AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲೇ ಅನ್ನಭಾಗ್ಯ ಅಕ್ಕಿ ದುರುಪಯೋಗ: ದಂಧೆಕೋರರಿಂದ ಮನೆ ಮನೆಗೆ ತೆರಳಿ ಅಕ್ಕಿ ಖರೀದಿ

ಯರಗನಹಳ್ಳಿ ಸೇರಿದಂತೆ ಮೈಸೂರಿನ ಹಲವು ಕಡೆ ಎಗ್ಗಿಲ್ಲದೆ ಅನ್ನಭಾಗ್ಯ ಅಕ್ಕಿಯನ್ನು ಖರೀದಿಸಿ, ಕಾಳಸಂತೆಯಲ್ಲಿ ಮಾರಾಟ ಮಾಡುವ ಜಾಲ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸ್ತಿದೆ. ಅಪ್ರಾಪ್ತರನ್ನೇ ದಂಧೆಗೆ ಇಳಿಸಿದ್ದು, ಬಾಲಕರು ಆಟೋ, ಬೈಕ್​ಗಳಲ್ಲಿ ಬಂದು ಅನ್ನಭಾಗ್ಯ ಅಕ್ಕಿಯನ್ನ ಕೆಜಿಗೆ 15 ರೂಪಾಯಿಯಂತೆ ಖರೀದಿ ಮಾಡ್ತಿದ್ದಾರೆ. ಕಾಳಸಂತೆಯಲ್ಲಿ 50-60 ರೂಪಾಯಿಗೆ ಮಾರಾಟ ಮಾಡ್ತಿದ್ದಾರೆ.

ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲೇ ಅನ್ನಭಾಗ್ಯ ಅಕ್ಕಿ ದುರುಪಯೋಗ: ದಂಧೆಕೋರರಿಂದ ಮನೆ ಮನೆಗೆ ತೆರಳಿ ಅಕ್ಕಿ ಖರೀದಿ
ಅನ್ನಭಾಗ್ಯ ಅಕ್ಕಿ
ರಾಮ್​, ಮೈಸೂರು
| Edited By: |

Updated on: Nov 14, 2023 | 9:37 PM

Share

ಮೈಸೂರು, ನವೆಂಬರ್ 14: ಬೈಕ್ ಏರಿ ಏರಿಯಾ ಏರಿಯಾದಲ್ಲೂ ಓಡಾಡುತ್ತಿದ್ದಾರೆ. ಮನೆ ಬಾಗಿಲಲ್ಲೇ ತೂಕ ಹಾಕಿ ಅಕ್ಕಿ (Rice) ಖರೀದಿ ಮಾಡುತ್ತಿದ್ದಾರೆ. ಆಟೋಗಳಲ್ಲೂ ಮೂಟೆಗಟ್ಟಲೇ ಅಕ್ಕಿ ಸಾಗಾಟವಾಗ್ತಿದೆ. ಬಡವರು ಹೊಟ್ಟೆ ತುಂಬಾ ಊಟ ಮಾಡಲಿ ಎಂದು ಸರ್ಕಾರ ಕೊಡುತ್ತಿರುವ ಅನ್ನಭಾಗ್ಯ ಅಕ್ಕಿಯಲ್ಲೇ (Anna Bhagya Rice) ಅಕ್ರಮವಾಗಿ ಹಣ ಮಾಡುತ್ತಿದ್ದಾರೆ. ಹೌದು, ಸಿಎಂ ಸಿದ್ದರಾಮಯ್ಯ (Siddaramaiah) ಅವರ ತವರು ಜಿಲ್ಲೆ ಮೈಸೂರಿನಲ್ಲೇ ಇಂಥದ್ದೊಂದು ದಂಧೆ ಎಗ್ಗಿಲ್ಲದೇ ನಡೆಯುತ್ತಿದೆ.

ಯಾರೊಬ್ಬರೂ ಹಸಿವಿನಿಂದ ಇರಬಾರದು ಅಂತ ಸಿಎಂ ಸಿದ್ದರಾಮಯ್ಯ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದ್ದಾರೆ. ಕೇಂದ್ರ ಸರ್ಕಾರ 5 ಕೆಜಿ ಅಕ್ಕಿಯನ್ನ ಉಚಿತವಾಗಿ ಕೊಡ್ತಿದೆ. ರಾಜ್ಯ ಸರ್ಕಾರ 5 ಕೆಜಿ ಅಕ್ಕಿ ಬದಲು ಹಣವನ್ನು ಜನರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡುತ್ತಿದೆ. ಆದರೆ, ದಂಧೆಕೋರರು ಅನ್ನಭಾಗ್ಯ ಅನ್ನಕ್ಕೆ ಕನ್ನ ಹಾಕ್ತಿದ್ದಾರೆ. ಅದೂ ಸಿಎಂ ತವರು ಜಿಲ್ಲೆ ಮೈಸೂರಿನಲ್ಲೇ.

ಯರಗನಹಳ್ಳಿ ಸೇರಿದಂತೆ ಮೈಸೂರಿನ ಹಲವು ಕಡೆ ಎಗ್ಗಿಲ್ಲದೆ ಅನ್ನಭಾಗ್ಯ ಅಕ್ಕಿಯನ್ನು ಖರೀದಿಸಿ, ಕಾಳಸಂತೆಯಲ್ಲಿ ಮಾರಾಟ ಮಾಡುವ ಜಾಲ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸ್ತಿದೆ. ಅಪ್ರಾಪ್ತರನ್ನೇ ದಂಧೆಗೆ ಇಳಿಸಿದ್ದು, ಬಾಲಕರು ಆಟೋ, ಬೈಕ್​ಗಳಲ್ಲಿ ಬಂದು ಅನ್ನಭಾಗ್ಯ ಅಕ್ಕಿಯನ್ನ ಕೆಜಿಗೆ 15 ರೂಪಾಯಿಯಂತೆ ಖರೀದಿ ಮಾಡ್ತಿದ್ದಾರೆ. ಕಾಳಸಂತೆಯಲ್ಲಿ 50-60 ರೂಪಾಯಿಗೆ ಮಾರಾಟ ಮಾಡ್ತಿದ್ದಾರೆ. ಇದೇ ಅಕ್ಕಿ ಹೋಟೆಲ್​ಗಳಿಗೂ ಸರಬರಾಜಾಗ್ತಿದೆ.

5, 36, 37, 38ನೇ ವಾರ್ಡ್​ಗಳಲ್ಲಿ ಕಳೆದ 3-4 ತಿಂಗಳಿನಿಂದ ಈ ದಂಧೆ ಎಗ್ಗಿಲ್ಲದೆ ನಡೀತಿದೆ. ಆಟೋಗಳಲ್ಲಿ ಗುಜರಿ ವ್ಯಾಪಾರದ ಹೆಸ್ರಲ್ಲಿ ಬರೋ ಹುಡುಗರು ಅಕ್ಕಿ ಖರೀದಿಸಿ ಹೋಗ್ತಿದ್ದಾರೆ.

ಇದನ್ನೂ ಓದಿ: ಅಕ್ಕಿ ಕಳ್ಳರ ವಿರುದ್ಧ ಸಮರ ಸಾರಿದ ಆಹಾರ ಇಲಾಖೆ, ಅಕ್ರಮ ಅಕ್ಕಿ ಸಾಗಾಟಗಾರರ ಗಡಿಪಾರಿಗೆ ಪ್ಲ್ಯಾನ್​​

ಮತ್ತೊಂದೆಡೆ, ಬೆಂಗಳೂರಿನಲ್ಲಿ ಕೂಡ ಅನ್ನಭಾಗ್ಯ ಅಕ್ಕಿ ಕಳ್ಳಸಾಗಣೆ ವೇಳೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಹೊಸಕೆರೆಹಳ್ಳಿ ಕೆಇಬಿ ಜಂಕ್ಷನ್ ಬಳಿ ಅಕ್ಕಿ, ರಾಗಿಯನ್ನ ಅಕ್ರಮವಾಗಿ ಸಾಗಾಟ ಮಾಡುವಾಗ ರೆಡ್ ಹ್ಯಾಂಡ್ ಆಗಿ ಹಿಡಿದು ವಾಹನವನ್ನ ಸೀಜ್ ಮಾಡಿದ್ದಾರೆ. ಎರಡೂವರೆ ಟನ್ ಅಕ್ಕಿ ಮತ್ತು ರಾಗಿಯನ್ನ ವಶಕ್ಕೆ ಪಡೆದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ