AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಮಂತರ ಒತ್ತುವರಿಗೆ ಕಾಂಗ್ರೆಸ್, ಬಡವರ ಒತ್ತುವರಿಗೆ ಮಾಧ್ಯಮಗಳ ಶ್ರೀರಕ್ಷೆ: ಸಚಿವ ಅಶೋಕ್

‘ಬಡವರು-ಶ್ರೀಮಂತರು ಎನ್ನದೇ ಯಾರೇ ಒತ್ತುವರಿ ಮಾಡಿದ್ದರೂ ತೆರವು ಮಾಡುತ್ತೇವೆ’ ಎಂದು ತಿಳಿಸಿದರು.

ಶ್ರೀಮಂತರ ಒತ್ತುವರಿಗೆ ಕಾಂಗ್ರೆಸ್, ಬಡವರ ಒತ್ತುವರಿಗೆ ಮಾಧ್ಯಮಗಳ ಶ್ರೀರಕ್ಷೆ: ಸಚಿವ ಅಶೋಕ್
ಕಂದಾಯ ಸಚಿವ ಆರ್ ಅಶೋಕ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Sep 20, 2022 | 1:03 PM

ಮೈಸೂರು: ಮುಂದಿನ ದಿನಗಳಲ್ಲಿ ಬೆಂಗಳೂರಿನ ವಿವಿಧೆಡೆ ಒತ್ತುವರಿ ತೆರವು ಕಾರ್ಯಾಚರಣೆ  (Encroachment Removal) ಚುರುಕುಗೊಳಿಸುತ್ತೇವೆ. ಯಾರ ಮುಲಾಜಿಗೂ ಒಳಪಡುವ ಪ್ರಶ್ನೆಯೇ ಇಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ನಗರದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಬಡವರು ಮಾಡಿರುವ ಒತ್ತುವರಿ ತೆರವು ಮಾಡಲು ಮಾಧ್ಯಮದವರು ಬಿಡುತ್ತಿಲ್ಲ. ಶ್ರೀಮಂತರು ಮಾಡಿರುವ ಒತ್ತುವರಿ ತೆರವು ಮಾಡಲು ಕಾಂಗ್ರೆಸ್​ನವರು ಬಿಡುತ್ತಿಲ್ಲ. ನಾವು ಯಾವ ಒತ್ತಡಕ್ಕೂ ಮಣಿಯದೇ ಕಾರ್ಯಾಚರಣೆ ಮುಂದುವರಿಸುತ್ತೇವೆ. ಬಡವರು-ಶ್ರೀಮಂತರು ಎನ್ನದೇ ಎಲ್ಲ ಒತ್ತುವರಿ ತೆರವು ಮಾಡುತ್ತೇವೆ’ ಎಂದು ತಿಳಿಸಿದರು.

ಒತ್ತುವರಿ ಮಾಡಿರುವವರನ್ನು ರಾಜಕಾರಣಿಗಳು, ಶ್ರೀಮಂತರು ಅಥವಾ ಬಡವರು ಎಂದು ಪ್ರತ್ಯೇಕ ಪ್ರತ್ಯೇಕವಾಗಿ ನೋಡಲು ಆಗುವುದಿಲ್ಲ. ಯಾರೇ ಒತ್ತುವರಿ ಮಾಡಿದ್ದರೂ ತೆರವು ಮಾಡುವುದು ನಿಶ್ಚಿತ. ಬಡವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಕುರಿತು ಸಿಎಂ ಜೊತೆ ಚರ್ಚಿಸಲಾಗುವುದು ಎಂದು ಸ್ಪಷ್ಟಪಡಿಸಿದರು. ಒತ್ತುವರಿ ತೆರವು ವಿಚಾರದಲ್ಲೂ ರಾಜಕಾರಣ ಮಾಡಲಾಗುತ್ತಿದೆ ಆರೋಪಗಳ ಕುರಿತು ಪ್ರತಿಕ್ರಿಯಿಸಿದ ಅವರು, ರಾಜಕಾರಣದಲ್ಲಿ ಆರೋಪ ಪ್ರತ್ಯಾರೋಪ ಸಹಜ ಎಂದರು.

ಬೆಂಗಳೂರಿನಾದ್ಯಂತ ಒತ್ತುವರಿ ತೆರವು ಮಾಡುತ್ತೇವೆ. ಸದ್ಯಕ್ಕೆ ಯಲಹಂಕ ಮತ್ತು ಮಹದೇವಪುರ ವಲಯಗಳಲ್ಲಿ ಒತ್ತುವರಿ ತೆರವು ಕಾರ್ಯ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಉಳಿದೆಡೆ ಒತ್ತುವರಿ ತೆರವಿಗೆ ಗಮನಕೊಡುತ್ತೇವೆ. ಬಡವರು ಎಂಬ ಕಾರಣಕ್ಕೆ ಒತ್ತುವರಿ ತೆರವು ನಿಲ್ಲಿಸಲು ಆಗಿಲ್ಲ. ಬಡವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಬಗ್ಗೆ ಮುಖ್ಯಮಂತ್ರಿ ಜೊತೆಗೆ ಚರ್ಚೆ ನಡೆಸುತ್ತೇವೆ ಎಂದರು.

ಒತ್ತುವರಿ ತೆರವಿಗೆ ಹಿಂದೇಟು: ಮಹಾನಗರಪಾಲಿಕೆ ವಿರುದ್ಧ ಜನಾಕ್ರೋಶ

ವಿಪ್ರೋ ಕಂಪನಿಯು ಮಾಡಿಕೊಂಡಿರುವ ಒತ್ತುವರಿ ತೆರವಿಗೆ ಮಹಾನಗರಪಾಲಿಕೆಯು ಹಿಂದೇಟು ಹಾಕುತ್ತಿದೆ ಎಂದು ಬೆಂಗಳೂರು ಸರ್ಜಾಪುರ ರಸ್ತೆ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ದೊಡ್ಡವರು, ಉಳ್ಳವರ ಪರ ಅಧಿಕಾರಿಗಳು ಕೆಲಸ ಮಾಡ್ತಿದ್ದಾರೆ. ರಾಜಕಾಲುವೆ ಒತ್ತುವರಿ ಸರ್ವೇ ಮಾಡಿದ್ದರೂ ತೆರವು ಕಾರ್ಯಾಚರಣೆಗೆ ಮೀನಾಮೇಷ ಎಣಿಸುತ್ತಿದ್ದಾರೆ. ಮಳೆ ಬಂದರೆ ಈ‌ ಏರಿಯಾದ ರಸ್ತೆ ಪೂರ್ತಿ ಜಲಾವೃತ ಆಗಿತ್ತು. ನಾನು ಮನೆ ಕೆಲಸ ಮಾಡೋದು, ಆಗ 4 ದಿನ ಮನೆ ಕೆಲಸಕ್ಕೆ ರಜೆ ಹಾಕಿದ್ದೆ. ಬಡವರಿಗೊಂದು ಕಾನೂನು ಶ್ರೀಮಂತರಿಗೆ ಒಂದು ಕಾನೂನಾ’ ಎಂದು ಸ್ಥಳೀಯರಾದ ಸುವರ್ಣಾ ಪ್ರಶ್ನಿಸಿದರು.

Published On - 1:03 pm, Tue, 20 September 22

ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ
ಡಿ ಡೇ ಮತ್ತು ಹೆಚ್ ಫ್ಯಾಕ್ಟರ್ ಪದಗಳ ವಿವರಣೆ ನೀಡಿದ ಕರ್ನಲ್ ಹರಿ
ಡಿ ಡೇ ಮತ್ತು ಹೆಚ್ ಫ್ಯಾಕ್ಟರ್ ಪದಗಳ ವಿವರಣೆ ನೀಡಿದ ಕರ್ನಲ್ ಹರಿ
ಪಾಕಿಸ್ತಾನದ ಆರ್ಥಿಕ ಪರಿಸ್ಥಿತಿ ಹೇಗಿದೆ? ಪಾಕ್ ಪತ್ರಕರ್ತ ಹೇಳಿದ್ದೇನು?
ಪಾಕಿಸ್ತಾನದ ಆರ್ಥಿಕ ಪರಿಸ್ಥಿತಿ ಹೇಗಿದೆ? ಪಾಕ್ ಪತ್ರಕರ್ತ ಹೇಳಿದ್ದೇನು?
ಪಾಕಿಸ್ತಾನ್ ಪರ ಘೋಷಣೆ ಕೂಗಿದ ಆರೋಪ ಮತ್ತು ಕೊಲೆ, ಪೊಲೀಸರಿಂದ 15 ಜನರ ಬಂಧನ
ಪಾಕಿಸ್ತಾನ್ ಪರ ಘೋಷಣೆ ಕೂಗಿದ ಆರೋಪ ಮತ್ತು ಕೊಲೆ, ಪೊಲೀಸರಿಂದ 15 ಜನರ ಬಂಧನ
ಅದ್ದೂರಿಯಾಗಿ ರಿಸೆಪ್ಷನ್ ನಡೆದಾಗ ವರ ಖುಷಿಯಾಗಿದ್ದ! ನಂತರ ನಡೆದದ್ದೇ ಬೇರೆ
ಅದ್ದೂರಿಯಾಗಿ ರಿಸೆಪ್ಷನ್ ನಡೆದಾಗ ವರ ಖುಷಿಯಾಗಿದ್ದ! ನಂತರ ನಡೆದದ್ದೇ ಬೇರೆ
ತಮಿಳುನಾಡಿನ ಪೊಲೀಸ್​ ಠಾಣೆಯೊಳಗೆ ಬಂದು ಇಣುಕಿ ನೋಡಿದ ಚಿರತೆ
ತಮಿಳುನಾಡಿನ ಪೊಲೀಸ್​ ಠಾಣೆಯೊಳಗೆ ಬಂದು ಇಣುಕಿ ನೋಡಿದ ಚಿರತೆ
ಕಾಶಪ್ಪನವರ್​ ಮಹಾ ಭ್ರಷ್ಟ, ಪಂಚಮಸಾಲಿ ಸಮಾಜಕ್ಕೆ ಮೋಸ ಮಾಡಿದ್ದಾರೆ: ಯತ್ನಾಳ್
ಕಾಶಪ್ಪನವರ್​ ಮಹಾ ಭ್ರಷ್ಟ, ಪಂಚಮಸಾಲಿ ಸಮಾಜಕ್ಕೆ ಮೋಸ ಮಾಡಿದ್ದಾರೆ: ಯತ್ನಾಳ್
Rohit Sharma: ಪುಲ್ ಪುಲ್ ಪುಲ್... ಹಿಟ್​ಮ್ಯಾನ್ ಸ್ಪೆಷಲ್ ವಿಡಿಯೋ
Rohit Sharma: ಪುಲ್ ಪುಲ್ ಪುಲ್... ಹಿಟ್​ಮ್ಯಾನ್ ಸ್ಪೆಷಲ್ ವಿಡಿಯೋ