AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಮಂತರ ಒತ್ತುವರಿಗೆ ಕಾಂಗ್ರೆಸ್, ಬಡವರ ಒತ್ತುವರಿಗೆ ಮಾಧ್ಯಮಗಳ ಶ್ರೀರಕ್ಷೆ: ಸಚಿವ ಅಶೋಕ್

‘ಬಡವರು-ಶ್ರೀಮಂತರು ಎನ್ನದೇ ಯಾರೇ ಒತ್ತುವರಿ ಮಾಡಿದ್ದರೂ ತೆರವು ಮಾಡುತ್ತೇವೆ’ ಎಂದು ತಿಳಿಸಿದರು.

ಶ್ರೀಮಂತರ ಒತ್ತುವರಿಗೆ ಕಾಂಗ್ರೆಸ್, ಬಡವರ ಒತ್ತುವರಿಗೆ ಮಾಧ್ಯಮಗಳ ಶ್ರೀರಕ್ಷೆ: ಸಚಿವ ಅಶೋಕ್
ಕಂದಾಯ ಸಚಿವ ಆರ್ ಅಶೋಕ
TV9 Web
| Edited By: |

Updated on:Sep 20, 2022 | 1:03 PM

Share

ಮೈಸೂರು: ಮುಂದಿನ ದಿನಗಳಲ್ಲಿ ಬೆಂಗಳೂರಿನ ವಿವಿಧೆಡೆ ಒತ್ತುವರಿ ತೆರವು ಕಾರ್ಯಾಚರಣೆ  (Encroachment Removal) ಚುರುಕುಗೊಳಿಸುತ್ತೇವೆ. ಯಾರ ಮುಲಾಜಿಗೂ ಒಳಪಡುವ ಪ್ರಶ್ನೆಯೇ ಇಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ನಗರದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಬಡವರು ಮಾಡಿರುವ ಒತ್ತುವರಿ ತೆರವು ಮಾಡಲು ಮಾಧ್ಯಮದವರು ಬಿಡುತ್ತಿಲ್ಲ. ಶ್ರೀಮಂತರು ಮಾಡಿರುವ ಒತ್ತುವರಿ ತೆರವು ಮಾಡಲು ಕಾಂಗ್ರೆಸ್​ನವರು ಬಿಡುತ್ತಿಲ್ಲ. ನಾವು ಯಾವ ಒತ್ತಡಕ್ಕೂ ಮಣಿಯದೇ ಕಾರ್ಯಾಚರಣೆ ಮುಂದುವರಿಸುತ್ತೇವೆ. ಬಡವರು-ಶ್ರೀಮಂತರು ಎನ್ನದೇ ಎಲ್ಲ ಒತ್ತುವರಿ ತೆರವು ಮಾಡುತ್ತೇವೆ’ ಎಂದು ತಿಳಿಸಿದರು.

ಒತ್ತುವರಿ ಮಾಡಿರುವವರನ್ನು ರಾಜಕಾರಣಿಗಳು, ಶ್ರೀಮಂತರು ಅಥವಾ ಬಡವರು ಎಂದು ಪ್ರತ್ಯೇಕ ಪ್ರತ್ಯೇಕವಾಗಿ ನೋಡಲು ಆಗುವುದಿಲ್ಲ. ಯಾರೇ ಒತ್ತುವರಿ ಮಾಡಿದ್ದರೂ ತೆರವು ಮಾಡುವುದು ನಿಶ್ಚಿತ. ಬಡವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಕುರಿತು ಸಿಎಂ ಜೊತೆ ಚರ್ಚಿಸಲಾಗುವುದು ಎಂದು ಸ್ಪಷ್ಟಪಡಿಸಿದರು. ಒತ್ತುವರಿ ತೆರವು ವಿಚಾರದಲ್ಲೂ ರಾಜಕಾರಣ ಮಾಡಲಾಗುತ್ತಿದೆ ಆರೋಪಗಳ ಕುರಿತು ಪ್ರತಿಕ್ರಿಯಿಸಿದ ಅವರು, ರಾಜಕಾರಣದಲ್ಲಿ ಆರೋಪ ಪ್ರತ್ಯಾರೋಪ ಸಹಜ ಎಂದರು.

ಬೆಂಗಳೂರಿನಾದ್ಯಂತ ಒತ್ತುವರಿ ತೆರವು ಮಾಡುತ್ತೇವೆ. ಸದ್ಯಕ್ಕೆ ಯಲಹಂಕ ಮತ್ತು ಮಹದೇವಪುರ ವಲಯಗಳಲ್ಲಿ ಒತ್ತುವರಿ ತೆರವು ಕಾರ್ಯ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಉಳಿದೆಡೆ ಒತ್ತುವರಿ ತೆರವಿಗೆ ಗಮನಕೊಡುತ್ತೇವೆ. ಬಡವರು ಎಂಬ ಕಾರಣಕ್ಕೆ ಒತ್ತುವರಿ ತೆರವು ನಿಲ್ಲಿಸಲು ಆಗಿಲ್ಲ. ಬಡವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಬಗ್ಗೆ ಮುಖ್ಯಮಂತ್ರಿ ಜೊತೆಗೆ ಚರ್ಚೆ ನಡೆಸುತ್ತೇವೆ ಎಂದರು.

ಒತ್ತುವರಿ ತೆರವಿಗೆ ಹಿಂದೇಟು: ಮಹಾನಗರಪಾಲಿಕೆ ವಿರುದ್ಧ ಜನಾಕ್ರೋಶ

ವಿಪ್ರೋ ಕಂಪನಿಯು ಮಾಡಿಕೊಂಡಿರುವ ಒತ್ತುವರಿ ತೆರವಿಗೆ ಮಹಾನಗರಪಾಲಿಕೆಯು ಹಿಂದೇಟು ಹಾಕುತ್ತಿದೆ ಎಂದು ಬೆಂಗಳೂರು ಸರ್ಜಾಪುರ ರಸ್ತೆ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ದೊಡ್ಡವರು, ಉಳ್ಳವರ ಪರ ಅಧಿಕಾರಿಗಳು ಕೆಲಸ ಮಾಡ್ತಿದ್ದಾರೆ. ರಾಜಕಾಲುವೆ ಒತ್ತುವರಿ ಸರ್ವೇ ಮಾಡಿದ್ದರೂ ತೆರವು ಕಾರ್ಯಾಚರಣೆಗೆ ಮೀನಾಮೇಷ ಎಣಿಸುತ್ತಿದ್ದಾರೆ. ಮಳೆ ಬಂದರೆ ಈ‌ ಏರಿಯಾದ ರಸ್ತೆ ಪೂರ್ತಿ ಜಲಾವೃತ ಆಗಿತ್ತು. ನಾನು ಮನೆ ಕೆಲಸ ಮಾಡೋದು, ಆಗ 4 ದಿನ ಮನೆ ಕೆಲಸಕ್ಕೆ ರಜೆ ಹಾಕಿದ್ದೆ. ಬಡವರಿಗೊಂದು ಕಾನೂನು ಶ್ರೀಮಂತರಿಗೆ ಒಂದು ಕಾನೂನಾ’ ಎಂದು ಸ್ಥಳೀಯರಾದ ಸುವರ್ಣಾ ಪ್ರಶ್ನಿಸಿದರು.

Published On - 1:03 pm, Tue, 20 September 22

Follow Us
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್