3 ದಿನದ ಹಿಂದೆಯೇ ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ
3 ದಿನದ ಹಿಂದೆಯೇ ನಾಪತ್ತೆಯಾಗಿದ್ದ ಯುವಕ ವಿನೋದ್ ಶವ ಪತ್ತೆಯಾಗಿದೆ. ವಿನೋದ್ ಮೈಸೂರು ಜಿಲ್ಲೆ ಕೆ.ಆರ್. ನಗರ ತಾಲೂಕಿನ ಸಾಗರಕಟ್ಟೆಯ ನಜರ್ಬಾದ್ ನಿವಾಸಿ.

ವಿನೋದ್ ಶವ ಪತ್ತೆ
Updated on: Dec 08, 2020 | 1:09 PM
Share
ಮೈಸೂರು: 3 ದಿನದ ಹಿಂದೆ ನಾಪತ್ತೆಯಾಗಿದ್ದ ಯುವಕ ವಿನೋದ್ ಶವ ಪತ್ತೆಯಾಗಿದೆ. ಸಾಗರಕಟ್ಟೆ ಕಾವೇರಿ ಹಿನ್ನೀರಲ್ಲಿ ವಿನೋದ್ ಶವ ಕಾಣಿಸಿಕೊಂಡಿದೆ.
22 ವರ್ಷದ ವಿನೋದ್ ಮೈಸೂರು ಜಿಲ್ಲೆ ಕೆ.ಆರ್. ನಗರ ತಾಲೂಕಿನ ಸಾಗರಕಟ್ಟೆಯ ನಜರ್ಬಾದ್ ನಿವಾಸಿ. ವಿನೋದ್ ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಸ್ನೇಹಿತನಿಗೆ ಕೊಟ್ಟ ಸಾಲವನ್ನು ಹಿಂಪಡೆಯುವುದಾಗಿ ಅಂಗಡಿಯಿಂದ ತೆರಳಿದ್ದ. 3 ದಿನಗಳಾದರೂ ವಿನೋದ್ ಹಿಂದಿರುಗಿ ಬಂದಿರಲಿಲ್ಲ.
ವಿನೋದ್ನನ್ನು ಕೊಲೆ ಮಾಡಿ ನೀರಿಗೆ ಎಸೆದಿರುವ ಅನುಮಾನ ಶುರುವಾಗಿದೆ. ಈ ಬಗ್ಗೆ ಪೋಷಕರು ನಜರ್ಬಾದ್ ಪೋಲಿಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ವಿನೋದ್ ಶವ ಮತ್ತು ಆತನು ಓಡಿಸುತ್ತಿದ್ದ ದ್ವಿಚಕ್ರವಾಹನ ಪತ್ತೆಯಾಗಿದೆ.

ವಿನೋದ್ ಓಡಿಸುತ್ತಿದ್ದ ದ್ವಿಚಕ್ರವಾಹನ
Related Stories
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ