AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಮಂತರ ಒತ್ತುವರಿಗೆ ಕಾಂಗ್ರೆಸ್, ಬಡವರ ಒತ್ತುವರಿಗೆ ಮಾಧ್ಯಮಗಳ ಶ್ರೀರಕ್ಷೆ: ಸಚಿವ ಅಶೋಕ್

‘ಬಡವರು-ಶ್ರೀಮಂತರು ಎನ್ನದೇ ಯಾರೇ ಒತ್ತುವರಿ ಮಾಡಿದ್ದರೂ ತೆರವು ಮಾಡುತ್ತೇವೆ’ ಎಂದು ತಿಳಿಸಿದರು.

ಶ್ರೀಮಂತರ ಒತ್ತುವರಿಗೆ ಕಾಂಗ್ರೆಸ್, ಬಡವರ ಒತ್ತುವರಿಗೆ ಮಾಧ್ಯಮಗಳ ಶ್ರೀರಕ್ಷೆ: ಸಚಿವ ಅಶೋಕ್
ಕಂದಾಯ ಸಚಿವ ಆರ್ ಅಶೋಕ
TV9 Web
| Edited By: |

Updated on:Sep 20, 2022 | 1:03 PM

Share

ಮೈಸೂರು: ಮುಂದಿನ ದಿನಗಳಲ್ಲಿ ಬೆಂಗಳೂರಿನ ವಿವಿಧೆಡೆ ಒತ್ತುವರಿ ತೆರವು ಕಾರ್ಯಾಚರಣೆ  (Encroachment Removal) ಚುರುಕುಗೊಳಿಸುತ್ತೇವೆ. ಯಾರ ಮುಲಾಜಿಗೂ ಒಳಪಡುವ ಪ್ರಶ್ನೆಯೇ ಇಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ನಗರದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಬಡವರು ಮಾಡಿರುವ ಒತ್ತುವರಿ ತೆರವು ಮಾಡಲು ಮಾಧ್ಯಮದವರು ಬಿಡುತ್ತಿಲ್ಲ. ಶ್ರೀಮಂತರು ಮಾಡಿರುವ ಒತ್ತುವರಿ ತೆರವು ಮಾಡಲು ಕಾಂಗ್ರೆಸ್​ನವರು ಬಿಡುತ್ತಿಲ್ಲ. ನಾವು ಯಾವ ಒತ್ತಡಕ್ಕೂ ಮಣಿಯದೇ ಕಾರ್ಯಾಚರಣೆ ಮುಂದುವರಿಸುತ್ತೇವೆ. ಬಡವರು-ಶ್ರೀಮಂತರು ಎನ್ನದೇ ಎಲ್ಲ ಒತ್ತುವರಿ ತೆರವು ಮಾಡುತ್ತೇವೆ’ ಎಂದು ತಿಳಿಸಿದರು.

ಒತ್ತುವರಿ ಮಾಡಿರುವವರನ್ನು ರಾಜಕಾರಣಿಗಳು, ಶ್ರೀಮಂತರು ಅಥವಾ ಬಡವರು ಎಂದು ಪ್ರತ್ಯೇಕ ಪ್ರತ್ಯೇಕವಾಗಿ ನೋಡಲು ಆಗುವುದಿಲ್ಲ. ಯಾರೇ ಒತ್ತುವರಿ ಮಾಡಿದ್ದರೂ ತೆರವು ಮಾಡುವುದು ನಿಶ್ಚಿತ. ಬಡವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಕುರಿತು ಸಿಎಂ ಜೊತೆ ಚರ್ಚಿಸಲಾಗುವುದು ಎಂದು ಸ್ಪಷ್ಟಪಡಿಸಿದರು. ಒತ್ತುವರಿ ತೆರವು ವಿಚಾರದಲ್ಲೂ ರಾಜಕಾರಣ ಮಾಡಲಾಗುತ್ತಿದೆ ಆರೋಪಗಳ ಕುರಿತು ಪ್ರತಿಕ್ರಿಯಿಸಿದ ಅವರು, ರಾಜಕಾರಣದಲ್ಲಿ ಆರೋಪ ಪ್ರತ್ಯಾರೋಪ ಸಹಜ ಎಂದರು.

ಬೆಂಗಳೂರಿನಾದ್ಯಂತ ಒತ್ತುವರಿ ತೆರವು ಮಾಡುತ್ತೇವೆ. ಸದ್ಯಕ್ಕೆ ಯಲಹಂಕ ಮತ್ತು ಮಹದೇವಪುರ ವಲಯಗಳಲ್ಲಿ ಒತ್ತುವರಿ ತೆರವು ಕಾರ್ಯ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಉಳಿದೆಡೆ ಒತ್ತುವರಿ ತೆರವಿಗೆ ಗಮನಕೊಡುತ್ತೇವೆ. ಬಡವರು ಎಂಬ ಕಾರಣಕ್ಕೆ ಒತ್ತುವರಿ ತೆರವು ನಿಲ್ಲಿಸಲು ಆಗಿಲ್ಲ. ಬಡವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಬಗ್ಗೆ ಮುಖ್ಯಮಂತ್ರಿ ಜೊತೆಗೆ ಚರ್ಚೆ ನಡೆಸುತ್ತೇವೆ ಎಂದರು.

ಒತ್ತುವರಿ ತೆರವಿಗೆ ಹಿಂದೇಟು: ಮಹಾನಗರಪಾಲಿಕೆ ವಿರುದ್ಧ ಜನಾಕ್ರೋಶ

ವಿಪ್ರೋ ಕಂಪನಿಯು ಮಾಡಿಕೊಂಡಿರುವ ಒತ್ತುವರಿ ತೆರವಿಗೆ ಮಹಾನಗರಪಾಲಿಕೆಯು ಹಿಂದೇಟು ಹಾಕುತ್ತಿದೆ ಎಂದು ಬೆಂಗಳೂರು ಸರ್ಜಾಪುರ ರಸ್ತೆ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ದೊಡ್ಡವರು, ಉಳ್ಳವರ ಪರ ಅಧಿಕಾರಿಗಳು ಕೆಲಸ ಮಾಡ್ತಿದ್ದಾರೆ. ರಾಜಕಾಲುವೆ ಒತ್ತುವರಿ ಸರ್ವೇ ಮಾಡಿದ್ದರೂ ತೆರವು ಕಾರ್ಯಾಚರಣೆಗೆ ಮೀನಾಮೇಷ ಎಣಿಸುತ್ತಿದ್ದಾರೆ. ಮಳೆ ಬಂದರೆ ಈ‌ ಏರಿಯಾದ ರಸ್ತೆ ಪೂರ್ತಿ ಜಲಾವೃತ ಆಗಿತ್ತು. ನಾನು ಮನೆ ಕೆಲಸ ಮಾಡೋದು, ಆಗ 4 ದಿನ ಮನೆ ಕೆಲಸಕ್ಕೆ ರಜೆ ಹಾಕಿದ್ದೆ. ಬಡವರಿಗೊಂದು ಕಾನೂನು ಶ್ರೀಮಂತರಿಗೆ ಒಂದು ಕಾನೂನಾ’ ಎಂದು ಸ್ಥಳೀಯರಾದ ಸುವರ್ಣಾ ಪ್ರಶ್ನಿಸಿದರು.

Published On - 1:03 pm, Tue, 20 September 22

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ