ರತಿ ತಿಂಗಳು 2 ಸಾವಿರ ರೂಪಾಯಿಯಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರಿನಲ್ಲಿ ಹಣ ಸಂದಾಯವಾಗಲಿದೆ.

ಇದನ್ನೂ ಓದಿ: ಗೃಹಲಕ್ಷ್ಮೀ ಯೋಜನೆಯ ಹಣ ಚಾಮುಂಡೇಶ್ವರಿಗೆ ಅರ್ಪಣೆ, ಪ್ರತಿ ತಿಂಗಳು 2 ಸಾವಿರ ರೂ. ಅರ್ಪಿಸಲು ಅಸ್ತು

ಪತ್ರ ಬರೆದು ಮನವಿ ಮಾಡಿದ್ದ ದಿನೇಶ್ ಗೂಳಿಗೌಡ

ಪ್ರತಿ ತಿಂಗಳು 2 ಸಾವಿರ ರೂ.ಗಳನ್ನು ರಾಜ್ಯದ 1.2 ಕೋಟಿಗೂ ಅಧಿಕ ಕುಟುಂಬಗಳಿಗೆ ಜಮಾ ಮಾಡಲಾಗುತ್ತಿದೆ. ಆ ಹಣದಿಂದ ಸಾಕಷ್ಟು ಬಡ ಕುಟುಂಬಗಳ ಜೀವನಮಟ್ಟ ಸುಧಾರಣೆಗೊಂಡಿದೆ. ಅಲ್ಲದೆ, ನಮ್ಮ ಸರ್ಕಾರದ ಹಾಗೂ ತಮ್ಮಗಳ ಬಗ್ಗೆ ಶುಭ ಹಾರೈಕೆಯನ್ನು ಮಾಡುತ್ತಲೇ ಇದ್ದಾರೆ.

ಈಗ ಪ್ರತಿ ತಿಂಗಳು ಮನೆಯ ಯಜಮಾನಿಯರ ಖಾತೆಗೆ ನಿಖರವಾಗಿ ತಲಾ 2 ಸಾವಿರ ರೂ. ಹಣ ಜಮಾ ಮಾಡುತ್ತಿರುವುದು ಖುಷಿಯ ವಿಚಾರವಾಗಿದೆ. ಅದೇ ರೀತಿ ಪ್ರತಿ ತಿಂಗಳ ಕಂತನ್ಹು ಉಜಮಾನಿಯರಿಗೆ ಪಾವತಿಸುವ ಮೊದಲು ನಾಡದೇವಿ ಚಾಮುಂಡೇಶ್ವರಿಯ ಸನ್ನಿಧಿಗೂ ಸಲ್ಲಿಸಬೇಕು. ಆ ಮೂಲಕ ಮೊದಲ ಹಣ ನಾಡದೇವತೆಗೆ ಸಲ್ಲಿಕೆಯಾಗಿ ಬಳಿಕ ಉಳಿದವರಿಗೆ ಪಾವತಿಯಾಗುವಂತೆ ವ್ಯವಸ್ಥೆ ಮಾಡಲು ದಿನೇಶ್ ಅವರು ಪತ್ರದ ಮೂಲಕ ಮನವಿ ಮಾಡಿದ್ದರು. ಅದರ ಫಲವಾಗಿ ಚಾಮುಂಡೇಶ್ವರಿ ತಾಯಿಗೆ ಹಣ ಸಂದಾಯ ಮಾಡಲಾಗುತ್ತಿದೆ.

ಮೈಸೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ